AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರು ಕೋಟಿ ರೂಪಾಯಿ ಪ್ರಾಜೆಕ್ಟ್ ಕೈಬಿಟ್ಟು ಕೆನ್ನೆಗೆ ಹೊಡೆದುಕೊಂಡ ನಟ ಗೋವಿಂದ

ಗೋವಿಂದ ಅವರು ಪತ್ನಿ ಸುನಿತಾ ಹಾಗೂ ಮಗ ಯಶ್ವಧನ್ ಜೊತೆ ಹಬ್ಬ ಆಚರಿಸಿದ್ದಾರೆ. ಶಿಲ್ಪಾ ಶೆಟ್ಟಿ ಮನೆಯೆ ಗಣೇಶ ಚತುರ್ಥಿ ಆಚರಣೆಯಲ್ಲೂ ಇವರು ಭಾಗಿ ಆಗಿದ್ದಾರೆ. ಅಭಿಮಾನಿಗಳಿಗೆ ಅವರು ಗಣೇಶ ಚತುರ್ಥಿಯ ಶುಭಾಶಯ ತಿಳಿಸಿದ್ದಾರೆ.

ನೂರು ಕೋಟಿ ರೂಪಾಯಿ ಪ್ರಾಜೆಕ್ಟ್ ಕೈಬಿಟ್ಟು ಕೆನ್ನೆಗೆ ಹೊಡೆದುಕೊಂಡ ನಟ ಗೋವಿಂದ
ಗೋವಿಂದ
Follow us
ರಾಜೇಶ್ ದುಗ್ಗುಮನೆ
|

Updated on: Sep 21, 2023 | 12:13 PM

ನಟ ಗೋವಿಂದ (Govinda) ಅವರು ಚಿತ್ರರಂಗದಿಂದ ದೂರು ಇದ್ದಾರೆ. ನಟನೆಯ ಬಗ್ಗೆ ಅವರಿಗೆ ಆಸಕ್ತಿ ಕಡಿಮೆ ಆದಂತಿದೆ. ಒಂದು ಕಾಲದಲ್ಲಿ ಬೇಡಿಕೆಯ ಹೀರೋ ಆಗಿ ಮೆರೆದ ಅವರು ಈಗ ಸೈಡ್​ಲೈನ್ ಆಗಿದ್ದಾರೆ. ಅನೇಕರು ಗೋವಿಂದ ಅವರಿಗೆ ಸಿನಿಮಾ ಆಫರ್​ಗಳೇ ಬರುತ್ತಿಲ್ಲ ಎಂದು ಭಾವಿಸಿದ್ದರು. ಆದರೆ, ಅಸಲಿ ವಿಚಾರ ಬೇರೆಯೇ ಇದೆ. ಈ ಬಗ್ಗೆ ಗೋವಿಂದ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಆದರೆ, ಯಾವುದೂ ಇಷ್ಟವಾಗುತ್ತಿಲ್ಲ ಎನ್ನುವ ಕಾರಣಕ್ಕೆ ಅದನ್ನು ರಿಜೆಕ್ಟ್ ಮಾಡುತ್ತಿದ್ದಾರೆ.

‘ನಾನು ಸಿನಿಮಾಗಳನ್ನು ಸುಲಭದಲ್ಲಿ ಒಪ್ಪಿಕೊಳ್ಳುವುದಿಲ್ಲ. ನನಗೆ ಸಿನಿಮಾ ಆಫರ್​ಗಳು ಬರುತ್ತಿಲ್ಲ ಎಂದು ಮಾತನಾಡಿಕೊಳ್ಳುವವರಿಗೆ ಇದನ್ನು ಹೇಳ ಬಯಸುತ್ತೇನೆ. ನನಗೆ ಗಣೇಶನ ಕೃಪಾಕಟಾಕ್ಷ ಇದೆ. ನಾನು ಸುಮಾರು 100 ಕೋಟಿ ರೂಪಾಯಿ ಮೌಲ್ಯದ ಪ್ರಾಜೆಕ್ಟ್​ಗಳನ್ನು ರಿಜೆಕ್ಟ್ ಮಾಡಿದ್ದೇನೆ’ ಎಂದಿದ್ದಾರೆ ಗೋವಿಂದ.

‘ನಾನು ಯಾವುದೇ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ ಎಂದು ಕನ್ನಡಿ ಎದುರು ನಿಂತು ನನ್ನ ಕೆನ್ನೆಗೆ ನಾನೇ ಹೊಡೆದುಕೊಂಡಿದ್ದೇನೆ. ಅವರು ನನಗೆ ಕೋಟಿ ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದರೆ, ಯಾವುದೋ ಒಂದು ಪಾತ್ರವನ್ನು ಒಪ್ಪಿಕೊಂಡು ಮಾಡೋಕೆ ನನಗೆ ಇಷ್ಟವಿಲ್ಲ. ನಾನು ಈ ಮೊದಲು ಮಾಡಿದ ರೀತಿಯ ಪಾತ್ರಗಳನ್ನು ಮಾಡಬೇಕಿದೆ’ ಎಂದು ಗೋವಿಂದ ಹೇಳಿದ್ದಾರೆ.

ಗೋವಿಂದ ಅವರು ಪತ್ನಿ ಸುನಿತಾ ಹಾಗೂ ಮಗ ಯಶ್ವಧನ್ ಜೊತೆ ಹಬ್ಬ ಆಚರಿಸಿದ್ದಾರೆ. ಶಿಲ್ಪಾ ಶೆಟ್ಟಿ ಮನೆಯೆ ಗಣೇಶ ಚತುರ್ಥಿ ಆಚರಣೆಯಲ್ಲೂ ಇವರು ಭಾಗಿ ಆಗಿದ್ದಾರೆ. ಅಭಿಮಾನಿಗಳಿಗೆ ಅವರು ಗಣೇಶ ಚತುರ್ಥಿಯ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ನಲ್ಲಿ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ಸಮಂತಾ; ಆಫರ್ ಕೊಟ್ಟೋರು ಯಾರು?

ಗೋವಿಂದ ಅವರು 170ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1986ರಲ್ಲಿ. ‘ಹೀರೋ ನಂಬರ್ 1’, ‘ದುಲ್ಹೆ ರಾಜ’, ‘ಶೋಲಾ ಔರ್ ಶಬ್ನಮ್’, ‘ಪಾರ್ಟ್ನರ್’ ಮೊದಲಾದ ಹಿಟ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2019ರಲ್ಲಿ ತೆರೆಗೆ ಬಂದ ‘ರಂಗೀಲಾ ರಾಜ’ ಅವರು ಕೊನೆಯದಾಗಿ ನಟಿಸಿದ ಸಿನಿಮಾ. ಅವರು ಆದಷ್ಟು ಬೇಗ ನಟನೆಗೆ ಮರಳಲಿ ಎಂಬುದು ಅಭಿಮಾನಿಗಳ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್