Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Bachchan:  ಪಾಲಿಟಿಕ್ಸ್​ಗೆ ಎಂಟ್ರಿ ಕೊಡೋಕೆ ರೆಡಿ ಆದ ಅಭಿಷೇಕ್ ಬಚ್ಚನ್? ಇದರ ಅಸಲಿಯತ್ತು ಇಲ್ಲಿದೆ..

ಬಚ್ಚನ್ ಕುಟುಂಬಕ್ಕೆ ರಾಜಕೀಯ ಹೊಸದಲ್ಲ. ಅಭಿಷೇಕ್ ತಾಯಿ ಜಯಾ ಅವರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ.

Abhishek Bachchan:  ಪಾಲಿಟಿಕ್ಸ್​ಗೆ ಎಂಟ್ರಿ ಕೊಡೋಕೆ ರೆಡಿ ಆದ ಅಭಿಷೇಕ್ ಬಚ್ಚನ್? ಇದರ ಅಸಲಿಯತ್ತು ಇಲ್ಲಿದೆ..
ಅಭಿಷೇಕ್ ಅಂಬರೀಷ್
Follow us
ರಾಜೇಶ್ ದುಗ್ಗುಮನೆ
|

Updated on:Jul 21, 2023 | 11:50 AM

ಅಭಿಷೇಕ್ ಬಚ್ಚನ್ (Abhishek Bachchan) ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಪತ್ನಿ ಐಶ್ವರ್ಯಾ ರೈ ಹಾಗೂ ತಂದೆ ಅಭಿಷೇಕ್ ಬಚ್ಚನ್​ಗೆ ಹೋಲಿಸಿದರೆ ಅಭಿಷೇಕ್ ಬಚ್ಚನ್ ಅವರ ಅಭಿಮಾನಿ ಬಳಗ ಚಿಕ್ಕದು. ಈ ವಿಚಾರದಲ್ಲಿ ಅವರು ಅನೇಕ ಬಾರಿ ಟ್ರೋಲ್​ಗೆ ಒಳಗಾಗಿದ್ದಾರೆ. ಈಗ ಅಭಿಷೇಕ್ ಬಚ್ಚನ್ ಅವರು ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಇದನ್ನು ಅವರ ಆಪ್ತರು ಅಲ್ಲಗಳೆದಿದ್ದಾರೆ. ಈ ವಿಚಾರದಲ್ಲಿ ಅವರ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಬಚ್ಚನ್ ಕುಟುಂಬಕ್ಕೆ ರಾಜಕೀಯ ಹೊಸದಲ್ಲ. ಅಭಿಷೇಕ್ ತಾಯಿ ಜಯಾ ಅವರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಸಮಾಜವಾದಿ ಪಕ್ಷದ ಸದಸ್ಯೆ ಆಗಿದ್ದಾರೆ. ಅಮಿತಾಭ್ ಬಚ್ಚನ್ ಕೂಡ ಒಮ್ಮೆ ರಾಜಕೀಯಕ್ಕೆ ಹೋಗಿ ಬಂದಿದ್ದರು. ಈಗ ಅಭಿಷೇಕ್ ಬಚ್ಚನ್ ಕೂಡ ರಾಜಕೀಯಕ್ಕೆ ಎಂಟ್ರಿ ಪಡೆಯಲಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ.

ಈ ಸುದ್ದಿ ಹುಟ್ಟಲು ಒಂದು ಕಾರಣ ಇದೆ. ಪ್ರಯಾಗ್​ರಾಜ್ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರು ಅಭಿಷೇಕ್ ಬಚ್ಚನ್​ ಅವರ ಜನಪ್ರಿಯತೆ ಬಗ್ಗೆಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಆಗಿದ್ದ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ‌ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಸಮೀಕ್ಷೆ ನಡೆಸಿದ್ದಾರೆ ಎನ್ನಲಾಗಿದೆ. ಇದು ಅಭಿಷೇಕ್ ಬಚ್ಚನ್ ಅವರ ಪಾಲಿಟಿಕ್ಸ್ ಎಂಟ್ರಿ ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ. ಆದರೆ, ಅಭಿಷೇಕ್ ಬಚ್ಚನ್​ಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ.

‘ರಾಜಕೀಯ ಎಂಟ್ರಿ ವಿಚಾರದ ಸುದ್ದಿ ಕೇಳಿ ಅವರಿಗೆ ಅಚ್ಚರಿ ಆಗಿದೆ. ರಾಜಕೀಯದ ಬಗ್ಗೆ ಅವರಲ್ಲಿ ಆಸಕ್ತಿ ಇಲ್ಲ. ನಟನೆ ಅವರ ಪ್ಯಾಷನ್’ ಎಂದು ಅಭಿಷೇಕ್ ಅವರ ಆಪ್ತರು ಹೇಳಿರುವುದಾಗಿ ಬಾಲಿವುಡ್ ಹಂಗಾಮ ವರದಿ ಮಾಡಿದೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಅವರು ಅಧಿಕೃತ ಹೇಳಿಕೆ ಬಿಡುಗಡೆ ಮಾಡಬೇಕಿದೆ.

ನಟನೆಯ ಜೊತೆಗೆ ಅಭಿಷೇಕ್ ಬಚ್ಚನ್​ಗೆ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ ಇದೆ. ಅನೇಕ ಬಾರಿ ಅವರು ಐಪಿಎಲ್ ಮ್ಯಾಚ್​ ನೋಡಲು ಬಂದಿದ್ದರು. ಪ್ರೋ ಕಬ್ಬಡಿ ಲೀಗ್​ನಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್​ ತಂಡದ ಮಾಲೀಕತ್ವವನ್ನು ಅಭಿಷೇಕ್ ಹೊಂದಿದ್ದಾರೆ.

ಇದನ್ನೂ ಓದಿ: ‘ಕೆಜಿಎಫ್ 2’, ‘ಆರ್​ಆರ್​ಆರ್’ ಗೆಲುವಿನ ಬಗ್ಗೆ ಅಭಿಷೇಕ್ ಬಚ್ಚನ್ ಹೇಳೋದೇ ಬೇರೆ; ಏನದು?

ಇತ್ತೀಚೆಗೆ ರಿಲೀಸ್ ಆದ ಅಜಯ್ ದೇವಗನ್ ನಟನೆಯ ‘ಭೋಲಾ’ ಸಿನಿಮಾದಲ್ಲಿ ಅಭಿಷೇಕ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಸದ್ಯ ‘ಗೂಮರ್’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ವೆಬ್​ ಸೀರಿಸ್​ಗಳಲ್ಲೂ ಅಭಿಷೇಕ್ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Fri, 21 July 23

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ