AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಬಾಲಕ ಈಗ ಸ್ಟಾರ್ ನಟ; ಯಾರೆಂದು ಪತ್ತೆ ಹಚ್ಚುತ್ತೀರಾ?

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸ್ಟಾರ್​ ಕಲಾವಿದರ ಬಾಲ್ಯದ ಫೋಟೋ ವೈರಲ್ ಆಗುತ್ತವೆ. ಕೆಲವು ಫೋಟೋಗಳನ್ನು ಸೆಲೆಬ್ರಿಟಿಗಳೇ ಶೇರ್ ಮಾಡಿಕೊಳ್ಳುತ್ತಾರೆ. ಇನ್ನೂ ಕೆಲವು ಫೋಟೋನ ಅವರ ಫ್ಯಾನ್ಸ್ ಹುಡುಕಿ ತೆಗೆಯುತ್ತಾರೆ. ಈಗ ಸ್ಟಾರ್ ಹೀರೋನ ಬಾಲ್ಯದ ಫೋಟೋ ಒಂದು ವೈರಲ್ ಆಗಿದೆ. ಇದನ್ನು ಹಂಚಿಕೊಂಡಿದ್ದು ಹೀರೋನ ಅಕ್ಕ.

ಈ ಫೋಟೋದಲ್ಲಿರುವ ಬಾಲಕ ಈಗ ಸ್ಟಾರ್ ನಟ; ಯಾರೆಂದು ಪತ್ತೆ ಹಚ್ಚುತ್ತೀರಾ?
ಸ್ಟಾರ್ ಹೀರೋನ ಬಾಲ್ಯದ ಫೋಟೋ
ರಾಜೇಶ್ ದುಗ್ಗುಮನೆ
|

Updated on:Feb 05, 2024 | 11:35 AM

Share

ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಸ್ಟಾರ್​ ಕಲಾವಿದರ ಬಾಲ್ಯದ ಫೋಟೋಗಳು ವೈರಲ್ ಆಗುತ್ತವೆ. ಕೆಲವು ಫೋಟೋಗಳನ್ನು ಸೆಲೆಬ್ರಿಟಿಗಳೇ ಶೇರ್ ಮಾಡಿಕೊಳ್ಳುತ್ತಾರೆ. ಇನ್ನೂ ಕೆಲವು ಫೋಟೋಗಳನ್ನು ಅವರ ಅಭಿಮಾನಿಗಳು ಹುಡುಕಿ ತೆಗೆಯುತ್ತಾರೆ. ಈಗ ಸ್ಟಾರ್ ಹೀರೋನ ಬಾಲ್ಯದ ಫೋಟೋ ಒಂದು ವೈರಲ್ ಆಗಿದೆ. ಇದನ್ನು ಹಂಚಿಕೊಂಡಿದ್ದು ಹೀರೋನ ಸಹೋದರಿ. ಅಂದಹಾಗೆ ಈ ಫೋಟೋದಲ್ಲಿ ಇರೋದು ಅಭಿಷೇಕ್ ಬಚ್ಚನ್ (Abhishek Bachchan). ಇಂದು (ಫೆಬ್ರವರಿ 5) ಅವರ ಬರ್ತ್​ಡೇ. ಆ ಪ್ರಯುಕ್ತ ಶ್ವೇತಾ ಬಚ್ಚನ್ ಅವರು ಬಾಲ್ಯದ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದಾರೆ.

ಇಂದು ಅಭಿಷೇಕ್ ಬಚ್ಚನ್ ಅವರಿಗೆ 48ನೇ ವರ್ಷದ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಅಭಿಮಾನಿಗಳ ಜೊತೆಗೆ ಅವರ ಕುಟುಂಬದವರು ಕೂಡ ಶುಭ ಕೋರುತ್ತಿದ್ದಾರೆ. ಅವರ ಸಾಧನೆಗಳನ್ನು ನೆನೆಯಲಾಗುತ್ತಿದೆ. ಅವರ ಬರ್ತ್​ಡೇನ ಶ್ವೇತಾ ಬಚ್ಚನ್ ಮತ್ತಷ್ಟು ವಿಶೇಷ ಗೊಳಿಸಿದ್ದಾರೆ. ಬಾಲ್ಯದ ಒಂದು ಮುದ್ದಾದ ಫೋಟೋನ ಶೇರ್ ಮಾಡಿಕೊಂಡಿದ್ದಾರೆ.

ಶ್ವೇತಾ ಬಚ್ಚನ್ ಅವರು ಬಾಲ್ಯದ ಫೋಟೋ ಪೋಸ್ಟ್ ಮಾಡಿದ್ದಾರೆ. ಇದು ಸುಮಾರು 4 ದಶಕಗಳಿಗಿಂತಲೂ ಹಿಂದಿನ ಫೋಟೋ. ಶ್ವೇತಾ ಹಾಗೂ ಅಭಿಷೇಕ್ ಒಟ್ಟಾಗಿ ಇರುವ ಫೋಟೋ ಇದಾಗಿದೆ. ಇಬ್ಬರೂ ಏನನ್ನೋ ತಿನ್ನುತ್ತಿದ್ದಾರೆ. ಶ್ವೇತಾ ಅವರು ಅಭಿಷೇಕ್​ನ ದಿಟ್ಟಿಸಿ ನೋಡುತ್ತಿದ್ದಾರೆ. ಅವರು ಶುಭಾಶಯ ಕೋರಿ ವಿಶ್ ಮಾಡಿದ್ದಾರೆ.

ಶ್ವೇತಾ ಬಚ್ಚನ್ ಮಾಡಿರೋ ಟ್ವೀಟ್..

View this post on Instagram

A post shared by S (@shwetabachchan)

ಶ್ವೇತಾ ಬಚ್ಚನ್ ಮಗಳು ನವ್ಯಾ ನವೇಲಿ ನಂದ ಕೂಡ ಅಭಿಷೇಕ್​ಗೆ ವಿಶ್ ಮಾಡಿದ್ದಾರೆ. ನಿರ್ದೇಶಕಿ ಜೋಯಾ ಅಖ್ತರ್, ನಟಿ ಸೋನಾಲಿ ಬೇಂದ್ರೆ ಮೊದಲಾದವರು ಶುಭಾಶಯ ತಿಳಿಸಿದ್ದಾರೆ. ಆದರೆ ಈವರೆಗೆ (ಫೆಬ್ರವರಿ 5 ಬೆಳಿಗ್ಗೆ 11:30) ಐಶ್ವರ್ಯಾ ರೈ ಅವರು ಅಭಿಷೇಕ್ ಕುರಿತು ಯಾವುದೇ ಪೋಸ್ಟ್ ಮಾಡಿಲ್ಲ.

ಇದನ್ನೂ ಓದಿ: ‘ಐಶ್ವರ್ಯಾಗಿಂತ ಅಭಿಷೇಕ್ ಉತ್ತಮ ನಟ’; ಶ್ವೇತಾ ಬಚ್ಚನ್ ನೇರ ಮಾತು

ಇತ್ತೀಚೆಗೆ ಅಭಿಷೇಕ್ ಹಾಗೂ ಐಶ್ವರ್ಯಾ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ, ಇವರು ಪ್ರೋ ಕಬ್ಬಡಿ ಸಂದರ್ಭದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಮೂಲಕ ವಿಚ್ಛೇದನ ವಿಚಾರಕ್ಕೆ ತೆರೆ ಎಳೆದಿದ್ದರು. ಈಗ ಅಭಿಷೇಕ್​ಗೆ ಪತ್ನಿ ಐಶ್ವರ್ಯಾ ವಿಶ್ ಮಾಡುತ್ತಾರಾ ಅಥವಾ ಇಲ್ಲವಾ ಎನ್ನುವ ಪ್ರಶ್ನೆ ಮೂಡಿದೆ. ಇನ್ನು, ಸಿನಿಮಾ ವಿಚಾರಕ್ಕೆ ಬರೋದಾದರೆ ಅಭಿಷೇಕ್ ಸಿನಿಮಾ ರಂಗದಲ್ಲಿ ದೊಡ್ಡ ಗೆಲುವು ಕಾಣುತ್ತಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾಗಳು ರಿಲೀಸ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:33 am, Mon, 5 February 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು