AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್​ ಬಚ್ಚನ್​ ಖಾತೆಗೆ ಬಿತ್ತು 45.75 ಕೋಟಿ ರೂಪಾಯಿ; ಆದರೆ ಸಿನಿಮಾದಿಂದಲ್ಲ, ಅಚ್ಚರಿಗೊಂಡ ಫ್ಯಾನ್ಸ್​

ಅಭಿಷೇಕ್​ ಮತ್ತು ಐಶ್ವರ್ಯಾ ರೈ 2007ರಲ್ಲಿ ಮದುವೆ ಆದರು. 2011ರಲ್ಲಿ ಆರಾಧ್ಯಾ ಜನಿಸಿದರು. ಇದಾದ ಮೂರು ವರ್ಷಗಳ ಬಳಿಕ ಈ ಮನೆಯನ್ನು ಖರೀದಿ ಮಾಡಿದ್ದರು ಅಭಿಷೇಕ್​.

ಅಭಿಷೇಕ್​ ಬಚ್ಚನ್​ ಖಾತೆಗೆ ಬಿತ್ತು 45.75 ಕೋಟಿ ರೂಪಾಯಿ; ಆದರೆ ಸಿನಿಮಾದಿಂದಲ್ಲ, ಅಚ್ಚರಿಗೊಂಡ ಫ್ಯಾನ್ಸ್​
ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ
TV9 Web
| Edited By: |

Updated on: Aug 12, 2021 | 10:00 PM

Share

ಅಭಿಷೇಕ್​ ಬಚ್ಚನ್​ ಇಡೀ ಕುಟುಂಬ ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿದೆ. ಅಭಿಷೇಕ್​ ಬಚ್ಚನ್​, ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್​ ಚಿತ್ರರಂಗದಲ್ಲಿ ತುಂಬಾನೇ ಬೇಡಿಕೆ ಇಟ್ಟುಕೊಂಡಿದ್ದಾರೆ. ಪ್ರತಿ ಚಿತ್ರಕ್ಕೆ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಈಗ ಅಭಿಷೇಕ್​ ಬಚ್ಚನ್​ ಖಾತೆಗೆ ಬರೋಬ್ಬರಿ 45.75 ಕೋಟಿ ರೂಪಾಯಿ ಬಂದು ಬಿದ್ದಿದೆ. ಹಾಗಂತ, ಇದು ಸಿನಿಮಾ ವಿಚಾರಕ್ಕಲ್ಲ.

ಮುಂಬೈನ ವೊರ್ಲಿ ಭಾಗದಲ್ಲಿರುವ ಅಪಾರ್ಟ್​ಮೆಂಟ್​ನ 37ನೇ ಅಂತಸ್ತಿನಲ್ಲಿ ಅಭಿಷೇಕ್​ ಬಚ್ಚನ್​ 2014ರಲ್ಲಿ 41 ಕೋಟಿ ರೂಪಾಯಿಗೆ ಮನೆ ಖರೀದಿ ಮಾಡಿದ್ದರು. ಶಾಹಿದ್​ ಕಪೂರ್​ ಹಾಗೂ ಅಕ್ಷಯ್​ ಕುಮಾರ್ ಕೂಡ ಇದೇ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದಾರೆ. ಶಾಹಿದ್​ ಅವರು 56 ಕೋಟಿ ರೂಪಾಯಿಗೆ ಹಾಗೂ ಅಕ್ಷಯ್​ ಕುಮಾರ್​ ಅವರು 52.5 ಕೋಟಿ ರೂಪಾಯಿಗೆ  ಮನೆ ಖರೀದಿ ಮಾಡಿದ್ದರು ಎನ್ನಲಾಗಿದೆ. ಒಂದೊಮ್ಮೆ ಇದೇ ಮನೆಯಲ್ಲಿ ಉಳಿದುಕೊಂಡಿದ್ದರೆ, ಅಕ್ಷಯ್​ ಕುಮಾರ್​ ಹಾಗೂ ಶಾಹಿದ್​ ಅವರು ಅಭಿಷೇಕ್​ಗೆ ನೆರೆಹೊರೆಯವರಾಗಿರುತ್ತಿದ್ದರು.

ಅಭಿಷೇಕ್​ ಮತ್ತು ಐಶ್ವರ್ಯಾ ರೈ 2007ರಲ್ಲಿ ಮದುವೆ ಆದರು. 2011ರಲ್ಲಿ ಆರಾಧ್ಯಾ ಜನಿಸಿದರು. ಇದಾದ ಮೂರು ವರ್ಷಗಳ ಬಳಿಕ ಈ ಮನೆಯನ್ನು ಖರೀದಿ ಮಾಡಿದ್ದರು ಅಭಿಷೇಕ್​.

ಅಭಿಷೇಕ್​ ಬಚ್ಚನ್​ ಕೊನೆಯದಾಗಿ ಕಾಣಿಸಿಕೊಂಡಿದ್ದು, ‘ಬಿಗ್​ ಬುಲ್​’ ಸಿನಿಮಾದಲ್ಲಿ. ಹರ್ಷದ್​ ಮೆಹ್ತಾ ಜೀವನ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರಕ್ಕೆ ನೆಗೆಟಿವ್​ ವಿಮರ್ಶೆ ಬಂದಿತ್ತು. ಸದ್ಯ, ಅಭಿಷೇಕ್​ ‘ದಾಸ್ವಿ’ ಮತ್ತು ‘ಬಾಬ್​ ಬಿಸ್ವಾಸ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಈ ಸಿನಿಮಾ ಕೆಲಸಗಳು ವಿಳಂಬವಾಗಿವೆ.  ಐಶ್ವರ್ಯಾ ರೈ ಸದ್ಯ, ಮಣಿರತ್ನಮ್ ಅವರ ಪ್ರಾಜೆಕ್ಟ್​ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಅಮಿತಾಭ್​ ಬಚ್ಚನ್​, ಅರ್ಜುನ್​ ಕಪೂರ್​ ಹಾಗೂ ಅಜಯ್​ ದೇವಗನ್​-ಕಾಜೊಲ್​ ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿ ಸುದ್ದಿಯಾಗಿದ್ದರು. ಇತ್ತೀಚೆಗೆ ರಾಣಿ ಮುಖರ್ಜಿ ಕೂಡ ಈ ಸಾಲಿಗೆ ಸೇರ್ಪಡೆ ಆಗಿದ್ದರು.

ಇದನ್ನೂ ಓದಿ: ಅಮಿತಾಭ್​ ಬಚ್ಚನ್​ ಮನೆ ಹಾಗೂ ಮುಂಬೈನ 3 ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇರಿಸಿರುವುದಾಗಿ ಪೊಲೀಸರಿಗೆ ಕರೆ ಮಾಡಿದ ಅನಾಮಿಕ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ