Amitabh Bachchan: ‘ನನ್ನ ದುಡ್ಡು ಹೋಯ್ತು, ಈಗೇನು ಮಾಡ್ಲಿ?’; ಟ್ವಿಟರ್ ವಿರುದ್ಧ ಅಮಿತಾಭ್ ಬಚ್ಚನ್ ಅಸಮಾಧಾನ

ಟ್ವಿಟರ್ ಹೊಸಹೊಸ ನಿಯಮಗಳ ಬಗ್ಗೆ ನಟ ಅಮಿತಾಭ್ ಬಚ್ಚನ್ ಅಸಮಾಧಾನ ಹೊರಹಾಕಿದ್ದಾರೆ. ‘ನಾನು ದುಡ್ಡು ಕಳೆದುಕೊಂಡೆ’ ಎಂದು ಅವರು ಹೇಳಿದ್ದಾರೆ.

Amitabh Bachchan: ‘ನನ್ನ ದುಡ್ಡು ಹೋಯ್ತು, ಈಗೇನು ಮಾಡ್ಲಿ?’; ಟ್ವಿಟರ್ ವಿರುದ್ಧ ಅಮಿತಾಭ್ ಬಚ್ಚನ್ ಅಸಮಾಧಾನ
ಅಮಿತಾಭ್ ಬಚ್ಚನ್

Updated on: Apr 24, 2023 | 12:37 PM

ಎಲಾನ್ ಮಸ್ಕ್​ (Elon Musk) ಟ್ವಿಟರ್ ಸಿಇಒ ಆದ ಬಳಿಕ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಟ್ವಿಟರ್​​ನಲ್ಲಿ ಬ್ಲೂಟಿಕ್ ಪಡೆಯಲು ಹಣ ಪಾವತಿಸಬೇಕು ಎನ್ನುವ ನಿಯಮವನ್ನು ಅವರು ಜಾರಿಗೆ ತಂದಿದ್ದಾರೆ. ಈ ಬೆನ್ನಲ್ಲೇ ಎಲ್ಲಾ ಖಾತೆಗಳ ಬ್ಲೂಟಿಕ್ ಮಾಯವಾಗಿತ್ತು. ಇದಕ್ಕೆ ಸೆಲೆಬ್ರಿಟಿ ವಲಯದಿಂದ ವಿರೋಧ ವ್ಯಕ್ತವಾಯಿತು. ಕೋಟ್ಯಾಂತರ ಹಿಂಬಾಲಕರನ್ನು ಹೊಂದಿರುವ ಸೆಲೆಬ್ರಿಟಿಗಳು ಈ ಬಗ್ಗೆ ಅಸಮಾಧಾನ ಹೊರಹಾಕಿದರು. ಈ ಬೆನ್ನಲ್ಲೇ ಎಲಾನ್ ಮಸ್ಕ್ ಮತ್ತೆ ನಿಯಮ ಬದಲಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ನಟ ಅಮಿತಾಭ್ ಬಚ್ಚನ್ (Amitabh Bachchan) ಅಸಮಾಧಾನ ಹೊರಹಾಕಿದ್ದಾರೆ. ‘ನಾನು ದುಡ್ಡು ಕಳೆದುಕೊಂಡೆ’ ಎಂದು ಅವರು ಹೇಳಿದ್ದಾರೆ.

ಬ್ಲೂಟಿಕ್ ಮಾಯವಾದ ಬೆನ್ನಲ್ಲೇ ಅನೇಕ ಸೆಲೆಬ್ರಿಟಿಗಳು ಸಿಟ್ಟಾದರು. ಕೆಲವರು ತಾವು ಹಣ ಪಾವತಿಸುವುದಿಲ್ಲ ಎಂದು ನೇರವಾಗಿಯೇ ಹೇಳಿದರು. ಈ ಬೆನ್ನಲೇ ಹಲವು ಸೆಲೆಬ್ರಿಟಿಗಳಿಗೆ ಬ್ಲೂಟಿಕ್ ಮರಳಿ ಸಿಕ್ಕಿದೆ. ಇದಕ್ಕೆ ಕಾರಣವೂ ಇದೆ. 1 ಮಿಲಿಯನ್ ಅಂದರೆ 10 ಲಕ್ಷಕ್ಕಿಂತ ಅಧಿಕ ಹಿಂಬಾಲಕರು ಇರುವ ಟ್ವಿಟರ್​ ಬಳಕೆದಾರರ ಖಾತೆಯಲ್ಲಿ ಬ್ಲೂಟಿಕ್ ಹಾಗೆಯೇ ಉಳಿಯುತ್ತದೆ ಎಂದು ಎಲಾನ್ ಮಸ್ಕ್ ಹೇಳಿದ್ದಾರೆ. ಹೀಗಾಗಿ, 1 ಮಿಲಿಯನ್​ಗಿಂತ ಅಧಿಕ ಫಾಲೋವರ್ಸ್ ಇರುವವರ ಖಾತೆಗೆ ಬ್ಲೂಟಿಕ್ ಮರಳಿದೆ.

ಈ ಬೆಳವಣಿಗೆ ಬಗ್ಗೆ ಅಮಿತಾಭ್ ಬಚ್ಚನ್ ಅಸಮಾಧಾನ ಹೊರಹಾಕಿದ್ದಾರೆ. ಬ್ಲೂಟಿಕ್ ಪಡೆಯಲು ಅವರು ಹಣ ಪಾವತಿಸಿದ್ದರು. ಆ ಬಳಿಕ ಮಸ್ಕ್ ಕಡೆಯಿಂದ ಹೊಸ ಘೋಷಣೆ ಆಯಿತು. ‘ಬ್ಲೂಟಿಕ್ ಪಡೆಯಲು ಹಣ ಪಾವತಿಸಬೇಕು ಎಂದಿರಿ. ನಾನು ಹಣ ಪಾವತಿಸಿದೆ. ಆದರೆ, 1 ಮಿಲಿಯನ್​ಗಿಂತ ಹೆಚ್ಚಿನ ಹಿಂಬಾಲಕರಿದ್ದರೆ ಅವರ ಬ್ಲೂಟಿಕ್​ ಹಾಗೆಯೇ ಇರುತ್ತದೆ ಎಂದು ಈಗ ನೀವು ಹೇಳುತ್ತಿದ್ದೀರಿ. ನನಗೆ 48.4 ಮಿಲಿಯನ್ ಹಿಂಬಾಲಕರಿದ್ದಾರೆ. ನನ್ನ ಹಣ ಈಗಾಗಲೇ ಹೋಗಿದೆ. ನಾನೀಗ ಏನು ಮಾಡಬೇಕು?’ ಎಂದು ಅಮಿತಾಭ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ವಿಟರ್ ಹೊಸ ನಿಯಮ; ಯಶ್, ಅಲ್ಲು ಅರ್ಜುನ್ ಸೇರಿ ಎಲ್ಲಾ ಸೆಲೆಬ್ರಿಟಿಗಳ ಬ್ಲೂಟಿಕ್ ಮಾಯ

ಅಲ್ಲು ಅರ್ಜುನ್, ಅಮಿತಾಭ್ ಬಚ್ಚನ್ ಮೊದಲಾದವರು ಬ್ಲೂಟಿಕ್ ಕಳೆದುಕೊಂಡಿದ್ದರು. ಆದರೆ, ಇವರೆಲ್ಲರಿಗೂ ಒಂದು ಮಿಲಿಯನ್​ಗೂ ಅಧಿಕ ಹಿಂಬಾಲಕರು ಇರುವುದರಿಂದ ಟ್ವಿಟರ್ ಬ್ಲೂ ಟಿಕ್ ಮರಳಿದೆ. ಸದ್ಯ ಈ ಬಗ್ಗೆ ಅನೇಕ ಗೊಂದಲಗಳು ಮುಂದುವರಿದಿವೆ. ನಕಲಿ ಖಾತೆಗಳು ಹಣ ಪಾವತಿಸಿ ಬ್ಲೂಟಿಕ್ ಪಡೆಯಬಹುದು ಎನ್ನುವ ಭಯ ಕೆಲವರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:36 pm, Mon, 24 April 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us