Sign In

By signing in or creating an account, you agree with Associated Broadcasting Company's Terms & Conditions and Privacy Policy.

Pavithra Gowda: ‘ಇದಕ್ಕೆಲ್ಲ ನೀನೇ ಕಾರಣ’; ಪವಿತ್ರಾ ಗೌಡ ಮೇಲೆ ಹಲ್ಲೆ ಮಾಡಿದ ದರ್ಶನ್?

ದರ್ಶನ್ ಹಾಗೂ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ಪವಿತ್ರಾ ಗೌಡಗೆ ಕಿರುಕುಳ ನೀಡಿದ್ದರಿಂದಲೇ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಯಿತು ಎಂದು ವರದಿ ಆಗಿದೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದ. ದರ್ಶನ್ ಅವರು ಪವಿತ್ರಾ ಮೇಲೂ ಹಲ್ಲೆ ಮಾಡಿದ್ದರು ಎಂದು ವರದಿ ಆಗಿದೆ.

Pavithra Gowda: ‘ಇದಕ್ಕೆಲ್ಲ ನೀನೇ ಕಾರಣ’; ಪವಿತ್ರಾ ಗೌಡ ಮೇಲೆ ಹಲ್ಲೆ ಮಾಡಿದ ದರ್ಶನ್?
ದರ್ಶನ್-ಪವಿತ್ರಾ
Follow us
Kiran HV
| Updated By: ರಾಜೇಶ್ ದುಗ್ಗುಮನೆ

Updated on: Jun 11, 2024 | 12:56 PM

ನಟ ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್​ನಲ್ಲಿ ದರ್ಶನ್ ಕೈವಾಡ ಇದೆ ಎನ್ನಲಾಗಿದೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ. ಇದರಲ್ಲಿ ದರ್ಶನ್ ಕೈವಾಡ ಕೂಡ ಇದೆ ಎನ್ನಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚಾರವೊಂದು ಬೆಳಕಿಗೆ ಬಂದಿದೆ. ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ.

ದರ್ಶನ್ ಹಾಗೂ ಪವಿತ್ರಾ ಮಧ್ಯೆ ಆಪ್ತತೆ ಇದೆ. ಕಳೆದ 10 ವರ್ಷಗಳಿಂದ ಇವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಬೇರೆ ಬೇರೆ ಕಡೆಗಳಲ್ಲಿ ಸುತ್ತಾಡಿದ ಫೋಟೋಗಳನ್ನು ಹಂಚಿಕೊಂಡಿದ್ದರು. ಪವಿತ್ರಾಗೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯ ಕೊಲೆ ಆಯಿತು ಎನ್ನಲಾಗಿದೆ. ಈ ಮಧ್ಯೆ ಹಲ್ಲೆ ವಿಚಾರ ಚರ್ಚೆ ಆಗಿದೆ.

ರೇಣುಕಾಸ್ವಾಮಿ ಕೊಲೆ ಬಳಿಕ ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ‘ನಿನ್ನಿಂದ ಹೀಗೆಲ್ಲಾ ಆಯಿತು’ ಎಂದು ದರ್ಶನ್ ಕೂಗಾಡಿದ್ದರು ಎಂದು ವರದಿ ಆಗಿದೆ. ಹಲ್ಲೆಗೊಳಗಾದ ಪವಿತ್ರಾಗೆ ಬೆಂಗಳೂರಿನ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋಮವಾರ (ಜೂನ್ 10) ಪವಿತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ದರ್ಶನ್-ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದಕ್ಕೆ ಇತ್ತು ಕೋಪ?

ದರ್ಶನ್ ಹಾಗೂ ದರ್ಶನ್ ಅವರ ಸಂಗಡಿಗರು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ವಿಚಾರ ಸುಳ್ಳಾಗಿರಲಿ ಎಂದು ಅನೇಕರು ಕೇಳಿಕೊಳ್ಳುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಹೆಸರು ಇದ್ದಿದ್ದು ನಿಜವೇ ಆದಲ್ಲಿ ಆತನಿಗೆ ಶಿಕ್ಷೆ ಆಗಲಿ ಎಂದು ಅನೇಕರು ಆಗ್ರಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಿಲ್ಲರ್ ಕುಸಿತ: ತಪ್ಪಿದ ಅನಾಹುತ
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಿಲ್ಲರ್ ಕುಸಿತ: ತಪ್ಪಿದ ಅನಾಹುತ