AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್​ ಬಚ್ಚನ್​ ಖಾತೆಗೆ ಬಿತ್ತು 45.75 ಕೋಟಿ ರೂಪಾಯಿ; ಆದರೆ ಸಿನಿಮಾದಿಂದಲ್ಲ, ಅಚ್ಚರಿಗೊಂಡ ಫ್ಯಾನ್ಸ್​

ಅಭಿಷೇಕ್​ ಮತ್ತು ಐಶ್ವರ್ಯಾ ರೈ 2007ರಲ್ಲಿ ಮದುವೆ ಆದರು. 2011ರಲ್ಲಿ ಆರಾಧ್ಯಾ ಜನಿಸಿದರು. ಇದಾದ ಮೂರು ವರ್ಷಗಳ ಬಳಿಕ ಈ ಮನೆಯನ್ನು ಖರೀದಿ ಮಾಡಿದ್ದರು ಅಭಿಷೇಕ್​.

ಅಭಿಷೇಕ್​ ಬಚ್ಚನ್​ ಖಾತೆಗೆ ಬಿತ್ತು 45.75 ಕೋಟಿ ರೂಪಾಯಿ; ಆದರೆ ಸಿನಿಮಾದಿಂದಲ್ಲ, ಅಚ್ಚರಿಗೊಂಡ ಫ್ಯಾನ್ಸ್​
ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ
TV9 Web
| Edited By: |

Updated on: Aug 12, 2021 | 10:00 PM

Share

ಅಭಿಷೇಕ್​ ಬಚ್ಚನ್​ ಇಡೀ ಕುಟುಂಬ ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿದೆ. ಅಭಿಷೇಕ್​ ಬಚ್ಚನ್​, ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್​ ಚಿತ್ರರಂಗದಲ್ಲಿ ತುಂಬಾನೇ ಬೇಡಿಕೆ ಇಟ್ಟುಕೊಂಡಿದ್ದಾರೆ. ಪ್ರತಿ ಚಿತ್ರಕ್ಕೆ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಈಗ ಅಭಿಷೇಕ್​ ಬಚ್ಚನ್​ ಖಾತೆಗೆ ಬರೋಬ್ಬರಿ 45.75 ಕೋಟಿ ರೂಪಾಯಿ ಬಂದು ಬಿದ್ದಿದೆ. ಹಾಗಂತ, ಇದು ಸಿನಿಮಾ ವಿಚಾರಕ್ಕಲ್ಲ.

ಮುಂಬೈನ ವೊರ್ಲಿ ಭಾಗದಲ್ಲಿರುವ ಅಪಾರ್ಟ್​ಮೆಂಟ್​ನ 37ನೇ ಅಂತಸ್ತಿನಲ್ಲಿ ಅಭಿಷೇಕ್​ ಬಚ್ಚನ್​ 2014ರಲ್ಲಿ 41 ಕೋಟಿ ರೂಪಾಯಿಗೆ ಮನೆ ಖರೀದಿ ಮಾಡಿದ್ದರು. ಶಾಹಿದ್​ ಕಪೂರ್​ ಹಾಗೂ ಅಕ್ಷಯ್​ ಕುಮಾರ್ ಕೂಡ ಇದೇ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದಾರೆ. ಶಾಹಿದ್​ ಅವರು 56 ಕೋಟಿ ರೂಪಾಯಿಗೆ ಹಾಗೂ ಅಕ್ಷಯ್​ ಕುಮಾರ್​ ಅವರು 52.5 ಕೋಟಿ ರೂಪಾಯಿಗೆ  ಮನೆ ಖರೀದಿ ಮಾಡಿದ್ದರು ಎನ್ನಲಾಗಿದೆ. ಒಂದೊಮ್ಮೆ ಇದೇ ಮನೆಯಲ್ಲಿ ಉಳಿದುಕೊಂಡಿದ್ದರೆ, ಅಕ್ಷಯ್​ ಕುಮಾರ್​ ಹಾಗೂ ಶಾಹಿದ್​ ಅವರು ಅಭಿಷೇಕ್​ಗೆ ನೆರೆಹೊರೆಯವರಾಗಿರುತ್ತಿದ್ದರು.

ಅಭಿಷೇಕ್​ ಮತ್ತು ಐಶ್ವರ್ಯಾ ರೈ 2007ರಲ್ಲಿ ಮದುವೆ ಆದರು. 2011ರಲ್ಲಿ ಆರಾಧ್ಯಾ ಜನಿಸಿದರು. ಇದಾದ ಮೂರು ವರ್ಷಗಳ ಬಳಿಕ ಈ ಮನೆಯನ್ನು ಖರೀದಿ ಮಾಡಿದ್ದರು ಅಭಿಷೇಕ್​.

ಅಭಿಷೇಕ್​ ಬಚ್ಚನ್​ ಕೊನೆಯದಾಗಿ ಕಾಣಿಸಿಕೊಂಡಿದ್ದು, ‘ಬಿಗ್​ ಬುಲ್​’ ಸಿನಿಮಾದಲ್ಲಿ. ಹರ್ಷದ್​ ಮೆಹ್ತಾ ಜೀವನ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರಕ್ಕೆ ನೆಗೆಟಿವ್​ ವಿಮರ್ಶೆ ಬಂದಿತ್ತು. ಸದ್ಯ, ಅಭಿಷೇಕ್​ ‘ದಾಸ್ವಿ’ ಮತ್ತು ‘ಬಾಬ್​ ಬಿಸ್ವಾಸ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಈ ಸಿನಿಮಾ ಕೆಲಸಗಳು ವಿಳಂಬವಾಗಿವೆ.  ಐಶ್ವರ್ಯಾ ರೈ ಸದ್ಯ, ಮಣಿರತ್ನಮ್ ಅವರ ಪ್ರಾಜೆಕ್ಟ್​ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಅಮಿತಾಭ್​ ಬಚ್ಚನ್​, ಅರ್ಜುನ್​ ಕಪೂರ್​ ಹಾಗೂ ಅಜಯ್​ ದೇವಗನ್​-ಕಾಜೊಲ್​ ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿ ಸುದ್ದಿಯಾಗಿದ್ದರು. ಇತ್ತೀಚೆಗೆ ರಾಣಿ ಮುಖರ್ಜಿ ಕೂಡ ಈ ಸಾಲಿಗೆ ಸೇರ್ಪಡೆ ಆಗಿದ್ದರು.

ಇದನ್ನೂ ಓದಿ: ಅಮಿತಾಭ್​ ಬಚ್ಚನ್​ ಮನೆ ಹಾಗೂ ಮುಂಬೈನ 3 ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇರಿಸಿರುವುದಾಗಿ ಪೊಲೀಸರಿಗೆ ಕರೆ ಮಾಡಿದ ಅನಾಮಿಕ

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!