AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ಮಾಪಕನ ಜತೆ ಸಂಬಂಧ ಕಡಿದುಕೊಂಡ ಅಭಿಷೇಕ್​ ಬಚ್ಚನ್​; ಕೈ ತಪ್ಪಿತು ಹಲವು ಆಫರ್​

‘ಬಂಟಿ ಔರ್​ ಬಬ್ಲಿ’ ಸಿನಿಮಾದಲ್ಲಿ ಅಭಿಷೇಕ್​ ಬಚ್ಚನ್​ ಹಾಗೂ ರಾಣಿ ಮುಖರ್ಜಿ ನಟಿಸಿದ್ದರು. ಈ ಸಿನಿಮಾದ ಪಾರ್ಟ್​ 2 ಬರುತ್ತಿದೆ. ಮೊದಲ ಸಿನಿಮಾದಲ್ಲಿ ಅಭಿಷೇಕ್​ ಮಾಡಿದ್ದ ಪಾತ್ರವನ್ನು ‘ಬಂಟಿ ಔರ್​ ಬಬ್ಲಿ 2’ನಲ್ಲಿ ಸೈಫ್​ ಅಲಿ ಖಾನ್​ಗೆ ನೀಡಲಾಗಿದೆ.

ಖ್ಯಾತ ನಿರ್ಮಾಪಕನ ಜತೆ ಸಂಬಂಧ ಕಡಿದುಕೊಂಡ ಅಭಿಷೇಕ್​ ಬಚ್ಚನ್​; ಕೈ ತಪ್ಪಿತು ಹಲವು ಆಫರ್​
ಅಭಿಷೇಕ್​ ಬಚ್ಚನ್​
TV9 Web
| Edited By: |

Updated on: Nov 15, 2021 | 10:08 PM

Share

ಅಭಿಷೇಕ್​ ಬಚ್ಚನ್​ (Abhishek Bachchan) ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಯಾವ ಸಿನಿಮಾಗಳೂ ಕೈ ಹಿಡಿದಿಲ್ಲ. ಅವರಿಗೆ ಯಾವ ಸಿನಿಮಾಗಳೂ ಇತ್ತೀಚೆಗೆ ಅಷ್ಟು ದೊಡ್ಡ ಮಟ್ಟದಲ್ಲಿ ಹಿಟ್​ ತಂದುಕೊಟ್ಟಿಲ್ಲ. ಇದು ಅವರಿಗೆ ಬೇಸರ ತರಿಸಿದೆ. ಸ್ಟಾರ್​ ನಟನ ಮಗನಾದರೂ ಹೇಳಿಕೊಳ್ಳುವಂಥ ಆಫರ್​ಗಳು ಬರುತ್ತಿಲ್ಲ. ಈ ಎಲ್ಲಾ ವಿಚಾರದ ಬಗ್ಗೆ ಅಭಿಷೇಕ್​ಗೆ ಬೇಸರವಿದೆ. ಈ ಮಧ್ಯೆ ಅಭಿಷೇಕ್​ ಬಚ್ಚನ್​ ಖ್ಯಾತ ನಿರ್ಮಾಪಕನ ಜತೆ ಸಂಬಂಧ ಕಡಿದುಕೊಂಡಿದ್ದಾರೆ. ಇನ್ನೆಂದಿಗೂ ಅವರ ಜತೆ ಸಿನಿಮಾ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಈಗ ಬಾಲಿವುಡ್​ ಅಂಗಳದಲ್ಲಿ ಗುಸುಗುಸು ಒಂದು ಹರಿದಾಡುತ್ತಿದೆ.

‘ಬಂಟಿ ಔರ್​ ಬಬ್ಲಿ’ ಸಿನಿಮಾದಲ್ಲಿ ಅಭಿಷೇಕ್​ ಬಚ್ಚನ್​ ಹಾಗೂ ರಾಣಿ ಮುಖರ್ಜಿ ನಟಿಸಿದ್ದರು. ಈ ಸಿನಿಮಾದ ಪಾರ್ಟ್​ 2 ಬರುತ್ತಿದೆ. ಮೊದಲ ಸಿನಿಮಾದಲ್ಲಿ ಅಭಿಷೇಕ್​ ಮಾಡಿದ್ದ ಪಾತ್ರವನ್ನು ‘ಬಂಟಿ ಔರ್​ ಬಬ್ಲಿ 2’ನಲ್ಲಿ ಸೈಫ್​ ಅಲಿ ಖಾನ್​ಗೆ ನೀಡಲಾಗಿದೆ. ಹೀಗೆಕೆ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಸಿನಿಮಾದ ನಿರ್ಮಾಪಕ ಆದಿತ್ಯ ಚೋಪ್ರಾ ಹಾಗೂ ಅಭಿಷೇಕ್​ ನಡುವೆ ಯಾವುದೂ ಸರಿ ಇಲ್ಲ ಎನ್ನುತ್ತಿವೆ ಮೂಲಗಳು.

‘ಧೂಮ್​ 3’ ಸಿನಿಮಾವನ್ನು ಆದಿತ್ಯ ಚೋಪ್ರಾ ನಿರ್ಮಾಣ ಮಾಡಿದ್ದರು. ಈ ಸಿನಿಮಾದಲ್ಲಿ ಆಮಿರ್​ ಖಾನ್​ ಹಾಗೂ ಅಭಿಷೇಕ್​ ನಟಿಸಿದ್ದರು. ಧೂಮ್​ ಸರಣಿಯಲ್ಲಿ ಅಭಿಷೇಕ್​ ಈ ಮೊದಲಿನಿಂದಲೂ ನಟಿಸುತ್ತಿದ್ದಾರೆ. ಆಮಿರ್​ ಖಾನ್​ ‘ಧೂಮ್​ 3’ನಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆಮಿರ್​ ಹೇಳಿದರು ಎಂಬ ಕಾರಣಕ್ಕೆ ಶೂಟಿಂಗ್​ ಸಮಯದಲ್ಲಿ ‘ಧೂಮ್​ 3’ ಕತೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಅಭಿಷೇಕ್​ ಹಾಗೂ ಆದಿತ್ಯಾ ನಡುವೆ ಜಗಳ ಏರ್ಪಟ್ಟಿತ್ತು. ಇದನ್ನು ಅಭಿಷೇಕ್​ ಸಹಿಸಿಕೊಂಡಿದ್ದರು. ಆದರೆ, ಅವರಿಗೆ ಬೇಸರ ಆಗುವ ದೊಡ್ಡ ಘಟನೆ ನಡೆದಿತ್ತು.

‘ಧೂಮ್​ 3’ ಸಿನಿಮಾದ ಕ್ಲೈಮ್ಯಾಕ್ಸ್​ ಶೂಟಿಂಗ್​ ಸೆಟ್​ಗೆ ಅಭಿಷೇಕ್​ ಬರೋದು ತಡವಾಗಿತ್ತು. ಅದಕ್ಕೂ ಮೊದಲೇ ಆಮಿರ್​ ಹಾಗೂ ಆದಿತ್ಯ ಕೂತು ಸಿನಿಮಾದ ಕ್ಲೈಮ್ಯಾಕ್ಸ್​ ಬದಲಾಯಿಸಿದ್ದರು. ಈ ವಿಚಾರ ಅಭಿಷೇಕ್​ಗೆ ಸಾಕಷ್ಟು ಬೇಸರ ಮೂಡಿಸಿತ್ತು. ಅಲ್ಲದೆ, ಇನ್ನುಮುಂದೆ ‘ಧೂಮ್​’ ಸರಣಿಯ ಯಾವುದೇ ಸಿನಿಮಾಗಳಲ್ಲೂ ಅವರು ನಟಿಸುವುದಿಲ್ಲ ಎಂದು ಶಪಥ ಮಾಡಿದ್ದರು.

ಆದಿತ್ಯ ಚೋಪ್ರಾ ‘ಬಂಟಿ ಔರ್​ ಬಬ್ಲಿ 2’ ಆಫರ್​ಅನ್ನು ಅಭಿಷೇಕ್​ಗೆ ನೀಡಿದ್ದರು. ಆದರೆ, ಅವರು ನಟಿಸುವುದಿಲ್ಲ ಎಂದು ನೇರವಾಗಿ ಹೇಳಿದ್ದರು. ಇದಾದ ನಂತರದಲ್ಲಿ ಸೈಫ್​ ಅಲಿ ಖಾನ್​ಗೆ ಈ ಆಫರ್​ ನೀಡಲಾಗಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಅಭಿಷೇಕ್​ ಬಚ್ಚನ್​ಗೆ ಶಸ್ತ್ರಚಿಕಿತ್ಸೆ: ಫೋಟೋ ಹಂಚಿಕೊಂಡು ಘಟನೆ ವಿವರಿಸಿದ ನಟ…

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು