AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಅಮಿತಾಭ್​ ಬಚ್ಚನ್​ಗೆ ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ

ಖ್ಯಾತ ನಟ ಅಮಿತಾಭ್​ ಬಚ್ಚನ್​ ಅವರಿಗೆ ಈಗಾಗಲೇ ಹಲವು ಪ್ರಶಸ್ತಿಗಳು ಬಂದಿವೆ. ಈಗ ಅವರ ಮುಡಿಗೆ ಇನ್ನೊಂದು ಗರಿ ಸೇರ್ಪಡೆ ಆಗುತ್ತಿದೆ. ಏಪ್ರಿಲ್ 24ರಂದು ಅಮಿತಾಭ್​ ಬಚ್ಚನ್​ ಅವರಿಗೆ ‘ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಚಿತ್ರರಂಗದಲ್ಲಿ ಬಿಗ್​-ಬಿ ಮಾಡಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ನಟ ಅಮಿತಾಭ್​ ಬಚ್ಚನ್​ಗೆ ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ
ಅಮಿತಾಭ್​ ಬಚ್ಚನ್​
ಮದನ್​ ಕುಮಾರ್​
|

Updated on: Apr 18, 2024 | 3:55 PM

Share

ಸಿನಿಮಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ, ಆ ಮೂಲಕ ದೇಶಕ್ಕೆ ಕೊಡುಗೆ ನೀಡಿದ ಬಾಲಿವುಡ್ (Bollywood) ನಟ ಅಮಿತಾಭ್​ ಬಚ್ಚನ್ ಅವರಿಗೆ ಪ್ರತಿಷ್ಠಿತ ‘ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ’ಯನ್ನು (Lata Deenanath Mangeshkar Award) ನೀಡಿ ಗೌರವಿಸಲಾಗುತ್ತಿದೆ. ಮಂಗೇಶ್ಕರ್ ಕುಟುಂಬವು ಈ ಪ್ರಶಸ್ತಿಯನ್ನು ನೀಡುತ್ತಿದೆ. ಭಾರತೀಯ ಸಿನಿಮಾ, ಸಂಸ್ಕೃತಿ ಮತ್ತು ಸಮಾಜದ ಮೇಲೆ ಅಮಿತಾಭ್​ ಬಚ್ಚನ್ (Amitabh Bachchan) ಅವರು ಬೀರಿದ ಪ್ರಭಾವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ಮೂಲಕ ಪ್ರಶಸ್ತಿ ಘೋಷಣೆ ಮಾಡಲಾಯಿತು. ಈ ಮೊದಲು ಇದೇ ಪ್ರಶಸ್ತಿ ಪಡೆದ ನರೇಂದ್ರ ಮೋದಿ ಹಾಗೂ ಗಾಯಕಿ ಆಶಾ ಭೋಂಸ್ಲೆ ಅವರ ಸಾಲಿಗೆ ಈಗ ಅಮಿತಾಭ್​ ಬಚ್ಚನ್​ ಸೇರ್ಪಡೆ ಆಗುತ್ತಿದ್ದಾರೆ.

‘ಭಾರತ ರತ್ನ’ ಪ್ರಶಸ್ತಿ ಪುರಸ್ಕೃತೆ, ದಿವಂಗತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ‘ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ’ ನೀಡುತ್ತಿರುವ ಈ ಪ್ರಶಸ್ತಿಯು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗುರುತಿಸುತ್ತದೆ. ಅಮಿತಾಬ್​ ಬಚ್ಚನ್ ಅವರ ಜೊತೆಗೆ, ಅತ್ಯುತ್ತಮ ಸಾಧನೆ ಮಾಡಿದ ಹಲವಾರು ದಿಗ್ಗಜರಿಗೆ ಈ ಪ್ರಶಸ್ತಿ ಸಿಗುತ್ತಿದೆ.

ಇದನ್ನೂ ಓದಿ: ಎರಡನೇ ಬಾರಿ ಅಯೋಧ್ಯೆಗೆ ಭೇಟಿ ನೀಡಿದ ‘ಬಿಗ್​ ಬಿ’ ಅಮಿತಾಭ್​ ಬಚ್ಚನ್​

ಇದರ ಜೊತೆಗೆ ‘ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಗುವುದು. ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ಹಿರಿಯ ಮರಾಠಿ ಸಿನಿಮಾ ಕಲಾವಿದ ಅಶೋಕ್ ಸರಾಫ್, ಮರಾಠಿ ನಟಿ ಪದ್ಮಿನಿ ಕೊಲ್ಹಾಪುರೆ, ಗಾಯಕ ರೂಪ್‌ಕುಮಾರ್ ರಾಥೋಡ್, ಮರಾಠಿ ರಂಗಭೂಮಿಯ ದಿಗ್ಗಜ ಅತುಲ್ ಪರ್ಚುರೆ ಹಾಗೂ ಖ್ಯಾತ ಲೇಖಕಿ ಮಂಜಿರಿ ಫಡ್ಕೆ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ನಟ, ನಿರ್ದೇಶಕ, ನಿರ್ಮಾಪಕ ರಣದೀಪ್ ಹೂಡಾ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ವಿಶೇಷ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ದೀನನಾಥ್ ಮಂಗೇಶ್ಕರ್ ನಾಟ್ಯಗೃಹದಲ್ಲಿ ಏಪ್ರಿಲ್ 24ರಂದು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಸಂಗೀತ ನಿರ್ದೇಶಕ ಹೃದಯನಾಥ್ ಮಂಗೇಶ್ಕರ್, ಗಾಯಕಿ ಉಷಾ ಮಂಗೇಶ್ಕರ್ ಮತ್ತು ಹೃದಯನಾಥ್ ಅವರ ಪುತ್ರ ಆದಿನಾಥ್ ಮಂಗೇಶ್ಕರ್ ಹಾಜರಿದ್ದರು. ಕಳೆದ 34 ವರ್ಷಗಳಲ್ಲಿ 212 ಗಣ್ಯ ವ್ಯಕ್ತಿಗಳನ್ನು ಗೌರವಿಸಿ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ