AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರಾಧ್ಯಾ ನನ್ನ ಮಗಳು, ಭಾವನೆಗಳು ಅರ್ಥವಾಗುತ್ತವೆ’; ನೇರ ಮಾತಲ್ಲಿ ಹೇಳಿದ ಅಭಿಷೇಕ್  

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ವಿಚ್ಛೇದನದ ವದಂತಿಗಳು ನಿಲ್ಲದೆ ಹರಡುತ್ತಿವೆ. ಇತ್ತೀಚೆಗೆ ಆರಾಧ್ಯಾಳ ಜನ್ಮದಿನಾಚರಣೆಯಲ್ಲಿ ಅಭಿಷೇಕ್ ಇರದಿರುವುದು ಈ ವದಂತಿಗಳನ್ನು ಇನ್ನಷ್ಟು ಬಲಪಡಿಸಿದೆ. ಅಭಿಷೇಕ್ ತಮ್ಮ ಹೊಸ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಮಗಳ ಬಗ್ಗೆ ಮಾತನಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

‘ಆರಾಧ್ಯಾ ನನ್ನ ಮಗಳು, ಭಾವನೆಗಳು ಅರ್ಥವಾಗುತ್ತವೆ’; ನೇರ ಮಾತಲ್ಲಿ ಹೇಳಿದ ಅಭಿಷೇಕ್  
ಆರಾಧ್ಯಾ-ಅಭಿಷೇಕ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 23, 2024 | 7:50 AM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ನಿಲ್ಲುವುದಲ್ಲ. ಅವರು ಒಟ್ಟಾಗಿ ಕಾಣಿಸಿಕೊಂಡು ಈ ವದಂತಿಗೆ ಬ್ರೇಕ್ ಹಾಕುವವರೆಗೆ ಈ ಸುದ್ದಿ ಹರಿದಾಡುತ್ತಲೇ ಇರುತ್ತದೆ. ಇತ್ತೀಚೆಗೆ ಆರಾಧ್ಯಾ ಅವರು ಬರ್ತ್​ಡೇ ಆಚರಿಸಿಕೊಂಡಿದ್ದರು. ಆದರೆ, ಅಲ್ಲಿ ಅಭಿಷೇಕ್ ಇರಲಿಲ್ಲ. ಈಗ ಅವರು ಮಗಳ ಬಗ್ಗೆ ಕಮೆಂಟ್ ಒಂದನ್ನು ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾ ಅವರಿಂದ ದೂರವೇ ಇದ್ದಾರೆ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಇನ್ನು ಆರಾಧ್ಯಾ ಅವರನ್ನು ಸಾಕುವ ಜವಾಬ್ದಾರಿ ಕೂಡ ಐಶ್ವರ್ಯಾ ಹೆಗಲಿಗೆ ಬಿದ್ದಿದೆ ಎನ್ನಬಹುದು. ಆರಾಧ್ಯಾ ಇತ್ತೀಚೆಗೆ ತಂದೆಯಿಂದ ದೂರ ಇರುವುದೇ ಇದಕ್ಕೆ ಕಾರಣ. ಅವರು ಎಲ್ಲಿಯೂ ಅಭಿಷೇಕ್ ಜೊತೆ ಕಾಣಿಸಿಕೊಂಡಿಲ್ಲ ಹೀಗಿರುವಾಗಲೇ, ಅಭಿಷೇಕ್ ಅವರು ಮಗಳ ಬಗ್ಗೆ ಮಾತನಾಡಿದ್ದಾರೆ.

ಅಭಿಷೇಕ್ ಬಚ್ಚನ್ ಅವರು ‘ಐ ವಾಂಟ್ ಟು ಟಾಕ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ನವೆಂಬರ್ 22ರಂದು ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮಕ್ಕೆ ಬಂದಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಮಗಳ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಅರ್ಜುನ್ ಸೇನ್ ಹೆಸರಿನ ಪಾತ್ರ ಮಾಡಿದ್ದಾರೆ. ತಾಯಿ ಇಲ್ಲದೆ ಸಿಂಗಲ್ ಪೇರೆಂಟ್ ಆಗಿ ಮಗಳನ್ನು ಸಾಕುವ ಜವಾಬ್ದಾರಿ ಅವರಿಗೆ ಬರುತ್ತದೆ. ಇದು ಸಿನಿಮಾದ ಕಥೆ. ಇದೇ ವಿಚಾರವಾಗಿ ಅವರು ಮಾತನಾಡಿದ್ದಾರೆ.

‘ಆರಾಧ್ಯಾ ನನ್ನ ಮಗಳು. ಶೂಜಿತ್ (ಸಿನಿಮಾ ನಿರ್ದೇಶಕ) ಅವರಿಗೆ ಇಬ್ಬರು ಹೆಣ್ಣು ಮಕ್ಕಳು. ನಾವು ಹೆಣ್ಣು ಮಕ್ಕಳ ಅಪ್ಪಂದಿರು. ನಮಗೆ ಭಾವನೆಗಳು ಅರ್ಥ ಆಗುತ್ತದೆ’ ಎಂದು ಅಭಿಷೇಕ್ ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ: ಹೇಗಿತ್ತು ನೋಡಿ ಆರಾಧ್ಯಾ ಬರ್ತ್​ಡೇ ಸೆಲೆಬ್ರೇಷನ್; ಬಚ್ಚನ್ ಕುಟುಂಬದವರಿಗಿಲ್ಲ ಆಹ್ವಾನ

ಅಭಿಷೇಕ್ ಹಾಗೂ ಐಶ್ವರ್ಯಾ ಬಗ್ಗೆ ಹುಟ್ಟಿರುವುದು ಕೇವಲ ವದಂತಿ ಎಂದು ಅಮಿತಾಭ್ ಬಚ್ಚನ್ ಸ್ಪಷ್ಟನೆ ನೀಡಿದ್ದಾರೆ. ಇಬ್ಬರೂ ಒಟ್ಟಾಗಿ ಇದ್ದಾರೆ ಎಂದಾದರೆ ಅವರು ಎಲ್ಲಿಯೂ ಏಕೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ಅನೇಕರ ಪ್ರಶ್ನೆ. ಈ ಪ್ರಶ್ನೆಗೆ ಈ ವರೆಗೆ ಉತ್ತರ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?