AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ 3ನೇ ಮದುವೆಗೆ ದಿನಾಂಕ ನಿಗದಿ; ಜುಲೈ 5ರಂದು ಗೌರಿ ಜೊತೆ ವಿವಾಹ?

ನಟ ಆಮಿರ್ ಖಾನ್ ಅವರಿಗೆ ಈಗ 61 ವರ್ಷ ವಯಸ್ಸು. ಅವರ ಮೂರನೇ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಗೌರಿ ಜೊತೆ ಆಮಿರ್ ಖಾನ್ ಮದುವೆ ಆಗಲಿದ್ದಾರೆ. ಅದಕ್ಕಾಗಿ ದಿನಾಂಕ ನಿಗದಿ ಆಗಿದೆ ಎಂಬ ಮಾಹಿತಿ ಕೇಳಿಬಂದಿದೆ. ತುಂಬಾ ಸರಳವಾಗಿ ವಿವಾಹ ನಡೆಯಲಿದೆ.

ಆಮಿರ್ ಖಾನ್ 3ನೇ ಮದುವೆಗೆ ದಿನಾಂಕ ನಿಗದಿ; ಜುಲೈ 5ರಂದು ಗೌರಿ ಜೊತೆ ವಿವಾಹ?
Gauri Spratt, Aamir Khan
ಮದನ್​ ಕುಮಾರ್​
|

Updated on: Jun 03, 2026 | 6:51 PM

Share

ಬಾಲಿವುಡ್‌ ನಟ ಆಮಿರ್ ಖಾನ್ (Aamir Khan) ಅವರು ಮತ್ತೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳತಿ ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಜುಲೈ 5ರಂದು ಆಮಿರ್ ಖಾನ್ ಸರಳವಾಗಿ ಮದುವೆ (Aamir Khan Wedding) ಆಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಆಮಿರ್ ಖಾನ್ ಅವರು ಗೌರಿ ಸ್ಪ್ರ್ಯಾಟ್ ಜೊತೆಗಿನ ಪ್ರೀತಿಯನ್ನು ಅಧಿಕೃತವಾಗಿ ಮಾಧ್ಯಮಗಳ ಮುಂದೆ ಒಪ್ಪಿಕೊಂಡಿದ್ದರು. ಅದಕ್ಕೂ ಒಂದು ವರ್ಷದ ಮೊದಲಿನಿಂದಲೇ ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದರು.

ವರದಿಗಳ ಪ್ರಕಾರ, ಈ ಜೋಡಿಯು ಯಾವುದೇ ಅದ್ದೂರಿ ವಿವಾಹ ಮಹೋತ್ಸವ ಅಥವಾ ಗ್ರ್ಯಾಂಡ್ ರಿಸೆಪ್ಷನ್ ಹಮ್ಮಿಕೊಳ್ಳುತ್ತಿಲ್ಲ. ಕೇವಲ ಅತ್ಯಾಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಜುಲೈ 5ರಂದು ಸರಳವಾಗಿ ಕೋರ್ಟ್ ಮ್ಯಾರೇಜ್ ಮಾಡಿಕೊಳ್ಳುವ ಮೂಲಕ ತಮ್ಮ ದಾಂಪತ್ಯ ಜೀವನವನ್ನು ಅಧಿಕೃತಗೊಳಿಸಲಿದ್ದಾರೆ ಎಂದು ವರದಿ ಆಗಿದೆ.

‘ಆಮೀರ್ ಮತ್ತು ಗೌರಿ ಕಳೆದ ಒಂದು ವರ್ಷದಿಂದ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದಾರೆ. ಒಟ್ಟಿಗೆ ಖುಷಿಯಾದ ಜೀವನ ನಡೆಸುತ್ತಿರುವ ಇಬ್ಬರು, ಈಗ ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ’ ಎಂದು ಆಪ್ತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಗೌರಿ ಸ್ಪ್ರ್ಯಾಟ್ ಅವರಿಗೆ ಈಗಾಗಲೇ 7 ವರ್ಷದ ಮಗನಿದ್ದಾನೆ. ಆಮಿರ್ ಖಾನ್ ಮತ್ತು ಗೌರಿ ಅವರು ಕಳೆದ 25 ವರ್ಷಗಳಿಂದ ಒಳ್ಳೆಯ ಸ್ನೇಹಿತರಾಗಿದ್ದರು. ಸುದೀರ್ಘ ಸ್ನೇಹದ ಬಳಿಕ ಇಬ್ಬರ ನಡುವೆ ಪ್ರೀತಿ ಚಿಗುರೊಡೆದು, ಈಗ ಮದುವೆಯ ಹಂತಕ್ಕೆ ಬಂದು ತಲುಪಿದೆ.

ಆಮಿರ್ ಖಾನ್ ಮೊದಲು ರೀನಾ ದತ್ತಾ ಅವರನ್ನು 1986ರಲ್ಲಿ ಮದುವೆಯಾಗಿದ್ದರು. ಈ ದಂಪತಿಗೆ ಜುನೈದ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. 2002ರಲ್ಲಿ ಅವರು ವಿಚ್ಛೇದನ ಪಡೆದರು. ಬಳಿಕ 2005ರಲ್ಲಿ ನಿರ್ದೇಶಕಿ ಕಿರಣ್ ರಾವ್ ಅವರನ್ನು ವಿವಾಹವಾದರು. ಈ ಜೋಡಿಗೆ ಆಜಾದ್ ಎಂಬ ಮಗನಿದ್ದಾನೆ. ಆದರೆ 2021ರಲ್ಲಿ ಇವರಿಬ್ಬರು ಪರಸ್ಪರ ಒಪ್ಪಿಗೆಯಿಂದ ಬೇರೆಯಾದರು. ವಿಚ್ಛೇದನದ ಬಳಿಕವೂ ಮಗನ ಜವಾಬ್ದಾರಿಯನ್ನು ಇಬ್ಬರು ಒಟ್ಟಿಗೆ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: ಮಗಳು ಖಂಡಿತಾ 10ನೇ ತರಗತಿ ಫೇಲ್ ಆಗುತ್ತಾಳೆ ಎಂದುಕೊಂಡಿದ್ದ ಆಮಿರ್ ಖಾನ್; ಆದರೆ ಆಗಿದ್ದೇನು?

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಪ್ರೀತಿಯ ಬಗ್ಗೆ ಮಾತನಾಡಿದ್ದ ಆಮಿರ್ ಖಾನ್, ‘ನನ್ನ ಜೀವನಕ್ಕೆ ಗೌರಿ ಬಂದಿರುವುದು ನನ್ನ ಅದೃಷ್ಟ. ಅವಳ ಜೊತೆ ಇದ್ದರೆ ನನಗೆ ನೆಮ್ಮದಿ ಸಿಗುತ್ತದೆ. ರೀನಾ ಮತ್ತು ಕಿರಣ್ ರಾವ್ ಜೊತೆಗಿನ ನನ್ನ ಸಂಬಂಧವೂ ಆಳವಾಗಿತ್ತು, ಆದರೆ ಕೆಲವು ಕಾರಣಗಳಿಂದ ಅದು ವರ್ಕೌಟ್ ಆಗಲಿಲ್ಲ. ಆದರೆ ಗೌರಿ ನನ್ನ ಜೀವನಕ್ಕೆ ಬಂದ ಮೇಲೆ ನಾನು ಪರಿಪೂರ್ಣನಾಗಿದ್ದೇನೆ ಎನಿಸುತ್ತಿದೆ’ ಎಂದು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ