AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿಯಾಗಿ ಪ್ಯಾರಿಸ್​ ಸುತ್ತಾಡಿದ ಅಭಿಷೇಕ್​ ಬಚ್ಚನ್​; ಹೆಚ್ಚಾಯ್ತು ಡಿವೋರ್ಸ್​ ಗುಮಾನಿ

ಸೆಲೆಬ್ರಿಟಿಗಳ ವಲಯದಲ್ಲಿ ಮದುವೆ ಮತ್ತು ವಿಚ್ಛೇದನ ತುಂಬ ಕಾಮನ್​ ಎಂಬಂತಾಗಿದೆ. ಐಶ್ವರ್ಯಾ ರೈ ಬಚ್ಚನ್​ ಹಾಗೂ ಅಭಿಷೇಕ್​ ಬಚ್ಚನ್​ ಕೂಡ ಈಗ ಡಿವೋರ್ಸ್​ ಪಡೆಯುವ ಸಾಧ್ಯತೆ ಇದೆ ಎಂಬುದು ಗಾಸಿಪ್​ ಮಂದಿಯ ವಾದ. ಅದಕ್ಕೆ ಕಾರಣ ಆಗುವಂತಹ ಕೆಲವು ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಒಂಟಿಯಾಗಿ ಪ್ಯಾರಿಸ್​ ಸುತ್ತಾಡಿದ ಅಭಿಷೇಕ್​ ಬಚ್ಚನ್​; ಹೆಚ್ಚಾಯ್ತು ಡಿವೋರ್ಸ್​ ಗುಮಾನಿ
ಅಭಿಷೇಕ್​ ಬಚ್ಚನ್​, ಐಶ್ವರ್ಯಾ ರೈ
ಮದನ್​ ಕುಮಾರ್​
|

Updated on: Aug 13, 2024 | 3:45 PM

Share

ಬಾಲಿವುಡ್​ನ ಕ್ಯೂಟ್​ ಕಪಲ್​ ಆಗಿರುವ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಅವರ ಸಂಸಾರದಲ್ಲಿ ಬಿರುಕು ಮೂಡಿರಬಹುದು ಎಂಬ ಅನುಮಾನ ಇದೆ. ಅದಕ್ಕೆ ಪೂರಕ ಎನ್ನುವಂತಹ ಅನೇಕ ಸಂಗತಿಗಳು ನಡೆಯುತ್ತಿವೆ. ಡಿವೋರ್ಸ್​ ಪಡೆಯಲು ಈ ದಂಪತಿ ನಿರ್ಧರಿಸಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ. ಆದರೆ ಈ ವಿಷಯದ ಬಗ್ಗೆ ಐಶ್ವರ್ಯಾ ರೈ ಅವರಾಗಲೀ, ಅಭಿಷೇಕ್​ ಬಚ್ಚನ್​ ಅವರಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಹಾಗಿದ್ದರೂ ಕೂಡ ಜನರ ಗುಮಾನಿ ಹೆಚ್ಚಾಗುತ್ತಲೇ ಇದೆ. ಅಭಿಷೇಕ್​ ಬಚ್ಚನ್​ ಅವರ ಇತ್ತೀಚೆಗಿನ ಸೋಶಿಯಲ್​ ಮೀಡಿಯಾ ಪೋಸ್ಟ್​ ಕೂಡ ಒಂದಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.

ಅಭಿಷೇಕ್​ ಬಚ್ಚನ್​ ಅವರು ಫ್ಯಾಮಿಲಿ ಮ್ಯಾನ್​. ಆದರೆ ಇತ್ತೀಚಿನ ದಿನಗಳಲ್ಲಿ ಅವರು ಪತ್ನಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬುದು ಅಚ್ಚರಿಯ ಸಂಗತಿ. ಈ ಮೊದಲು ರಾಧಿಕಾ ಮರ್ಚೆಂಟ್​ ಹಾಗೂ ಅನಂತ್​ ಅಂಬಾನಿಯ ಮದುವೆಗೆ ಐಶ್ವರ್ಯಾ ರೈ ಮತ್ತು ಅಭಿಷೇಕ್​ ಬಚ್ಚನ್​ ಅವರು ಪ್ರತ್ಯೇಕವಾಗಿ ಆಗಮಿಸಿದ್ದರು. ಇದರಿಂದ ಜನರ ಅನುಮಾನ ಜಾಸ್ತಿ ಆಗಿತ್ತು. ಈಗ ಅಭಿಷೇಕ್​ ಬಚ್ಚನ್​ ಅವರು ಒಂಟಿಯಾಗಿ ಪ್ಯಾರಿಸ್​ನಲ್ಲಿ ಸುತ್ತಾಟ ನಡೆಸಿದ್ದಾರೆ.

ಇದನ್ನೂ ಓದಿ: ‘ಐಶ್ವರ್ಯಾನ ಅಮಿತಾಭ್ ಸೊಸೆಯಂತೆ ಎಂದೂ ನೋಡಿಲ್ಲ’; ಜಯಾ ಬಚ್ಚನ್

ಒಲಂಪಿಕ್ಸ್​ ನೋಡುವ ಸಲುವಾಗಿ ಅಭಿಷೇನ್​ ಬಚ್ಚನ್​ ಅವರು ಪ್ಯಾರಿಸ್​ಗೆ ತೆರಳಿದ್ದರು. ನೀರಜ್​ ಚೋಪ್ರಾ ಜಾವೆಲಿನ್​ ಎಸೆತದಲ್ಲಿ ಪದಕ ಗೆದ್ದಿದ್ದನ್ನು ಅಭಿಷೇಕ್​ ಬಚ್ಚನ್​ ಕಣ್ತುಂಬಿಕೊಂಡಿದ್ದಾರೆ. ಪದಕ ಗೆದ್ದ ಅವರನ್ನು ಅಭಿಷೇಕ್​ ತಬ್ಬಿಕೊಂಡಿದ್ದಾರೆ. ಸ್ಟೇಡಿಯಂನಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದು ಅವರು ಸಂಭ್ರಮಿಸಿದ್ದಾರೆ. ಬಳಿಕ ಐಫೆಲ್​ ಟವರ್​ಗೆ ಭೇಟಿ ನೀಡಿ ಎಂಜಾಯ್​ ಮಾಡಿದ್ದಾರೆ.

ಪ್ಯಾರಿಸ್​ನಲ್ಲಿ ಅಭಿಷೇಕ್​ ಬಚ್ಚನ್​ ಅವರು ಸುತ್ತಾಟ ನಡೆಸಿದಾಗ ಐಶ್ವರ್ಯಾ ರೈ ಇರಲಿಲ್ಲ. ಜನರು ಈ ಬಗ್ಗೆ ಖಂಡಿತವಾಗಿಯೂ ಪ್ರಶ್ನೆ ಕೇಳುತ್ತಾರೆ ಎಂಬುದು ಸ್ವತಃ ಅಭಿಷೇಕ್​ ಅವರಿಗೂ ಗೊತ್ತು. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಾಗ ಅವರು ಕಮೆಂಟ್​ ಮಾಡುವ ಆಯ್ಕೆಯನ್ನು ಆಫ್​ ಮಾಡಿದ್ದಾರೆ. ಜನರು ಎತ್ತಬಹುದಾದ ಡಿವೋರ್ಸ್​ ವದಂತಿ ಬಗೆಗಿನ ಪ್ರಶ್ನೆಗಳಿಂದ ತಪ್ಪಿಕೊಳ್ಳಲು ಅಭಿಷೇಕ್​ ಬಚ್ಚನ್​ ಈ ರೀತಿ ಮಾಡಿದ್ದಾರೆ ಎಂಬುದು ನೆಟ್ಟಿಗರ ಅಭಿಪ್ರಾಯ. ಈ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು