AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಜೊತೆ ನಟಿಸಲು ಬಹಳ ಆತಂಕಿತರಾಗಿದ್ದ ಆಯುಷ್ ಶರ್ಮಾ; ಇದಕ್ಕೆ ನೆಪೋಟಿಸಂ ಅಪವಾದವೂ ಕಾರಣವಂತೆ!

Salman Khan | Aayush Sharma: ಬಾಲಿವುಡ್ ನಟ ಸಲ್ಮಾನ್ ಖಾನ್ ತಂಗಿ ಅರ್ಪಿತಾ ಖಾನ್ ಪತಿ ಆಯುಷ್ ಶರ್ಮಾ, ಹಲವು ಅಚ್ಚರಿಯ ವಿಚಾರಗಳನ್ನು ಮುಂದಿಟ್ಟಿದ್ದಾರೆ. ಅದರಲ್ಲಿ ಅವರು, ‘ಅಂತಿಮ್’ ಚಿತ್ರ ಒಪ್ಪಿಕೊಳ್ಳುವ ಮುನ್ನ ಎದುರಿಸಿದ ತಲ್ಲಣಗಳನ್ನು ಹೇಳಿಕೊಂಡಿದ್ದಾರೆ.

ಸಲ್ಮಾನ್ ಜೊತೆ ನಟಿಸಲು ಬಹಳ ಆತಂಕಿತರಾಗಿದ್ದ ಆಯುಷ್ ಶರ್ಮಾ; ಇದಕ್ಕೆ ನೆಪೋಟಿಸಂ ಅಪವಾದವೂ ಕಾರಣವಂತೆ!
ಆಯುಷ್ ಶರ್ಮಾ, ಸಲ್ಮಾನ್ ಖಾನ್
TV9 Web
| Updated By: shivaprasad.hs|

Updated on: Nov 18, 2021 | 8:32 AM

Share

ಬಾಲಿವುಡ್​​ನಲ್ಲಿ ಖ್ಯಾತ ಕುಟುಂಬದ ತಾರೆಯರು ಚಿತ್ರರಂಗಕ್ಕೆ ಪದಾರ್ಪಣೆ ಮಾಡುವುದು ಹೊಸದೇನಲ್ಲ. ಆದರೆ ಇದು ಕೆಲವೊಮ್ಮೆ ನೆಪೋಟಿಸಂ ಎಂಬ ಅಪವಾದಕ್ಕೂ ಕಾರಣವಾಗುತ್ತದೆ. ಆದ್ದರಿಂದಲೇ ಒಂದೇ ಕುಟುಂಬದ ಕಲಾವಿದರಿಗೆ ಚಿತ್ರರಂಗಕ್ಕರ ಕಾಲಿಡುವುದು, ಅದರಿಂದ ಎದುರಾಗಬಹುದಾದ ಆರೋಪಗಳನ್ನು ಹೊತ್ತುಕೊಳ್ಳುವುದು ಸುಲಭವಲ್ಲ. ಬಾಲಿವುಡ್​ನಲ್ಲಿ ಅಬ್ಬರಿಸಲು ಸಜ್ಜಾಗಿರುವ ಸಲ್ಮಾನ್ ಖಾನ್ ತಂಗಿ ಅರ್ಪಿತಾ ಖಾನ್ ಪತಿ ಆಯುಷ್ ಶರ್ಮಾ ಕೂಡ ಈ ಕುರಿತು ತಾವು ಎದುರಿಸಿದ್ದ ಆತಂಕವನ್ನು ಹಂಚಿಕೊಂಡಿದ್ದಾರೆ. ಮೊದಲಿಗೆ ಸಲ್ಮಾನ್ ಅವರ ಚಿತ್ರದಲ್ಲಿ ನಟಿಸುವುದಕ್ಕೆ ಹಿಂಜರಿಕೆ ಇತ್ತು. ಇದಕ್ಕೆ ನೆಪೋಟಿಸಂ ಕುರಿತ ಚರ್ಚೆಯ ಕಾರಣವೂ ಒಂದಾಗಿತ್ತು ಎಂದಿದ್ದಾರೆ. 

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಆಯುಷ್ ಶರ್ಮಾ ಈ ಕುರಿತು ಮುಕ್ತವಾಗಿ ಮಾತನಾಡಿದ್ದು, ‘‘ಈ ಕುರಿತು ನಾನು ಬಹಳ ಯೋಚಿಸಿದ್ದೆ ಎನ್ನುವುದನ್ನು ಅಲ್ಲಗಳೆಯುವುದಿಲ್ಲ. ಸಲ್ಮಾನ್​ಗೆ ಎದುರು ನಿಂತು ತೊಡೆ ತಟ್ಟುವುದು ಸುಲಭದ ಮಾತಲ್ಲ. ಆ ಪಾತ್ರದ ಮುಖಾಂತರ ಒಂದೇ ಬಾರಿಗೆ ನಾನು ಬಹಳ ದೂರ ಸಾಗಿ ಬಂದೆ. ಆದರೆ ಚಿತ್ರದ ಪ್ರಾರಂಭದ ಸಮಯದಲ್ಲಿ ನಾನು ಸಲ್ಮಾನ್ ನಟನೆಯ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಕುರಿತು ಆತಂಕಿತನಾಗಿದ್ದೆ. ಇದಕ್ಕೆ ಮುಖ್ಯ ಕಾರಣ, ಸಲ್ಮಾನ್ ಮತ್ತು ನಾನು ಕುಟುಂಬದವರಾಗಿರುವುದರಿಂದ ನನಗೆ ಸಹಾಯ ಮಾಡುತ್ತಿದ್ದಾರೆ. ನನ್ನ ವೃತ್ತಿ ಜೀವನಕ್ಕೆ ಅವರು ಸಹಾಯ ಮಾಡುತ್ತಿದ್ದಾರೆ ಮೊದಲಾದ ಚರ್ಚೆ ಹುಟ್ಟಿಕೊಳ್ಳಬಹುದು ಎಂಬ ಆತಂಕ ಇತ್ತು. ಇದರೊಂದಿಗೆ ನೆಪೋಟಿಸಂ ಕುರಿತೂ ಕೂಡ ಚರ್ಚೆಯಾಗಬಹುದೆಂದು ಯೋಚಿಸಿದ್ದೆ’’ ಎಂದಿದ್ದಾರೆ.

‘ಅಂತಿಮ್’ ಚಿತ್ರವು ಪಕ್ಕಾ ಆಕ್ಷನ್ ಚಿತ್ರವಾಗಿದ್ದು, ಆಯುಷ್ ಶರ್ಮಾ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಅವರು, ತನಗೆ ಆ ಪಾತ್ರಕ್ಕೆ ನ್ಯಾಯ ಸಲ್ಲಿಸಬಹುದಾ ಎಂಬ ಯೋಚನೆಗಳಿದ್ದವು. ಕಾರಣ, ‘ಲವ್​ ಯಾತ್ರಿ ಚಿತ್ರದ ಮೂಲಕ ಬೇರೆಯದೇ ಜಾನರ್​ನ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೆ. ಇದು ಸಂಪೂರ್ಣ ಬೇರೆಯದೇ ರೀತಿಯ ಚಿತ್ರವಾಗಿದೆ ಎಂದಿದ್ದರು.

‘ಅಂತಿಮ್’ ಚಿತ್ರದ ಟ್ರೈಲರ್ ಇಲ್ಲಿದೆ: ಅಂತಿಮ್ ಚಿತ್ರವನ್ನು ಮಹೇಶ್ ಮಾಂಜ್ರೇಕರ್ ನಿರ್ದೇಶಿಸಿದ್ದು, ಈಗಾಗಲೇ ಚಿತ್ರದ ಟ್ರೈಲರ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದಲ್ಲಿ ಸಲ್ಮಾನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

Antim Movie Trailer: ‘ಅಂತಿಮ್’​ ಟ್ರೇಲರ್​ನಲ್ಲಿ ಪೊಲೀಸ್​ ಆಗಿ ಮಿಂಚಿದ ಸಲ್ಮಾನ್​ ಖಾನ್​; ಸಲ್ಲು ಲುಕ್​ಗೆ ಫ್ಯಾನ್ಸ್​ ಫಿದಾ

ಹಸಿಬಿಸಿ ದೃಶ್ಯದಲ್ಲಿ ನಟಿಸುವಾಗ​ ನನ್ನ ಹೆಂಡತಿ ಕಣ್ಣೆದುರು ಬಂದಿದ್ದಳು ಎಂದ ಬಾಲಿವುಡ್​ ನಟ

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ