AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಹೆಸರು ಬದಲಿಸಿದ ನಟ ಧರ್ಮೇಂದ್ರ

ಕೃತಿ ಸನೋನ್ ಹಾಗೂ ಶಾಹಿದ್ ಕಪೂರ್ ನಟನೆಯ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಲ್ಲಿ ಧರ್ಮೇಂದ್ರ ಅವರು ಬಣ್ಣ ಹಚ್ಚಿದ್ದಾರೆ. ಕಥಾ ನಾಯಕ ಶಾಹಿದ್ ಅವರ ತಾತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಹೆಸರು ಬದಲಿಸಿದ ನಟ ಧರ್ಮೇಂದ್ರ
ಧರ್ಮೇಂದ್ರ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Feb 14, 2024 | 3:00 PM

Share

ನಟ ಧರ್ಮೇಂದ್ರ (Dharmendra) ಅವರು ಬಾಲಿವುಡ್​ನ ಬೇಡಿಕೆಯ ಹೀರೋ ಆಗಿದ್ದರು. 60 ದಶಕದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ನಟನೆ ಮುಂದವರಿಸಿದ್ದಾರೆ. ಪೋಷಕ ಪಾತ್ರಗಳ ಮೂಲಕ ಅವರು ಈಗ ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಅವರು ಹೆಸರು ಬದಲಿಸಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿರೋದು ಫೆಬ್ರವರಿ 9ರಂದು ರಿಲೀಸ್ ಆದ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ. ಈ ಚಿತ್ರದಲ್ಲಿ ಧರ್ಮೇಂದ್ರ ಅವರು ನಟಿಸಿದ್ದಾರೆ.

ಶಾಹಿದ್ ಕಪೂರ್ ಹಾಗೂ ಕೃತಿ ಸನೋನ್ ನಟನೆಯ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಲ್ಲಿ ಧರ್ಮೇಂದ್ರ ಅವರು ನಟಿಸಿದ್ದಾರೆ. ಕಥಾ ನಾಯಕ ಶಾಹಿದ್ ಅವರ ತಾತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರ ಹೆಸರನ್ನು ಬೇರೆ ರೀತಿಯಲ್ಲಿ ತೋರಿಸಲಾಗಿದೆ.

ಈ ಮೊದಲು ಸಿನಿಮಾಗಳಲ್ಲಿ ಧರ್ಮೇಂದ್ರ ಎಂದಷ್ಟೇ ಬರುತ್ತಿತ್ತು. ಈಗ ಸಿನಿಮಾ ಪ್ರದರ್ಶನದ ವೇಳೆ ಧರ್ಮೇಂದ್ರ ಸಿಂಗ್ ಡಿಯೋಲ್ ಎಂದು ಹೆಸರು ತೋರಿಸಲಾಗಿದೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಅವರು ಈ ರೀತಿ ಮಾಡಿದ್ದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಧರ್ಮೇಂದ್ರ ಅವರು ಜನಿಸಿದ್ದು 1935ರ ಡಿಸೆಂಬರ್ 8ರಂದು. ಅವರಿಗೆ ಈಗ 89 ವರ್ಷ ವಯಸ್ಸು. ಅವರು ಕೇವಾಲ್ ಕಿಶನ್ ಸಿಂಗ್ ಡಿಯೋಲ್ ಹಾಗೂ ಸತ್ವಂತ್ ಕೌರ್ ಮಗ. ಅವರ ತಂದೆ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ನಟನೆ ಮಾಡಬೇಕು ಎಂದು ಧರ್ಮೇಂದ್ರ ಅವರು ಮುಂಬೈಗೆ ಬಂದರು. ಅವರು ಚಿತ್ರರಂಗಕ್ಕೆ ಕಾಲಿಟ್ಟ ಬಳಿಕ ಮಧ್ಯದ ಹೆಸರು ಹಾಗೂ ಸರ್​ನೇಮ್​ನ ತೆಗೆದು ಹಾಕಿದರು. ಅವರ ಮಕ್ಕಳಾದ ಸನ್ನಿ ಹಾಗೂ ಬಾಬಿ ‘ಡಿಯೋಲ್​’ ಸರ್​ನೇಮ್​ನ ತಮ್ಮ ಹೆಸರಿನ ಮುಂದೆ ಸೇರಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಹನುಮಾನ್​’ ಸಿನಿಮಾದ ಹೀರೋ ತೇಜ ಸಜ್ಜಾ ಸಂಭಾವನೆಯಲ್ಲಿ ಏರಿಕೆ

ಧರ್ಮೇಂದ್ರ ಅವರು ಆಗಾಗ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದರು. ಕಥೆಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ನಟನೆಯ ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:48 am, Sat, 10 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!