AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಐಶ್ವರ್ಯಾ ರೈಗೆ ಓಪನ್ ಆಗಿ ಧನ್ಯವಾದ ಹೇಳಿದ ಅಭಿಷೇಕ್; ಕಾರಣವೇನು?

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ವಿಚ್ಛೇದನದ ವದಂತಿಗಳನ್ನು ಅಭಿಷೇಕ್ ನಿರಾಕರಿಸಿದ್ದಾರೆ. ಐಶ್ವರ್ಯಾ ಅವರ ತಾಯಿಯ ಪಾತ್ರವನ್ನು ಅವರು ಹೊಗಳಿದ್ದಾರೆ. ತಮ್ಮ ಮಗಳ ಬೆಳವಣಿಗೆಯಲ್ಲಿ ಐಶ್ವರ್ಯಾ ಅವರ ಪಾತ್ರವನ್ನು ಮೆಚ್ಚಿಕೊಂಡಿದ್ದಾರೆ.

ಕೊನೆಗೂ ಐಶ್ವರ್ಯಾ ರೈಗೆ ಓಪನ್ ಆಗಿ ಧನ್ಯವಾದ ಹೇಳಿದ ಅಭಿಷೇಕ್; ಕಾರಣವೇನು?
ಅಭಿಷೇಕ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on:Nov 25, 2024 | 11:48 AM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಮಧ್ಯೆ ಸಾಕಷ್ಟು ವಿಚಾರಗಳು ಚರ್ಚೆ ಆಗುತ್ತಿವೆ. ಅವರು ಬೇರೆ ಆಗಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಆದರೆ, ಅಭಿಷೇಕ್ ಬಚ್ಚನ್ ಹಾಗೂ ಅಮಿತಾಭ್ ಬಚ್ಚನ್ ಇದನ್ನು ಅಲ್ಲಗಳೆಯುತ್ತಾ ಬರುತ್ತಿದ್ದಾರೆ. ಆದರೆ, ಐಶ್ವರ್ಯಾ ಹಾಗೂ ಅಭಿಷೇಕ್ ಒಟ್ಟಾಗಿ ಮಾತ್ರ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ, ಆ ಅನುಮಾನ ಹಾಗೆಯೇ ಇರುವಂತೆ ಮಾಡಿದ್ದಾರೆ. ಈಗ ಅಭಿಷೇಕ್ ಅವರು ತಾಯಿ ಆಗಿ ಐಶ್ವರ್ಯಾ ಹಾಗೂ ಜಯಾ ಬಚ್ಚನ್ ನಿರ್ವಹಿಸುತ್ತಿರುವ ಜವಾಬ್ದಾರಿ ಬಗ್ಗೆ ಮಾತನಾಡಿದ್ದಾರೆ.

‘ನನ್ನ ತಾಯಿ ನಾನು ಜನಿಸಿದ ಬಳಿಕ ನಟನೆ ತೊರೆದರು. ಮಕ್ಕಳ ಜೊತೆ ಸಮಯ ಕಳೆಯುವ ಉದ್ದೇಶ ಅವರದ್ದಾಗಿತ್ತು. ನನ್ನ ತಂದೆ ಹತ್ತಿರ ಇಲ್ಲ ಎಂದು ಅನುಭವಿಸೋಕೆ ತಾಯಿ ಬಿಡಲಿಲ್ಲ. ರಾತ್ರಿ ತಂದೆ ಬರುತ್ತಿದ್ದರು’ ಎಂದಿದ್ದಾರೆ ಅಭಿಷೇಕ್.

‘ನನ್ನ ಮನೆಯಲ್ಲಿ ನಾನು ಹೊರಗೆ  ಹೋಗಿ ಸಿನಿಮಾ ಮಾಡಲು ಲಕ್ಕಿ ನಾನು. ಐಶ್ವರ್ಯಾ ಅವರು ಯಾವಾಗಲೂ ಆರಾಧ್ಯಳೊಂದಿಗೆ ಮನೆಯಲ್ಲಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಅಪಾರ ಧನ್ಯವಾದ ಹೇಳುತ್ತೇನೆ. ನಾನು ಮಕ್ಕಳ ಜೊತೆ ಇಲ್ಲ ಎಂಬ ಕಾರಣಕ್ಕೆ ಅವರು ನನ್ನನ್ನು ಮೂರನೇ ವ್ಯಕ್ತಿ ಆಗಿ ನೋಡಲ್ಲ. ಅವರಲ್ಲಿ ಒಬ್ಬರು ಎಂದು ನನ್ನ ನೋಡುತ್ತಾರೆ’ ಎಂದಿದ್ದಾರೆ ಅಭಿಷೇಕ್.

ಅಭಿಷೇಕ್ ಬಚ್ಚನ್ ಅವರು ‘ಐ ವಾಂಟ್ ಟು ಟಾಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಅವರ ನಟನೆಯ ಬಗ್ಗೆ ಎಲ್ಲರಿಂದ ಮೆಚ್ಚುಗೆ ಸಿಗುತ್ತಿದೆ. ಅಭಿಷೇಕ್ ಬಚ್ಚನ್ ಅವರು ಭೇಷ್ ಎನಿಸಿಕೊಳ್ಳುತ್ತಿದ್ದಾರೆ. ಅವರು ಸಿಂಗಲ್ ಪೇರೆಂಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಕುಟುಂಬದ ಬಗ್ಗೆ, ಕುಟುಂಬದ ವಿಚಾರದ ಬಗ್ಗೆ ಅವರು ಚರ್ಚೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಆರಾಧ್ಯಾ ನನ್ನ ಮಗಳು, ಭಾವನೆಗಳು ಅರ್ಥವಾಗುತ್ತವೆ’; ನೇರ ಮಾತಲ್ಲಿ ಹೇಳಿದ ಅಭಿಷೇಕ್  

ಇತ್ತೀಚೆಗೆ ‘ಕೋಟ್ಯಾಧಿಪತಿ’ ಕಾರ್ಯಕ್ರಮಕ್ಕೆ ಅಭಿಷೇಕ್ ಬಚ್ಚನ್ ಅತಿಥಿಯಾಗಿ ತೆರಳಿದ್ದರು. ಈ ವೇಳೆ ಅವರು ಮಗಳ ಬಗ್ಗೆ ಮಾತನಾಡಿದ್ದಾರೆ. ‘ಆರಾಧ್ಯಾ ಯಾವಾಗಲೂ ನನ್ನ ಮಗಳು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:48 am, Mon, 25 November 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ