AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್​ ಬಚ್ಚನ್​ಗೆ ಶಸ್ತ್ರಚಿಕಿತ್ಸೆ: ಫೋಟೋ ಹಂಚಿಕೊಂಡು ಘಟನೆ ವಿವರಿಸಿದ ನಟ…

ಚೆನ್ನೈನಲ್ಲಿ ಶೂಟಿಂಗ್​ ಮಾಡುವಾಗ ಅಭಿಷೇಕ್​ ಬಚ್ಚನ್​ಗೆ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆಪರೇಷನ್​ ಆದ ಬಳಿಕ ಅವರು ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ್ದಾರೆ.

ಅಭಿಷೇಕ್​ ಬಚ್ಚನ್​ಗೆ ಶಸ್ತ್ರಚಿಕಿತ್ಸೆ: ಫೋಟೋ ಹಂಚಿಕೊಂಡು ಘಟನೆ ವಿವರಿಸಿದ ನಟ...
ಅಭಿಷೇಕ್​ ಬಚ್ಚನ್
TV9 Web
| Edited By: |

Updated on:Aug 26, 2021 | 12:02 PM

Share

ನಟ ಅಭಿಷೇಕ್​ ಬಚ್ಚನ್​ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅಪ್ಪ ಅಮಿತಾಭ್​ ಬಚ್ಚನ್​ ಸೂಪರ್​ ಸ್ಟಾರ್​ ಆಗಿದ್ದರೂ ಕೂಡ ಅಭಿಷೇಕ್​ ಅವರು ಚಿತ್ರರಂಗದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಪರಿಶ್ರಮ ಪಡುತ್ತಲೇ ಇದ್ದಾರೆ. ಇತ್ತೀಚೆಗೆ ಅವರ ಬಗ್ಗೆ ಒಂದು ಆಘಾತಕಾರಿ ಸುದ್ದಿ ಕೇಳಿಬಂದಿತ್ತು. ಶೂಟಿಂಗ್​ ವೇಳೆ ಪೆಟ್ಟು ಮಾಡಿಕೊಂಡಿರುವ ಅವರಿಗೆ ತೀವ್ರ ಗಾಯಗಳಾಗಿವೆ ಎನ್ನಲಾಗಿತ್ತು. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ ಈಗ ಈ ಬಗ್ಗೆ ಸ್ವತಃ ಅಭಿಷೇಕ್​ ಬಚ್ಚನ್​ ಅವರೇ ಸ್ಪಷ್ಟನೆ ನೀಡಿದ್ದಾರೆ. ಫೋಟೋ ಸಮೇತ ಎಲ್ಲವನ್ನೂ ವಿವರಿಸಿದ್ದಾರೆ.

ಶೂಟಿಂಗ್​ ಮಾಡುವಾಗ ಅಭಿಷೇಕ್​ ಬಚ್ಚನ್​ ಅವರಿಗೆ ಪೆಟ್ಟಾಗಿದ್ದು ನಿಜ. ಈಗ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಮುಂಬೈನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನೆರವೇರಿದ ಬಳಿಕ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಹೆಚ್ಚೇನೂ ತೊಂದರೆ ಆಗಿಲ್ಲ ಎಂಬುದು ಗೊತ್ತಾದ ಬಳಿಕ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದಷ್ಟು ಬೇಗ ಅಭಿಷೇಕ್​ ಬಚ್ಚನ್ ಗುಣಮುಖರಾಗಲಿ ಎಂದು ಸ್ನೇಹಿತರು, ಕುಟುಂಬದವರು, ಅಭಿಮಾನಿಗಳು ಹಾರೈಸುತ್ತಿದ್ದಾರೆ.

‘ನನ್ನ ಹೊಸ ಸಿನಿಮಾದ ಶೂಟಿಂಗ್​ ವೇಳೆ ಚೆನ್ನೈನಲ್ಲಿ ಬುಧವಾರ (ಆ.18) ಅವಘಡ ಸಂಭವಿಸಿತು. ಬಲಗೈಗೆ ಪೆಟ್ಟಾಯಿತು. ಸರ್ಜರಿ ಮಾಡುವುದು ಅನಿವಾರ್ಯ ಆಗಿತ್ತು. ಕೂಡಲೇ ಮುಂಬೈಗೆ ಹೊರಟುಬಂದೆ. ಸರ್ಜರಿ ಆಗಿದೆ. ಎಲ್ಲವೂ ಸರಿ ಆಗಿದೆ. ಶೂಟಿಂಗ್​ ಮುಂದುವರಿಸಲು ಈಗ ಮತ್ತೆ ಚೆನ್ನೈಗೆ ಮರಳಿದ್ದೇನೆ. ಶೋ ಮಸ್ಟ್​ ಗೋ ಆನ್​. ನನ್ನ ತಂದೆ ಹೇಳಿದಂತೆ, ಗಂಡಸರಿಗೆ ನೋವಾಗುವುದಿಲ್ಲ. ಓಕೆ ಓಕೆ ಸ್ವಲ್ಪ ನೋವಾಗುತ್ತದೆ. ನಿಮ್ಮೆಲ್ಲರ ಹಾರೈಕೆ ಮತ್ತು ಕಾಳಜಿಯ ಸಂದೇಶಕ್ಕಾಗಿ ಧನ್ಯವಾದಗಳು’ ಎಂದು ಅಭಿಷೇಕ್​ ಬಚ್ಚನ್​ ಪೋಸ್ಟ್​ ಮಾಡಿದ್ದಾರೆ.

ಈ ಪೋಸ್ಟ್​ಗೆ ಅಭಿಷೇಕ್​ ಸಹೋದರಿ ಶ್ವೇತಾ ನಂದಾ ಬಚ್ಚನ್​ ಅವರು ‘ಅತ್ಯುತ್ತಮ ರೋಗಿ’ ಎಂದು ಕಮೆಂಟ್​ ಮಾಡಿದ್ದಾರೆ. ‘ಆದಷ್ಟು ಬೇಗ ನೀವು ಚೇತರಿಸಿಕೊಳ್ಳುತ್ತೀರಿ ಎಂಬ ಭರವಸೆ ಇದೆ’ ಎಂದು ಬಾಬಿ ಡಿಯೋಲ್​ ಕಮೆಂಟ್​ ಮಾಡಿದ್ದಾರೆ. ಕಳೆದ ವರ್ಷ ಕೂಡ ಅಭಿಷೇಕ್​ ಬಚ್ಚನ್​ ಅವರಿಗೆ ಆರೋಗ್ಯ ಕೈಕೊಟ್ಟಿತ್ತು. ಅವರ ಇಡೀ ಕುಟುಂಬಕ್ಕೆ ಕೊರೊನಾ ವೈರಸ್​ ತಗುಲಿತ್ತು. ತಿಂಗಳಿಗೂ ಹೆಚ್ಚು ಸಮಯ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇರಬೇಕಾಗಿತ್ತು. ಬಳಿಕ ಅವರು ಗುಣಮುಖರಾಗಿ ಮನೆಗೆ ಮರಳಿದ್ದರು.

ಸದ್ಯ ಅಭಿಷೇಕ್​ ಬಚ್ಚನ್​ ‘ದಸ್ವಿ’ ಮತ್ತು ‘ಬಾಬ್​ ಬಿಸ್ವಾಸ್​’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ವೆಬ್​ ಸಿರೀಸ್​ಗಳಲ್ಲೂ ಅವರಿಗೆ ಸಖತ್ ಬೇಡಿಕೆ ಇದೆ. ಆ ಮೂಲಕ ಓಟಿಟಿ ವೇದಿಕೆಯಲ್ಲೂ ಅವರು ಮಿಂಚುತ್ತಿದ್ದಾರೆ.

ಇದನ್ನೂ ಓದಿ:

ಅಭಿಷೇಕ್​ ಬಚ್ಚನ್​ ಖಾತೆಗೆ ಬಿತ್ತು 45.75 ಕೋಟಿ ರೂಪಾಯಿ; ಆದರೆ ಸಿನಿಮಾದಿಂದಲ್ಲ, ಅಚ್ಚರಿಗೊಂಡ ಫ್ಯಾನ್ಸ್​

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

Published On - 11:45 am, Thu, 26 August 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್