AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತಲ್ಲ, ಇಪ್ಪತ್ತಲ್ಲ ಒಟ್ಟಿಗೆ 70 ಸಿನಿಮಾ ಸಹಿ ಮಾಡಿದ್ದ ಗೋವಿಂದ

ಗೋವಿಂದ ಚಿತ್ರರಂಗದಲ್ಲಿ ಪಡೆದ ಖ್ಯಾತಿ ಅಷ್ಟಿಷ್ಟಲ್ಲ. ಈ ಮೊದಲು ಗೋವಿಂದ ಅವರು ಈ ಬಗ್ಗೆ ಮಾತನಾಡಿದ್ದರು. ಗೋವಿಂದ ಅವರು ಚಿತ್ರರಂಗಕ್ಕೆ ಬಂದಾಗ ಸಿಕ್ಕ ಜನಪ್ರಿಯತೆ ಅಷ್ಟಿಷ್ಟಲ್ಲ. ಅವರು ಒಟ್ಟಿಗೆ 70 ಸಿನಿಮಾಗೆ ಸಹಿ ಮಾಡಿದರು ಎನ್ನುವ ವದಂತಿ ಇತ್ತು. ಈ ಬಗ್ಗೆ ಅವರು ಮಾತನಾಡಿದ್ದರು.

ಹತ್ತಲ್ಲ, ಇಪ್ಪತ್ತಲ್ಲ ಒಟ್ಟಿಗೆ 70 ಸಿನಿಮಾ ಸಹಿ ಮಾಡಿದ್ದ ಗೋವಿಂದ
ಗೋವಿಂದ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 24, 2024 | 12:17 PM

Share

ಬಾಲಿವುಡ್ ನಟ ಗೋವಿಂದ ಅವರು ಇತ್ತೀಚೆಗೆ ಸುದ್ದಿಯಲ್ಲಿ ಇದ್ದಾರೆ. ಅವರು 1986ರಲ್ಲಿ ರಿಲೀಸ್ ಆದ ‘ಲವ್ 86’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ನಾಲ್ಕೇ ವರ್ಷಗಳಲ್ಲಿ 40 ಸಿನಿಮಾಗಳಲ್ಲಿ ನಟಿಸಿದ್ದರು. ಒಂದೇ ಸಲಕ್ಕೆ ಅವರ ಕೈಯಲ್ಲಿ ಬರೋಬ್ಬರಿ 70 ಸಿನಿಮಾಗಳು ಇದ್ದವು! ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದರು. ಒಂದೆರಡು ಸಿನಿಮಾ ಒಟ್ಟಿಗೆ ಸಹಿ ಮಾಡಿದರೆ ಅದು ಸಾಧನೆ ಎಂದುಕೊಳ್ಳುವ ಈ ಕಾಲದಲ್ಲಿ ಅವರು ಅಂದೇ ಈ ರೀತಿಯ ಸಾಧನೆ ಮಾಡಿದ್ದರು ಎಂಬುದು ವಿಶೇಷ.

ಈ ಮೊದಲು ಗೋವಿಂದ ಅವರು ಈ ಬಗ್ಗೆ ಮಾತನಾಡಿದ್ದರು. ಗೋವಿಂದ ಅವರು ಚಿತ್ರರಂಗಕ್ಕೆ ಬಂದಾಗ ಸಿಕ್ಕ ಜನಪ್ರಿಯತೆ ಅಷ್ಟಿಷ್ಟಲ್ಲ. ಅವರು ಒಟ್ಟಿಗೆ 70 ಸಿನಿಮಾಗೆ ಸಹಿ ಮಾಡಿದರು ಎನ್ನುವ ವದಂತಿ ಇತ್ತು. ಈ ಬಗ್ಗೆ ಅವರು ಮಾತನಾಡಿದ್ದರು. ‘ನನ್ನ ಬಳಿ 70 ಸಿನಿಮಾಗಳು ಇದ್ದವು. ಇದು ನಿಜ. 8-19 ಸಿನಿಮಾಗಳು ಸೆಟ್ಟೇರಲೇ ಇಲ್ಲ. ಡೇಟ್ಸ್ ಕಾರಣಕ್ಕೆ ನಾನೇ 4-5 ಸಿನಿಮಾ ಮಾಡೋಕೆ ಆಗಿಲ್ಲ ಅವುಗಳನ್ನು ನಾನೇ ಕೈ ಬಿಟ್ಟಿದ್ದೆ’ ಎಂದು ಗೋವಿಂದ ಹೇಳಿದ್ರು.

ಗೋವಿಂದ ಅವರು ಒಪ್ಪಿಕೊಂಡ ಸಿನಿಮಾಗಳನ್ನು ಮಾಡಲು ಸಾಕಷ್ಟು ಪ್ರಯತ್ನ ಪಟ್ಟರು. ಒಂದೇ ದಿನ ಅವರು ಐದು ಸಿನಿಮಾಗಳನ್ನು ಶೂಟ್ ಮಾಡಿದ್ದು ಕೂಡ ಇದೆ.  ‘ಇದು ನನ್ನ ಸಾಧನೆ ಅಲ್ಲ. ಅದು ಅದಾಗೇ ಆಯಿತು’ ಎಂದಿದ್ದರು. ‘ಲವ್ 86’ ಚಿತ್ರದಲ್ಲಿ  ರೊಮ್ಯಾಂಟಿಕ್ ಕಾಮಿಡಿ ಪಾತ್ರವನ್ನು ಮಾಡಿದ್ದರು ಗೋವಿಂದ. ಅವರು ಡ್ಯಾನ್ಸ್ ಕೂಡ ಉತ್ತಮವಾಗಿ ಮಾಡುತ್ತಿದ್ದರು. ನಂತರ ಅವರು ಹಲವು ರೀತಿಯ ಪಾತ್ರಗಳನ್ನು ಒಪ್ಪಿಕೊಂಡರು.

ಇದನ್ನೂ ಓದಿ: ಮೂಢನಂಬಿಕೆಯಿಂದ ಬಾಲಿವುಡ್​ನಲ್ಲಿ ಬೇಡಿಕೆ ಕಳೆದುಕೊಂಡ ನಟ ಗೋವಿಂದ?

ಇತ್ತೀಚೆಗೆ ಗೋವಿಂದ ಅವರು ಸುದ್ದಿ ಆಗಿದ್ದರು. ಅಕ್ಟೋಬರ್ 1ರಂದು ಅವರು ಕಾಲಿಗೆ ಗುಂಡು ಹಾರಿಸಿಕೊಂಡಿದ್ದರು. ಅವರು ಕೋಲ್ಕತ್ತಾ ಹೊರಡುವವರಿದ್ದರು. ಈ ವೇಳೆ ಗನ್​ನಿಂದ ಕೈ ತಪ್ಪಿ ಗುಂಡು ಹಾರಿದ್ದಾಗಿ ವರದಿ ಆಗಿತ್ತು. ಆದರೆ, ಈ ಕಥೆಯನ್ನು ಒಪ್ಪಲು ಪೊಲೀಸರು ಸಿದ್ಧರಿಲ್ಲ. ಅವರ ಕಾಲಿಗೆ 8-10 ಸ್ಟಿಚ್​ಗಳನ್ನು ಹಾಕಲಾಗಿದೆ.  ಸದ್ಯ ಅವರು ವಿಶ್ರಾಂತಿಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್