AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್​ ಬಚ್ಚನ್​ ಖಾತೆಗೆ ಬಿತ್ತು 45.75 ಕೋಟಿ ರೂಪಾಯಿ; ಆದರೆ ಸಿನಿಮಾದಿಂದಲ್ಲ, ಅಚ್ಚರಿಗೊಂಡ ಫ್ಯಾನ್ಸ್​

ಅಭಿಷೇಕ್​ ಮತ್ತು ಐಶ್ವರ್ಯಾ ರೈ 2007ರಲ್ಲಿ ಮದುವೆ ಆದರು. 2011ರಲ್ಲಿ ಆರಾಧ್ಯಾ ಜನಿಸಿದರು. ಇದಾದ ಮೂರು ವರ್ಷಗಳ ಬಳಿಕ ಈ ಮನೆಯನ್ನು ಖರೀದಿ ಮಾಡಿದ್ದರು ಅಭಿಷೇಕ್​.

ಅಭಿಷೇಕ್​ ಬಚ್ಚನ್​ ಖಾತೆಗೆ ಬಿತ್ತು 45.75 ಕೋಟಿ ರೂಪಾಯಿ; ಆದರೆ ಸಿನಿಮಾದಿಂದಲ್ಲ, ಅಚ್ಚರಿಗೊಂಡ ಫ್ಯಾನ್ಸ್​
ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 12, 2021 | 10:00 PM

Share

ಅಭಿಷೇಕ್​ ಬಚ್ಚನ್​ ಇಡೀ ಕುಟುಂಬ ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿದೆ. ಅಭಿಷೇಕ್​ ಬಚ್ಚನ್​, ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್​ ಚಿತ್ರರಂಗದಲ್ಲಿ ತುಂಬಾನೇ ಬೇಡಿಕೆ ಇಟ್ಟುಕೊಂಡಿದ್ದಾರೆ. ಪ್ರತಿ ಚಿತ್ರಕ್ಕೆ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಈಗ ಅಭಿಷೇಕ್​ ಬಚ್ಚನ್​ ಖಾತೆಗೆ ಬರೋಬ್ಬರಿ 45.75 ಕೋಟಿ ರೂಪಾಯಿ ಬಂದು ಬಿದ್ದಿದೆ. ಹಾಗಂತ, ಇದು ಸಿನಿಮಾ ವಿಚಾರಕ್ಕಲ್ಲ.

ಮುಂಬೈನ ವೊರ್ಲಿ ಭಾಗದಲ್ಲಿರುವ ಅಪಾರ್ಟ್​ಮೆಂಟ್​ನ 37ನೇ ಅಂತಸ್ತಿನಲ್ಲಿ ಅಭಿಷೇಕ್​ ಬಚ್ಚನ್​ 2014ರಲ್ಲಿ 41 ಕೋಟಿ ರೂಪಾಯಿಗೆ ಮನೆ ಖರೀದಿ ಮಾಡಿದ್ದರು. ಶಾಹಿದ್​ ಕಪೂರ್​ ಹಾಗೂ ಅಕ್ಷಯ್​ ಕುಮಾರ್ ಕೂಡ ಇದೇ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದಾರೆ. ಶಾಹಿದ್​ ಅವರು 56 ಕೋಟಿ ರೂಪಾಯಿಗೆ ಹಾಗೂ ಅಕ್ಷಯ್​ ಕುಮಾರ್​ ಅವರು 52.5 ಕೋಟಿ ರೂಪಾಯಿಗೆ  ಮನೆ ಖರೀದಿ ಮಾಡಿದ್ದರು ಎನ್ನಲಾಗಿದೆ. ಒಂದೊಮ್ಮೆ ಇದೇ ಮನೆಯಲ್ಲಿ ಉಳಿದುಕೊಂಡಿದ್ದರೆ, ಅಕ್ಷಯ್​ ಕುಮಾರ್​ ಹಾಗೂ ಶಾಹಿದ್​ ಅವರು ಅಭಿಷೇಕ್​ಗೆ ನೆರೆಹೊರೆಯವರಾಗಿರುತ್ತಿದ್ದರು.

ಅಭಿಷೇಕ್​ ಮತ್ತು ಐಶ್ವರ್ಯಾ ರೈ 2007ರಲ್ಲಿ ಮದುವೆ ಆದರು. 2011ರಲ್ಲಿ ಆರಾಧ್ಯಾ ಜನಿಸಿದರು. ಇದಾದ ಮೂರು ವರ್ಷಗಳ ಬಳಿಕ ಈ ಮನೆಯನ್ನು ಖರೀದಿ ಮಾಡಿದ್ದರು ಅಭಿಷೇಕ್​.

ಅಭಿಷೇಕ್​ ಬಚ್ಚನ್​ ಕೊನೆಯದಾಗಿ ಕಾಣಿಸಿಕೊಂಡಿದ್ದು, ‘ಬಿಗ್​ ಬುಲ್​’ ಸಿನಿಮಾದಲ್ಲಿ. ಹರ್ಷದ್​ ಮೆಹ್ತಾ ಜೀವನ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರಕ್ಕೆ ನೆಗೆಟಿವ್​ ವಿಮರ್ಶೆ ಬಂದಿತ್ತು. ಸದ್ಯ, ಅಭಿಷೇಕ್​ ‘ದಾಸ್ವಿ’ ಮತ್ತು ‘ಬಾಬ್​ ಬಿಸ್ವಾಸ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಈ ಸಿನಿಮಾ ಕೆಲಸಗಳು ವಿಳಂಬವಾಗಿವೆ.  ಐಶ್ವರ್ಯಾ ರೈ ಸದ್ಯ, ಮಣಿರತ್ನಮ್ ಅವರ ಪ್ರಾಜೆಕ್ಟ್​ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಅಮಿತಾಭ್​ ಬಚ್ಚನ್​, ಅರ್ಜುನ್​ ಕಪೂರ್​ ಹಾಗೂ ಅಜಯ್​ ದೇವಗನ್​-ಕಾಜೊಲ್​ ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿ ಸುದ್ದಿಯಾಗಿದ್ದರು. ಇತ್ತೀಚೆಗೆ ರಾಣಿ ಮುಖರ್ಜಿ ಕೂಡ ಈ ಸಾಲಿಗೆ ಸೇರ್ಪಡೆ ಆಗಿದ್ದರು.

ಇದನ್ನೂ ಓದಿ: ಅಮಿತಾಭ್​ ಬಚ್ಚನ್​ ಮನೆ ಹಾಗೂ ಮುಂಬೈನ 3 ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇರಿಸಿರುವುದಾಗಿ ಪೊಲೀಸರಿಗೆ ಕರೆ ಮಾಡಿದ ಅನಾಮಿಕ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!