Sign In

By signing in or creating an account, you agree with Associated Broadcasting Company's Terms & Conditions and Privacy Policy.

1000 ಕೋಟಿ ರೂಪಾಯಿ ಪೊಂಜಿ ಹಗರಣ; ನಟ ಗೋವಿಂದಗೆ ಸಂಕಷ್ಟ

ಸೋಲಾರ್ ಟೆಕ್ನೋ ಅಲಾಯನ್ಸ್ 1000 ಕೋಟಿ ರೂಪಾಯಿ ಹಗರಣದ ಪ್ರಮುಖ ರುವಾರಿ. ಈ ಕಂಪನಿ ಲಕ್ಷಾಂತರ ಜನರಿಂದ ಹೂಡಿಕೆ ಮಾಡಿಸಿಕೊಂಡಿದೆ. ಈ ಹಗರಣದ ಮೊತ್ತ ಸಾವಿರ ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಕಂಪನಿಯ ಜಾಹೀರಾತಿನಲ್ಲಿ ಗೋವಿಂದ ಅವರು ಕಾಣಿಸಿಕೊಂಡಿದ್ದರು.

1000 ಕೋಟಿ ರೂಪಾಯಿ ಪೊಂಜಿ ಹಗರಣ; ನಟ ಗೋವಿಂದಗೆ ಸಂಕಷ್ಟ
ಗೋವಿಂದ
Follow us
ರಾಜೇಶ್ ದುಗ್ಗುಮನೆ
|

Updated on:Sep 15, 2023 | 10:29 AM

ನಟ ಗೋವಿಂದ ಅವರು ನಟನೆಯಿಂದ ದೂರವೇ ಇದ್ದಾರೆ. ಅವರು ಚಿತ್ರರಂಗದಲ್ಲಿ ಹೆಚ್ಚಾಗಿ ಆ್ಯಕ್ಟೀವ್ ಆಗಿಲ್ಲ. ಈಗ ಅವರು ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. 1000 ಕೋಟಿ ರೂಪಾಯಿ ಪೊಂಜಿ ಹಗರಣದಲ್ಲಿ (Ponzi Scam) ಗೋವಿಂದ ಅವರು ವಿಚಾರಣೆ ಎದುರಿಸಬೇಕಿದೆ. ಒಡಿಶಾ ಆರ್ಥಿಕ ಅಪರಾಧ ವಿಭಾಗ ಈ ಕುರಿತು ತನಿಖೆ ನಡೆಸುತ್ತಿದೆ. ಇದರಲ್ಲಿ ನಟ ಗೋವಿಂದ ಅವರ ಹೆಸರೂ ತಳುಕು ಹಾಕಿಕೊಂಡಿದೆ. ಈ ಹಗರಣಕ್ಕೂ ಗೋವಿಂದಗೂ ಏನು ಸಂಬಂಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸೋಲಾರ್ ಟೆಕ್ನೋ ಅಲಾಯನ್ಸ್ 1000 ಕೋಟಿ ರೂಪಾಯಿ ಹಗರಣದ ಪ್ರಮುಖ ರುವಾರಿ. ಈ ಕಂಪನಿ ಲಕ್ಷಾಂತರ ಜನರಿಂದ ಹೂಡಿಕೆ ಮಾಡಿಸಿಕೊಂಡಿದೆ. ಈ ಹಗರಣದ ಮೊತ್ತ ಸಾವಿರ ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಕಂಪನಿಯ ಜಾಹೀರಾತಿನಲ್ಲಿ ಗೋವಿಂದ ಅವರು ಕಾಣಿಸಿಕೊಂಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಬೇಕಿದೆ. ಗೋವಿಂದ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಬದುಕಿಗೆ ಬೇರೆ ದಾರಿ ಕಂಡುಕೊಂಡಿದ್ದಾರೆ. ಆದಾಗ್ಯೂ ವಿವಾದ ಅವರನ್ನು ಬಿಡುತ್ತಿಲ್ಲ.

‘ಶೀಘ್ರವೇ ನಮ್ಮ ತಂಡದವರು ಮುಂಬೈಗೆ ತೆರಳುತ್ತಾರೆ. ಗೋವಿಂದ ಅವರನ್ನು ವಿಚಾರಣೆಗೆ ಹಾಜರುಪಡಿಸುತ್ತಿದ್ದೇವೆ. ಅವರು ಸೋಲಾರ್ ಟೆಕ್ನೋ ಅಲಾಯನ್ಸ್​ನ ಗೋವಾ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಅವರು ಕೆಲವು ವಿಡಿಯೋದಲ್ಲಿ ಕಂಪನಿಯನ್ನು ಪ್ರಮೋಟ್ ಮಾಡಿದ್ದರು’ ಎಂದು  ಒಡಿಶಾ ಆರ್ಥಿಕ ಅಪರಾಧ ವಿಭಾಗದ ಐಜಿ ಜೆಎನ್ ಪಂಕಜ್ ಮಾಹಿತಿ ನೀಡಿದ್ದಾರೆ.

‘ಗೋವಿಂದ ಅವರು ಇಲ್ಲಿ ಆರೋಪಿಯೂ ಅಲ್ಲ, ಶಂಕಿತನೂ ಅಲ್ಲ’ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ಒಂದು ಸಾಮಾನ್ಯ ವಿಚಾರಣೆ ಆಗಿದೆ ಅಷ್ಟೇ. ಗೋವಿಂದ ಅವರು ಕಂಪನಿಯ ಜಾಹೀರಾತುಗಳಲ್ಲಿ ಭಾಗಿ ಆಗಿರುವುದರಿಂದ ಅವರನ್ನು ಸಾಕ್ಷ್ಯ ಎಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ

ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಗೋವಿಂದ​ಗೂ ಈ ಹಗರಣಕ್ಕೂ ಯಾವುದೇ ಸಂಬಂಧ ಇಲ್ಲ. ಗೋವಿಂದ ಈ ಕಂಪನಿಯ ಕಾರ್ಯಕ್ರಮಕ್ಕೆ ತೆರಳಿದ್ದರು ಅಷ್ಟೇ. ಅವರಿಗೂ ಹಗರಣಕ್ಕೂ ಸಂಬಂಧ ಕಲ್ಪಿಸುವುದು ಸರಿ ಅಲ್ಲ’ ಎಂದಿದ್ದಾರೆ ಅವರು. ಈ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಅರೆಸ್ಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:29 am, Fri, 15 September 23

ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ