AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’, ‘ಆರ್​ಆರ್​ಆರ್’ ಗೆಲುವಿನ ಬಗ್ಗೆ ಅಭಿಷೇಕ್ ಬಚ್ಚನ್ ಹೇಳೋದೇ ಬೇರೆ; ಏನದು?

ದಕ್ಷಿಣ ಭಾರತದ ಸಿನಿಮಾಗಳು ಯಶಸ್ಸು ಕಾಣುತ್ತಿರುವುದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಕೆಲ ಬಾಲಿವುಡ್ ಮಂದಿ ಮಾತನಾಡಿದ್ದಿದೆ. ಆದರೆ, ಅಭಿಷೇಕ್ ಬಚ್ಚನ್ ಈ ವಿಚಾರದಲ್ಲಿ ಹೇಳೋದೇ ಬೇರೆ.

‘ಕೆಜಿಎಫ್ 2’, ‘ಆರ್​ಆರ್​ಆರ್’ ಗೆಲುವಿನ ಬಗ್ಗೆ ಅಭಿಷೇಕ್ ಬಚ್ಚನ್ ಹೇಳೋದೇ ಬೇರೆ; ಏನದು?
ಅಭಿಷೇಕ್​-ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 29, 2022 | 1:51 PM

ದಕ್ಷಿಣ ಭಾರತದ ಸಿನಿಮಾಗಳು (South Indian Movies) ಬಾಲಿವುಡ್​ನಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಯಶಸ್ಸು ಕಾಣುತ್ತಿವೆ. ‘ಪುಷ್ಪ’, ‘ಆರ್​ಆರ್​ಆರ್’ ಹಾಗೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾಗಳು (KGF Chapter 2) ಬಾಲಿವುಡ್ ಅಂಗಳದಲ್ಲಿ ದೊಡ್ಡ ಗೆಲುವು ಕಂಡಿದೆ. ಈ ವಿಚಾರ ದಕ್ಷಿಣ ಮಂದಿಯ ಖುಷಿಯನ್ನು ಹೆಚ್ಚಿಸಿದರೆ, ಬಾಲಿವುಡ್​ನವರಿಗೆ ಚಿಂತೆ ತಂದಿಟ್ಟಿದೆ. ಬಾಲಿವುಡ್ ಸಿನಿಮಾಗಳು ಗೆಲ್ಲಲು ಒದ್ದಾಡುತ್ತಿರುವ ಈ ಪರಿಸ್ಥಿತಿಯಲ್ಲಿ ದಕ್ಷಿಣದ ಸಿನಿಮಾಗಳು ಗೆದ್ದು ಬೀಗುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಬಗ್ಗೆ ಅನೇಕ ಸ್ಟಾರ್​ಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಂಜಯ್ ದತ್ ಮೊದಲಾದ ನಟರು ಇದಕ್ಕೆ ಕಾರಣ ಹುಡುಕಿದ್ದಾರೆ. ಅಭಿಷೇಕ್​ ಬಚ್ಚನ್ (Abhishek Bachchan) ಕೂಡ ಈ ಬಗ್ಗೆ ಮಾತನಾಡಿದ್ದಾರೆ.

ಇಂಡಿಯನ್ ಎಕ್ಸ್​ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ಅಭಿಷೇಕ್​ ಬಚ್ಚನ್ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಹಲವು ದಕ್ಷಿಣದ ಸಿನಿಮಾಗಳು ಬಾಲಿವುಡ್​ಗೆ ರಿಮೇಕ್ ಆಗುತ್ತಿವೆ. ಈ ಬಗ್ಗೆ ಮಾತನಾಡಿರುವ ಅವರು, ‘ಯಾವುದೇ ಸಿನಿಮಾ ಇಂಡಸ್ಟ್ರಿಗೆ ಹಣೆಪಟ್ಟಿ ಕಟ್ಟುವುದು ಸರಿಯಲ್ಲ. ಹಿಂದಿ ಅಥವಾ ಯಾವುದೇ ಭಾಷೆಯ ಸಿನಿಮಾಗಳು ಮೊದಲಿನಿಂದಲೂ ರೀಮೇಕ್ ಆಗುತ್ತಾ ಬಂದಿವೆ. ಇದು ಹೊಸ ಬೆಳವಣಿಗೆ ಅಲ್ಲ. ಇದು ಯಾವಾಗಲೂ ಇರುತ್ತದೆ. ಅದರಲ್ಲಿ ತಪ್ಪೇನೂ ಇಲ್ಲ. ರೀಮೇಕ್ ಮಾಡುವುದು ಅವರವರ ಆಯ್ಕೆ’ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ಅವರು.

ಬಾಲಿವುಡ್ ಸಿನಿಮಾಗಳು ಯಶಸ್ಸು ಕಾಣುತ್ತಿಲ್ಲ ಎನ್ನುವ ಮಾತಿಗೆ ಅಭಿಷೇಕ್​ ಬಚ್ಚನ್ ವಿರೋಧ ವ್ಯಕ್ತಪಡಿಸಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ‘ಸೂರ್ಯವಂಶಿ’, ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿದ್ದವು. ಈ ವಿಚಾರವನ್ನು ಅಭಿಷೇಕ್ ಬಚ್ಚನ್ ಉಲ್ಲೇಖಿಸಿದ್ದಾರೆ.

ದಕ್ಷಿಣ ಭಾರತದ ಸಿನಿಮಾಗಳು ಯಶಸ್ಸು ಕಾಣುತ್ತಿರುವುದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಕೆಲ ಬಾಲಿವುಡ್ ಮಂದಿ ಮಾತನಾಡಿದ್ದಿದೆ. ಆದರೆ, ಅಭಿಷೇಕ್ ಬಚ್ಚನ್ ಈ ವಿಚಾರದಲ್ಲಿ ಹೇಳೋದೇ ಬೇರೆ. ಅವರ ಅಭಿಪ್ರಾಯ ಈ ವಿಚಾರದಲ್ಲಿ ಭಿನ್ನವಾಗಿದೆ. ‘ಒಳ್ಳೆಯ ಸಿನಿಮಾಗಳು ಗೆಲ್ಲುತ್ತವೆ. ಕೆಟ್ಟ ಸಿನಿಮಾಗಳು ಸೋಲುತ್ತವೆ’ ಎಂದು ಹೇಳಿದ್ದಾರೆ. ಈ ಮೂಲಕ ಬಾಲಿವುಡ್​ನಲ್ಲಿ ಒಳ್ಳೆಯ ಚಿತ್ರ ಕೊಟ್ಟರೆ ಅದು ಗೆದ್ದೇ ಗೆಲ್ಲುತ್ತದೆ ಎನ್ನುವ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸಂಪೂರ್ಣವಾಗಿ ಬದಲಾಯ್ತು ಅಭಿಷೇಕ್​ ಬಚ್ಚನ್​ ಚಹರೆ; ಇವರು ಅಮಿತಾಭ್​ ಮಗನಾ ಎಂದು ಪ್ರಶ್ನಿಸಿದ ಫ್ಯಾನ್ಸ್​ 

‘ದೇಶದ್ರೋಹಿ’ ಸಿನಿಮಾ ಮಾಡಿದ ನಟನಿಗೆ ಖಡಕ್​ ಉತ್ತರ ಕೊಟ್ಟ ಅಭಿಷೇಕ್​ ಬಚ್ಚನ್​; ಭೇಷ್​ ಎಂದ ನೆಟ್ಟಿಗರು 

ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ