AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಒಂದು ದಿನದ ಮಟ್ಟಿಗೆ ತಮ್ಮ ಪ್ರೀತಿಯ ವಸ್ತುವನ್ನು ಆಮಿರ್​ ಖಾನ್​ಗೆ ನೀಡಿದ ಸಲ್ಮಾನ್​ ಖಾನ್​

Salman Khan Bracelet: ಆಮಿರ್ ಖಾನ್​ ಮತ್ತು ಸಲ್ಮಾನ್​ ಖಾನ್​ ನಡುವೆ ಉತ್ತಮ ಗೆಳೆತನ ಇದೆ. ಅವರಿಬ್ಬರ ಸ್ನೇಹಕ್ಕೆ ಸಾಕ್ಷಿ ಒದಗಿಸುವಂತಹ ಹೊಸ ಘಟನೆ ನಡೆದಿದೆ.

Salman Khan: ಒಂದು ದಿನದ ಮಟ್ಟಿಗೆ ತಮ್ಮ ಪ್ರೀತಿಯ ವಸ್ತುವನ್ನು ಆಮಿರ್​ ಖಾನ್​ಗೆ ನೀಡಿದ ಸಲ್ಮಾನ್​ ಖಾನ್​
ಸಲ್ಮಾನ್ ಖಾನ್
ಮದನ್​ ಕುಮಾರ್​
|

Updated on: Apr 24, 2023 | 7:00 AM

Share

ನಟ ಸಲ್ಮಾನ್​ ಖಾನ್​ (Salman Khan) ಅವರು ಹಲವು ಕಾರಣಗಳಿಂದಾಗಿ ಸುದ್ದಿ ಆಗುತ್ತಾರೆ. ಅವರು ಎಲ್ಲೇ ಹೋದರೂ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಅವರ ಫೋಟೋ ಮತ್ತು ವಿಡಿಯೋಗಳು ಆಗಾಗ ವೈರಲ್​ ಆಗುತ್ತವೆ. ಪ್ರತಿ ಬಾರಿ ಸಲ್ಮಾನ್​ ಖಾನ್​ ಸಾರ್ವಜನಿಕವಾಗಿ ಕಾಣಿಸಿಕೊಂಡಾಗಲೂ ಅವರನ್ನು ಅಭಿಮಾನಿಗಳು ಸೂಕ್ಷ್ಮವಾಗಿ ಗಮನಿಸುತ್ತಾರೆ. ಅವರ ಕೈಯಲ್ಲಿ ಯಾವಾಗಲೂ ಒಂದು ಬ್ರೇಸ್ಲೆಟ್​ (Salman Khan Bracelet) ಇರುತ್ತದೆ. ಇದನ್ನು ಅದೃಷ್ಟದ ಸಂಕೇತ ಎಂದೇ ಸಲ್ಮಾನ್​ ಖಾನ್​ ಭಾವಿಸುತ್ತಾರೆ. ಸಿನಿಮಾಗಳಲ್ಲೂ ಕೂಡ ಅವರು ಅದನ್ನು ಧರಿಸುತ್ತಾರೆ. ಅಚ್ಚರಿ ಎಂದರೆ ತಮ್ಮ ಈ ಪ್ರೀತಿಯ ವಸ್ತುವನ್ನು ಅವರು ಒಂದು ದಿನದ ಮಟ್ಟಿಗೆ ಆಮಿರ್​ ಖಾನ್​ಗೆ ನೀಡಿದ್ದರು. ಇತ್ತೀಚೆಗೆ ಆಮಿರ್​ ಖಾನ್​ (Aamir Khan) ಕೈಯಲ್ಲಿ ಈ ಬ್ರೇಸ್ಲೆಟ್​ ಕಾಣಿಸಿದೆ. ಈ ಬದಲಾವಣೆಗೆ ಕಾರಣ ಏನು ಎಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ.

ಆಮಿರ್ ಖಾನ್​ ಮತ್ತು ಸಲ್ಮಾನ್​ ಖಾನ್​ ನಡುವೆ ಉತ್ತಮ ಗೆಳೆತನ ಇದೆ. ಇತ್ತೀಚೆಗೆ ಇಬ್ಬರೂ ಜೊತೆಯಾಗಿ ಇರುವ ಫೋಟೋವನ್ನು ಸಲ್ಮಾನ್​ ಖಾನ್​ ಶೇರ್​ ಮಾಡಿಕೊಂಡಿದ್ದರು. ಅದರ ಮರುದಿನವೇ ಸಲ್ಲು ಸಹೋದರಿ ಅರ್ಪಿತಾ ಖಾನ್ ಆಯೋಜಿಸಿದ್ದ ಈದ್​ ಪಾರ್ಟಿಗೆ ಆಮಿರ್​ ಖಾನ್​ ಹಾಜರಿ ಹಾಕಿದ್ದಾರೆ. ಆಗ ಪಾಪರಾಜಿಗಳಿಗೆ ಪೋಸ್​ ನೀಡಿದ ಅವರ ಕೈಯಲ್ಲಿ ಬ್ರೇಸ್ಲೆಟ್​ ಕಾಣಿಸಿದೆ. ‘ಇದು ಸಲ್ಲು ಭಾಯ್​ ಬ್ರೇಸ್ಲೆಟ್​’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Yash: ಯಶ್​ ಗೆಟಪ್​ ಕಾಪಿ ಮಾಡಿದ್ರಾ ಸಲ್ಮಾನ್​ ಖಾನ್​; ಬಿ-ಟೌನ್​ ತುಂಬ ಹಬ್ಬಿದೆ ಈ ಮಾತು
Image
Salman Khan: ಗನ್​ ಇಟ್ಟುಕೊಳ್ಳಲು ಸಲ್ಮಾನ್​ ಖಾನ್​ಗೆ ಸಿಕ್ತು ಲೈಸೆನ್ಸ್​; ಕೊಲೆ ಬೆದರಿಕೆ ಬೆನ್ನಲ್ಲೇ ವಿಶೇಷ ಅನುಮತಿ
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
ಅವಕಾಶ ಇಲ್ಲದಾಗ 2 ಸಾವಿರ ರೂ. ಕೊಟ್ಟು ಸುಳ್ಳು ಸುದ್ದಿ ಮಾಡಿಸಿದ್ದ ಸಲ್ಮಾನ್​ ಖಾನ್​; ಒಪ್ಪಿಕೊಂಡು ಕಣ್ಣೀರಿಟ್ಟ ನಟ

ಇದನ್ನೂ ಓದಿ: ಹೊಸ ಚಿತ್ರಕ್ಕಾಗಿ ಒಂದಾದ ಸಲ್ಮಾನ್ ಖಾನ್-ಆಮಿರ್​ ಖಾನ್; ಬಿಗ್ ಬಜೆಟ್ ಚಿತ್ರಕ್ಕೆ ಶೀಘ್ರವೇ ಮುಹೂರ್ತ?

ಪಾರ್ಟಿ ಮುಗಿಸಿ ವಾಪಸ್​ ಹೊರಡುವಾಗ ಆಮಿರ್​ ಖಾನ್​ ಕೈಯಲ್ಲಿ ಆ ಬ್ರೇಸ್ಲೆಟ್​ ಕಾಣಿಸಲಿಲ್ಲ. ಅದನ್ನು ಪುನಃ ಅವರು ಸಲ್ಮಾನ್​ ಖಾನ್​ಗೆ ನೀಡಿದ್ದಾರೆ ಎಂದು ಫ್ಯಾನ್ಸ್​ ಊಹಿಸಿದ್ದಾರೆ. ಒಟ್ಟಿನಲ್ಲಿ ತಮ್ಮ ಪಾಲಿನ ಅದೃಷ್ಟದ ವಸ್ತುವನ್ನು ಆತ್ಮೀಯ ಗೆಳೆಯನಿಗೆ ಸಲ್ಲು ಯಾಕೆ ನೀಡಿದ್ದರು ಎಂಬ ಬಗ್ಗೆ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಮ್ಯಾಜಿಕ್​ ಮಾಡಿದ ಸಲ್ಲು ಹೊಸ ಸಿನಿಮಾ:

ಸಲ್ಮಾನ್ ಖಾನ್​ ಅವರು ನಟಿಸಿರುವ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಏಪ್ರಿಲ್​ 21ರಂದು ಬಿಡುಗಡೆಯಾಗಿ ಸಾಧಾರಣ ಗಳಿಕೆ ಮಾಡಿತು. ಮೊದಲ ದಿನ ಈ ಚಿತ್ರಕ್ಕೆ ಕೇವಲ 15.81 ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಆದರೆ ಎರಡನೇ ದಿನ ಬಿಸ್ನೆಸ್​ ಹೆಚ್ಚಾಗಿದೆ. ಶನಿವಾರ (ಏಪ್ರಿಲ್​ 22) ಈ ಸಿನಿಮಾ ಬರೋಬ್ಬರಿ 25.75 ಕೋಟಿ ರೂಪಾಯಿ ಬಾಚಿಕೊಂಡಿದೆ. ಭಾನುವಾರ ಕೂಡ ಉತ್ತಮ ಪ್ರದರ್ಶನ ಕಂಡಿದೆ. ಆ ಮೂಲಕ ಶೀಘ್ರದಲ್ಲೇ 100 ಕೋಟಿ ರೂಪಾಯಿ ಕಲೆಕ್ಷನ್​ ಆಗುವ ಸೂಚನೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!