AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶದ್ರೋಹಿ’ ಸಿನಿಮಾ ಮಾಡಿದ ನಟನಿಗೆ ಖಡಕ್​ ಉತ್ತರ ಕೊಟ್ಟ ಅಭಿಷೇಕ್​ ಬಚ್ಚನ್​; ಭೇಷ್​ ಎಂದ ನೆಟ್ಟಿಗರು

ಮಲಯಾಳಂ ಸಿನಿಮಾ ಬಗ್ಗೆ ಅಭಿಷೇಕ್​ ಬಚ್ಚನ್​ ಆಡಿದ ಮೆಚ್ಚುಗೆ ಮಾತುಗಳಿಗೆ ಕಮಾಲ್​ ಆರ್​. ಖಾನ್ ಅವರು​ ಕೊಂಕು ನುಡಿದಿದ್ದಾರೆ. ಅದಕ್ಕೆ ಉತ್ತರಿಸಿರುವ ಅಭಿಷೇಕ್​ ಅವರು ವ್ಯಂಗ್ಯವಾಗಿಯೇ ತಿರುಗೇಟು ನೀಡಿದ್ದಾರೆ.

‘ದೇಶದ್ರೋಹಿ’ ಸಿನಿಮಾ ಮಾಡಿದ ನಟನಿಗೆ ಖಡಕ್​ ಉತ್ತರ ಕೊಟ್ಟ ಅಭಿಷೇಕ್​ ಬಚ್ಚನ್​; ಭೇಷ್​ ಎಂದ ನೆಟ್ಟಿಗರು
ಅಭಿಷೇಕ್ ಬಚ್ಚನ್, ಕಮಾಲ್ ಆರ್. ಖಾನ್
TV9 Web
| Edited By: |

Updated on: Feb 20, 2022 | 12:26 PM

Share

ನಟ ಅಭಿಷೇಕ್​ ಬಚ್ಚನ್​ (Abhishek Bachchan) ಅವರಿಗೆ ಟ್ರೋಲ್​ ಕಾಟ ಎಂದಿಗೂ ತಪ್ಪಿಲ್ಲ. ಜನ ಸಾಮಾನ್ಯರು ಮಾತ್ರವಲ್ಲದೇ ಕಮಾಲ್​ ಆರ್.​ ಖಾನ್ ಅವರಂತಹ ಸೆಲೆಬ್ರಿಟಿಗಳು ಕೂಡ ಅಭಿಷೇಕ್​ ಬಚ್ಚನ್​ ಅವರನ್ನು ಟ್ರೋಲ್ (Troll)​ ಮಾಡಿದ್ದುಂಟು. ಕಮಾಲ್​ ಆರ್​. ಖಾನ್ ಬಗ್ಗೆ ಹೊಸದಾಗಿ ಹೇಳುವಂತದ್ದು ಏನೂ ಇಲ್ಲ. ನಟನಾಗಿ, ನಿರ್ದೇಶಕನಾಗಿ ಬಾಲಿವುಡ್​ನಲ್ಲಿ ಅವರು ಸೋಲು ಕಂಡಿದ್ದಾರೆ. ಬಳಿಕ ಸ್ವಯಂ ಘೋಷಿತ ವಿಮರ್ಶಕನಾಗಿ ಪ್ರಚಾರ ಪಡೆಯುವ ಸಲುವಾಗಿ ಎಲ್ಲಿಲ್ಲದ ಪ್ರಯತ್ನ ಮಾಡಲು ಆರಂಭಿಸಿದರು. ಇದರಿಂದ ಅವರು ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳನ್ನು ಎದುರು ಹಾಕಿಕೊಂಡಿದ್ದಾರೆ. ಕಿರಿಕ್​ ಮಾಡಿಕೊಳ್ಳುವಲ್ಲಿ ಅವರು ಮುಲಾಜು ನೋಡುವುದಿಲ್ಲ. ಅದು ಸಲ್ಮಾನ್ ಖಾನ್​ ಆಗಿರಲಿ ಅಥವಾ ಕಂಗನಾ ರಣಾವತ್​ ಆಗಿರಲಿ… ಎಲ್ಲರ ಜೊತೆಗೂ ಕಮಾಲ್​ ಆರ್. ಖಾನ್ (Kamaal R Khan)​ ವಿವಾದ ಮಾಡಿಕೊಂಡಿದ್ದಾರೆ. ಈಗ ಅವರು ಅಭಿಷೇಕ್​ ಬಚ್ಚನ್​ ತಂಟೆಗೆ ಹೋಗಿದ್ದಾರೆ. ಅದಕ್ಕೆ ಅಭಿಷೇಕ್​ ಬಚ್ಚನ್​ ಖಡಕ್​ ತಿರುಗೇಟು ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇಬ್ಬರ ನಡುವೆ ಜಟಾಪಟಿ ಏರ್ಪಟ್ಟಿದೆ.

ಅಭಿಷೇಕ್​ ಬಚ್ಚನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಹಾಗೆಯೇ ಅವರು ಎಲ್ಲ ಭಾಷೆಯ ಸಿನಿಮಾಗಳನ್ನು ನೋಡಿ ಮೆಚ್ಚುಗೆ ಸೂಚಿಸುತ್ತಾರೆ. ಈಗ ಮಲಯಾಳಂನ ‘ವಾಶಿ’ ಸಿನಿಮಾ ಬಗ್ಗೆ ಅಭಿಷೇಕ್​ ಬಚ್ಚನ್​ ಟ್ವೀಟ್​ ಮಾಡಿದ್ದಾರೆ. ಈ ಸಿನಿಮಾದಲ್ಲಿ ಖ್ಯಾತ ಕಲಾವಿದರಾದ ಕೀರ್ತಿ ಸುರೇಶ್​ ಮತ್ತು ಟೊವಿನೋ ಥಾಮಸ್​ ಅಭಿನಯಿಸುತ್ತಿದ್ದಾರೆ. ‘ಮಲಯಾಳಂ ಚಿತ್ರರಂಗದಿಂದ ಬರುತ್ತಿರುವ ಮತ್ತೊಂದು ಅತ್ಯುತ್ತಮ ಸಿನಿಮಾ ಇದು. ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಅಭಿಷೇಕ್​ ಬಚ್ಚನ್​ ಬರೆದುಕೊಂಡಿದ್ದಾರೆ.

ಅಭಿಷೇಕ್​ ಬಚ್ಚನ್​ ಮಾಡಿರುವ ಟ್ವೀಟ್​ ನೋಡಿ ಕಮಾಲ್​ ಆರ್​. ಖಾನ್​ ಕೊಂಕು ನುಡಿದಿದ್ದಾರೆ. ‘ಅಣ್ಣಾ.. ನೀವು ಬಾಲಿವುಡ್​ನವರು ಯಾವಾಗಲಾದರೂ ಅತ್ಯುತ್ತಮ ಸಿನಿಮಾ ಮಾಡಿ’ ಎಂದು ಕಮಾಲ್​ ಆರ್​. ಖಾನ್ ಟ್ವೀಟ್​ ಮಾಡಿದ್ದಾರೆ. ಅದಕ್ಕೆ ಉತ್ತರಿಸಿರುವ ಅಭಿಷೇಕ್​ ಅವರು ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ. ‘ಪ್ರಯತ್ನ ಮಾಡುತ್ತೇವೆ. ನೀವೂ ಮಾಡಿದ್ರಲ್ಲ ‘ದೇಶದ್ರೋಹಿ’ ಸಿನಿಮಾ’ ಎಂದು ಅಭಿಷೇಕ್​ ಬಚ್ಚನ್​ ಕುಟುಕಿದ್ದಾರೆ.

ಕಮಾಲ್​ ಆರ್​. ಖಾನ್​ ನಟಿಸಿ, ನಿರ್ಮಾಣ ಮಾಡಿದ್ದ ‘ದೇಶದ್ರೋಹಿ’ ಸಿನಿಮಾ 2008ರಲ್ಲಿ ತೆರೆಕಂಡಿತ್ತು. ಅದನ್ನು ನೋಡಿದ ವಿಮರ್ಶಕರು ‘ಹಿಂದಿ ಚಿತ್ರರಂಗದ ಅತಿ ಕೆಟ್ಟ ಸಿನಿಮಾ’ ಎಂದು ವಿಮರ್ಶೆ ಮಾಡಿದ್ದರು. ಗಲ್ಲಾಪೆಟ್ಟಿಗೆಯಲ್ಲಿ ಕೇವಲ 80 ಲಕ್ಷ ರೂಪಾಯಿ ಕಲೆಕ್ಷನ್​ ಮಾಡಿ ಆ ಸಿನಿಮಾ ನೆಲಕಚ್ಚಿತ್ತು. ಹೀನಾಯವಾಗಿ ಸೋಲುವಂತಹ ಇಂಥ ಸಿನಿಮಾ ಮಾಡಿದ್ದ ಕಮಾಲ್​ ಆರ್​. ಖಾನ್ ಅವರು ಈಗ ಬಾಲಿವುಡ್​ನ ಇತರೆ ಸ್ಟಾರ್​ ನಟ-ನಟಿಯರಿಗೆ ಬುದ್ಧಿ ಹೇಳಲು ಬಂದಿದ್ದಾರೆ. ಅದಕ್ಕಾಗಿ ಅಭಿಷೇಕ್​ ಬಚ್ಚನ್​ ಅವರು ಈ ರೀತಿ ತಿರುಗೇಟು ನೀಡಿದ್ದಾರೆ. ಸೂಕ್ತ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಕ್ಕಾಗಿ ಅಭಿಷೇನ್​ ಬಚ್ಚನ್​ ಅವರಿಗೆ ನೆಟ್ಟಿಗರು ಭೇಷ್​ ಎನ್ನುತ್ತಿದ್ದಾರೆ.

ಇದನ್ನೂ ಓದಿ:

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

Akshay Kumar: ಪಾಕಿಸ್ತಾನದ ಬಗ್ಗೆ ಅಕ್ಷಯ್​ ಕುಮಾರ್​ ಪ್ರೀತಿಯ ಮಾತು; ವಿಡಿಯೋ ವೈರಲ್​ ಮಾಡಿದ ಕಮಾಲ್​ ಖಾನ್​

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ