AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕ ವಸ್ತು ಪ್ರಕರಣ: ನಟ ಏಜಾಜ್ ಖಾನ್ ಪತ್ನಿ ಬಂಧನ

Actor Ajaz Khan: ನ್ನಡ, ತೆಲುಗು, ತಮಿಳು, ಹಿಂದಿಯ ಹಲವಾರು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ಏಜಾಜ್ ಖಾನ್ ಜನಪ್ರಿಯ ನಟ. ಇದೀಗ ಅವರ ಪತ್ನಿಯನ್ನು ಮಾದಕ ವಸ್ತು ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಾದಕ ವಸ್ತು ಪ್ರಕರಣ: ನಟ ಏಜಾಜ್ ಖಾನ್ ಪತ್ನಿ ಬಂಧನ
Ajaz Khan
ಮಂಜುನಾಥ ಸಿ.
|

Updated on:Dec 01, 2024 | 3:41 PM

Share

ಹಿಂದಿ, ಕನ್ನಡ, ತೆಲುಗು, ತಮಿಳು ಹಲವು ಭಾಷೆಗಳ ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ಖ್ಯಾತ ಬಾಲಿವುಡ್ ನಟ ಏಜಾಜ್ ಖಾನ್ ಇತ್ತೀಚೆಗಷ್ಟೆ ಸುದ್ದಿಯಲ್ಲಿದ್ದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅವರಿಗೆ 156 ಮತಗಳಷ್ಟೆ ಬಿದ್ದಿದ್ದವು, ಆದರೆ ಅವರ ಇನ್​ಸ್ಟಾಗ್ರಾಂನಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳಿದ್ದಾರೆ. ಇದೀಗ ಏಜಾಜ್ ಖಾನ್​ ಮತ್ತೆ ಸುದ್ದಿಯಲ್ಲಿದ್ದಾರೆ. ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಏಜಾಜ್ ಖಾನ್ ಪತ್ನಿ ಫಲನ್ ಗುಲಿವಾಲ ಅವರನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈನ ಅವರ ಜೋಗೇಶ್ವರಿ ನಿವಾಸದಲ್ಲಿಯೇ ಫಲನ್ ಗುಲಿವಾಲ ಅವರನ್ನು ಬಂಧಿಸಲಾಗಿದೆ. ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಫಲನ್ ಬಂಧನ ಆಗಿದೆ.

ಕೆಲ ದಿನದ ಹಿಂದಷ್ಟೆ ಖಾನ್​ರ ಕಚೇರಿಯಲ್ಲಿ ಕೆಲಸ ಮಾಡುವ ಸೂರಜ್ ಗೌಡ ಎಂಬಾತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಪ್ರಶ್ನೆ ಮಾಡಿದ್ದರು. ಖಾನ್​ ಬಳಿ ಕೆಲಸ ಮಾಡುವ ಸೂರಜ್, ಕೆಲ ದಿನಗಳ ಹಿಂದೆ ಯೂರೋಪ್ ದೇಶದಿಂದ 100 ಗ್ರಾಂ ಮಾದಕ ವಸ್ತುವನ್ನು ಪಾರ್ಸಲ್ ಮೂಲಕ ತರಿಸಿಕೊಂಡಿದ್ದರಂತೆ. ಸೂರಜ್ ಗೌಡ ವಿಚಾರಣೆಯಿಂದ ಈ ಪ್ರಕರಣದಲ್ಲಿ ಏಜಾಜ್ ಖಾನ್ ಪತ್ನಿ ಫಲನ್ ಸಹ ಪಾಲಿರುವುದು ತಿಳಿದು ಬಂದು ಆಕೆಯನ್ನು ಸಹ ಇದೀಗ ಬಂಧಿಸಲಾಗಿದೆ.

ಇದನ್ನೂ ಓದಿ:56 ಲಕ್ಷ ಹಿಂಬಾಲಕರಿದ್ದರೂ, ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಟ

ಏಜಾಜ್ ಖಾನ್​ರ ಜೋಗೇಶ್ವರಿ ಅಪಾರ್ಟ್​ಮೆಂಟ್​ ಮೇಲೆ ದಾಳಿ ನಡೆಸಿದ ಕಸ್ಟಮ್ಸ್ ಅಧಿಕಾರಿಗಳಿಗೆ 150 ಗ್ರಾಂನಷ್ಟು ಗಾಂಜಾ ಮತ್ತು ಇತರೆ ಕೆಲವು ಮಾದಕ ವಸ್ತುಗಳು ದೊರೆತಿದ್ದವು. ಕಸ್ಟಮ್ಸ್ ಅಧಿಕಾರಿಗಳು ಫಲನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಏಜಾಜ್ ಖಾನ್ ಅನ್ನೂ ಸಹ ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಿದ್ದಾರೆ ಕಸ್ಟಮ್ಸ್ ಅಧಿಕಾರಿಗಳು.

ಏಜಾಜ್ ಖಾನ್​ ಬಾಲಿವುಡ್​ನ ಜನಪ್ರಿಯ ನಟ. ಕನ್ನಡ, ತೆಲುಗು, ತಮಿಳು, ಹಿಂದಿಯ ಹಲವಾರು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ಏಜಾಜ್ ಖಾನ್ ನಟಿಸಿದ್ದಾರೆ. ಅಂದಹಾಗೆ ಏಜಾಜ್ ಖಾನ್ ಸಹ ಈ ಹಿಂದೆ ಮಾದಕ ವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದರು. ಇದೀಗ ಅವರ ಪತ್ನಿ ಮಾದಕ ವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sun, 1 December 24

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ