AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರಾಧ್ಯಾ ನನ್ನ ಮಗಳು, ಭಾವನೆಗಳು ಅರ್ಥವಾಗುತ್ತವೆ’; ನೇರ ಮಾತಲ್ಲಿ ಹೇಳಿದ ಅಭಿಷೇಕ್  

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ವಿಚ್ಛೇದನದ ವದಂತಿಗಳು ನಿಲ್ಲದೆ ಹರಡುತ್ತಿವೆ. ಇತ್ತೀಚೆಗೆ ಆರಾಧ್ಯಾಳ ಜನ್ಮದಿನಾಚರಣೆಯಲ್ಲಿ ಅಭಿಷೇಕ್ ಇರದಿರುವುದು ಈ ವದಂತಿಗಳನ್ನು ಇನ್ನಷ್ಟು ಬಲಪಡಿಸಿದೆ. ಅಭಿಷೇಕ್ ತಮ್ಮ ಹೊಸ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಮಗಳ ಬಗ್ಗೆ ಮಾತನಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

‘ಆರಾಧ್ಯಾ ನನ್ನ ಮಗಳು, ಭಾವನೆಗಳು ಅರ್ಥವಾಗುತ್ತವೆ’; ನೇರ ಮಾತಲ್ಲಿ ಹೇಳಿದ ಅಭಿಷೇಕ್  
ಆರಾಧ್ಯಾ-ಅಭಿಷೇಕ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 23, 2024 | 7:50 AM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ನಿಲ್ಲುವುದಲ್ಲ. ಅವರು ಒಟ್ಟಾಗಿ ಕಾಣಿಸಿಕೊಂಡು ಈ ವದಂತಿಗೆ ಬ್ರೇಕ್ ಹಾಕುವವರೆಗೆ ಈ ಸುದ್ದಿ ಹರಿದಾಡುತ್ತಲೇ ಇರುತ್ತದೆ. ಇತ್ತೀಚೆಗೆ ಆರಾಧ್ಯಾ ಅವರು ಬರ್ತ್​ಡೇ ಆಚರಿಸಿಕೊಂಡಿದ್ದರು. ಆದರೆ, ಅಲ್ಲಿ ಅಭಿಷೇಕ್ ಇರಲಿಲ್ಲ. ಈಗ ಅವರು ಮಗಳ ಬಗ್ಗೆ ಕಮೆಂಟ್ ಒಂದನ್ನು ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾ ಅವರಿಂದ ದೂರವೇ ಇದ್ದಾರೆ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಇನ್ನು ಆರಾಧ್ಯಾ ಅವರನ್ನು ಸಾಕುವ ಜವಾಬ್ದಾರಿ ಕೂಡ ಐಶ್ವರ್ಯಾ ಹೆಗಲಿಗೆ ಬಿದ್ದಿದೆ ಎನ್ನಬಹುದು. ಆರಾಧ್ಯಾ ಇತ್ತೀಚೆಗೆ ತಂದೆಯಿಂದ ದೂರ ಇರುವುದೇ ಇದಕ್ಕೆ ಕಾರಣ. ಅವರು ಎಲ್ಲಿಯೂ ಅಭಿಷೇಕ್ ಜೊತೆ ಕಾಣಿಸಿಕೊಂಡಿಲ್ಲ ಹೀಗಿರುವಾಗಲೇ, ಅಭಿಷೇಕ್ ಅವರು ಮಗಳ ಬಗ್ಗೆ ಮಾತನಾಡಿದ್ದಾರೆ.

ಅಭಿಷೇಕ್ ಬಚ್ಚನ್ ಅವರು ‘ಐ ವಾಂಟ್ ಟು ಟಾಕ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ನವೆಂಬರ್ 22ರಂದು ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮಕ್ಕೆ ಬಂದಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಮಗಳ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಅರ್ಜುನ್ ಸೇನ್ ಹೆಸರಿನ ಪಾತ್ರ ಮಾಡಿದ್ದಾರೆ. ತಾಯಿ ಇಲ್ಲದೆ ಸಿಂಗಲ್ ಪೇರೆಂಟ್ ಆಗಿ ಮಗಳನ್ನು ಸಾಕುವ ಜವಾಬ್ದಾರಿ ಅವರಿಗೆ ಬರುತ್ತದೆ. ಇದು ಸಿನಿಮಾದ ಕಥೆ. ಇದೇ ವಿಚಾರವಾಗಿ ಅವರು ಮಾತನಾಡಿದ್ದಾರೆ.

‘ಆರಾಧ್ಯಾ ನನ್ನ ಮಗಳು. ಶೂಜಿತ್ (ಸಿನಿಮಾ ನಿರ್ದೇಶಕ) ಅವರಿಗೆ ಇಬ್ಬರು ಹೆಣ್ಣು ಮಕ್ಕಳು. ನಾವು ಹೆಣ್ಣು ಮಕ್ಕಳ ಅಪ್ಪಂದಿರು. ನಮಗೆ ಭಾವನೆಗಳು ಅರ್ಥ ಆಗುತ್ತದೆ’ ಎಂದು ಅಭಿಷೇಕ್ ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ: ಹೇಗಿತ್ತು ನೋಡಿ ಆರಾಧ್ಯಾ ಬರ್ತ್​ಡೇ ಸೆಲೆಬ್ರೇಷನ್; ಬಚ್ಚನ್ ಕುಟುಂಬದವರಿಗಿಲ್ಲ ಆಹ್ವಾನ

ಅಭಿಷೇಕ್ ಹಾಗೂ ಐಶ್ವರ್ಯಾ ಬಗ್ಗೆ ಹುಟ್ಟಿರುವುದು ಕೇವಲ ವದಂತಿ ಎಂದು ಅಮಿತಾಭ್ ಬಚ್ಚನ್ ಸ್ಪಷ್ಟನೆ ನೀಡಿದ್ದಾರೆ. ಇಬ್ಬರೂ ಒಟ್ಟಾಗಿ ಇದ್ದಾರೆ ಎಂದಾದರೆ ಅವರು ಎಲ್ಲಿಯೂ ಏಕೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ಅನೇಕರ ಪ್ರಶ್ನೆ. ಈ ಪ್ರಶ್ನೆಗೆ ಈ ವರೆಗೆ ಉತ್ತರ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್