AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಆಮಿರ್ ಖಾನ್ ಅವರು ಕಾಡು ಮನುಷ್ಯನಂತೆ ವೇಷ ಧರಿಸಿ ಮುಂಬೈ ಬೀದಿಗಳಲ್ಲಿ ಸುತ್ತಾಡಿದ್ದಾರೆ. ಈ ರಹಸ್ಯ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವು ಅಭಿಮಾನಿಗಳು ಅವರನ್ನು ಮೆಚ್ಚಿದರೆ, ಇನ್ನು ಕೆಲವರು ಅವರ ಈ ಕ್ರಮವನ್ನು ಟೀಕಿಸಿದ್ದಾರೆ. ‘ಲಾಲ್ ಸಿಂಗ್ ಚಡ್ಡಾ’ ಚಿತ್ರದ ವೈಫಲ್ಯದ ನಂತರ, ಆಮಿರ್ ಖಾನ್ ‘ಸಿತಾರೆ ಜಮೀನ್​ಪರ್’ ಚಿತ್ರದ ಮೇಲೆ ಗಮನ ಹರಿಸಿದ್ದಾರೆ.

ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್
ಆಮಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on: Feb 01, 2025 | 8:38 AM

Share

ಆಮಿರ್ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್​ನಲ್ಲಿ ಇದ್ದಾರೆ. ಇದಕ್ಕೆ ಕಾರಣ ಆಗಿರೋದು ಅವರ ವೇಷ. ಕಾಡು ಮನುಷ್ಯನ ರೀತಿಯಲ್ಲಿ ವೇಷ ಧರಿಸಿ ಮುಂಬೈ ಬೀದಿಗಳಲ್ಲಿ ಅವರು ಸುತ್ತಾಡಿದ್ದರು. ಅಷ್ಟೇ ಅಲ್ಲ ಅವರು ಭರ್ಜರಿ ಡ್ಯಾನ್ಸ್ ಕೂಡ ಮಾಡಿದ್ದರು. ಅವರು ಇಷ್ಟೆಲ್ಲ ಮಾಡಿದ್ದು ಹಣಕ್ಕಾಗಿ! ಹೀಗೊಂದು ವಿಚಾರ ಈಗ ರಿವೀಲ್ ಆಗಿದೆ. ಇದು ತಿಳಿದ ಬಳಿಕ ಫ್ಯಾನ್ಸ್ ಆಮಿರ್ ಖಾನ್ ವಿರುದ್ಧ ಅಸಮಾಧಾನ ಹೊರಹಾಕುತ್ತಾ ಇದ್ದಾರೆ.

ಆಮಿರ್ ಖಾನ್ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರ ಮಾಡುತ್ತಾರೆ. ಇದರ ಪ್ರಚಾರದ ಭಾಗವಾಗಿ ಅವರು ಈ ರೀತಿ ವೇಷ ಧರಿಸಿದ್ದಾರೆ. ಹೌದು, ಕೋಕಾ ಕೋಲಾ ಇಂಡಿಯಾ ‘ಚಾರ್ಜ್ಡ್​’ ಹೆಸರಿನ ಪಾನೀಯವನ್ನು ಪರಿಚಯಿಸಿದೆ. ಇದರ ಪ್ರಮೋಷನ್​ಗೆ ಆಮಿರ್ ಖಾನ್ ಅವರನ್ನು ಸಂಸ್ಥೆ ಬಳಸಿಕೊಂಡಿದೆ. ಇದನ್ನು ಕುಡಿದ ಬಳಿಕ ಭಿನ್ನವಾಗಿ ಡ್ಯಾನ್ಸ್ ಮಾಡುವ ರೀತಿಯಲ್ಲಿ ತೋರಿಸಲಾಗಿದೆ.

ಆಮಿರ್ ಖಾನ್ ಅವರು ಮುಂಬೈ ಬೀದಿಯಲ್ಲಿ ಭಿನ್ನ ವೇಷ ತೊಟ್ಟು ತಿರುಗಾಡುವಾಗ ಯಾರೊಬ್ಬರಿಗೂ ಅದು ಆಮಿರ್ ಖಾನ್ ಎಂಬುದು ತಿಳಿಯಲಿಲ್ಲ. ಅವರನ್ನು ಯಾರು ಗುರತಿಸಲೂ ಇಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರ ಫೋಟೋ ಹಂಚಿಕೊಂಡಾಗ ಈ ವಿಚಾರ ರಿವೀಲ್ ಆಯಿತು. ಆ ಬಳಿಕ ಆಮಿರ್ ಖಾನ್​ನ ಭೇಟಿ ಮಾಡುವ ಅವಕಾಶ ತಪ್ಪಿಸಿಕೊಂಡಿದ್ದಕ್ಕೆ ಬೇಸರ ಮಾಡಿಕೊಂಡರು.

View this post on Instagram

A post shared by Voompla (@voompla)

ಇನ್ನೂ ಕೆಲವರು ಆಮಿರ್ ಖಾನ್ ಅವರನ್ನು ಟೀಕೆ ಮಾಡಿದ್ದಾರೆ. ‘ಸಿನಿಮಾ ಅಂತೂ ನಡೆಯುತ್ತಿಲ್ಲ. ಈ ರೀತಿಯಾಗಿ ದುಡ್ಡು ಮಾಡುವ ಕೆಲಸ ಆಗಿದೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಕಾನ್ಸೆಪ್ಟ್​ನ ಇಷ್ಟಪಟ್ಟಿದ್ದು, ಬ್ರ್ಯಾಂಡ್​ಗೆ ಭರ್ಜರಿ ಪ್ರಚಾರ ಸಿಕ್ಕಿದೆ ಎನ್ನುವ ಅಭಿಪ್ರಾಯ ಹೊರಹಾಕಿದ್ದಾರೆ.

ಇದನ್ನೂ ಓದಿ: ಭಿಕ್ಷುಕನ ವೇಷತೊಟ್ಟು ಮುಂಬೈ ಬೀದಿಗಳಲ್ಲಿ ತಿರುಗಿದ ಸೂಪರ್ ಸ್ಟಾರ್

‘ಲಾಲ್ ಸಿಂಗ್ ಚಡ್ಡಾ’ ಸೋಲಿನ ಬಳಿಕ ಆಮಿರ್ ಖಾನ್ ಅವರು  ಸೈಲೆಂಟ್ ಆದರು. ನಟನೆಯಿಂದ ಒಂದು ಬ್ರೇಕ್ ಪಡೆದರು. ಈಗ ಅವರ ಸಂಪೂರ್ಣ ಗಮನ ‘ಸಿತಾರೆ ಜಮೀನ್​ಪರ್’ ಸಿನಿಮಾ ಮೇಲೆ ಇದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್