AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರು ಕೋಟಿ ರೂಪಾಯಿ ಪ್ರಾಜೆಕ್ಟ್ ಕೈಬಿಟ್ಟು ಕೆನ್ನೆಗೆ ಹೊಡೆದುಕೊಂಡ ನಟ ಗೋವಿಂದ

ಗೋವಿಂದ ಅವರು ಪತ್ನಿ ಸುನಿತಾ ಹಾಗೂ ಮಗ ಯಶ್ವಧನ್ ಜೊತೆ ಹಬ್ಬ ಆಚರಿಸಿದ್ದಾರೆ. ಶಿಲ್ಪಾ ಶೆಟ್ಟಿ ಮನೆಯೆ ಗಣೇಶ ಚತುರ್ಥಿ ಆಚರಣೆಯಲ್ಲೂ ಇವರು ಭಾಗಿ ಆಗಿದ್ದಾರೆ. ಅಭಿಮಾನಿಗಳಿಗೆ ಅವರು ಗಣೇಶ ಚತುರ್ಥಿಯ ಶುಭಾಶಯ ತಿಳಿಸಿದ್ದಾರೆ.

ನೂರು ಕೋಟಿ ರೂಪಾಯಿ ಪ್ರಾಜೆಕ್ಟ್ ಕೈಬಿಟ್ಟು ಕೆನ್ನೆಗೆ ಹೊಡೆದುಕೊಂಡ ನಟ ಗೋವಿಂದ
ಗೋವಿಂದ
ರಾಜೇಶ್ ದುಗ್ಗುಮನೆ
|

Updated on: Sep 21, 2023 | 12:13 PM

Share

ನಟ ಗೋವಿಂದ (Govinda) ಅವರು ಚಿತ್ರರಂಗದಿಂದ ದೂರು ಇದ್ದಾರೆ. ನಟನೆಯ ಬಗ್ಗೆ ಅವರಿಗೆ ಆಸಕ್ತಿ ಕಡಿಮೆ ಆದಂತಿದೆ. ಒಂದು ಕಾಲದಲ್ಲಿ ಬೇಡಿಕೆಯ ಹೀರೋ ಆಗಿ ಮೆರೆದ ಅವರು ಈಗ ಸೈಡ್​ಲೈನ್ ಆಗಿದ್ದಾರೆ. ಅನೇಕರು ಗೋವಿಂದ ಅವರಿಗೆ ಸಿನಿಮಾ ಆಫರ್​ಗಳೇ ಬರುತ್ತಿಲ್ಲ ಎಂದು ಭಾವಿಸಿದ್ದರು. ಆದರೆ, ಅಸಲಿ ವಿಚಾರ ಬೇರೆಯೇ ಇದೆ. ಈ ಬಗ್ಗೆ ಗೋವಿಂದ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಆದರೆ, ಯಾವುದೂ ಇಷ್ಟವಾಗುತ್ತಿಲ್ಲ ಎನ್ನುವ ಕಾರಣಕ್ಕೆ ಅದನ್ನು ರಿಜೆಕ್ಟ್ ಮಾಡುತ್ತಿದ್ದಾರೆ.

‘ನಾನು ಸಿನಿಮಾಗಳನ್ನು ಸುಲಭದಲ್ಲಿ ಒಪ್ಪಿಕೊಳ್ಳುವುದಿಲ್ಲ. ನನಗೆ ಸಿನಿಮಾ ಆಫರ್​ಗಳು ಬರುತ್ತಿಲ್ಲ ಎಂದು ಮಾತನಾಡಿಕೊಳ್ಳುವವರಿಗೆ ಇದನ್ನು ಹೇಳ ಬಯಸುತ್ತೇನೆ. ನನಗೆ ಗಣೇಶನ ಕೃಪಾಕಟಾಕ್ಷ ಇದೆ. ನಾನು ಸುಮಾರು 100 ಕೋಟಿ ರೂಪಾಯಿ ಮೌಲ್ಯದ ಪ್ರಾಜೆಕ್ಟ್​ಗಳನ್ನು ರಿಜೆಕ್ಟ್ ಮಾಡಿದ್ದೇನೆ’ ಎಂದಿದ್ದಾರೆ ಗೋವಿಂದ.

‘ನಾನು ಯಾವುದೇ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ ಎಂದು ಕನ್ನಡಿ ಎದುರು ನಿಂತು ನನ್ನ ಕೆನ್ನೆಗೆ ನಾನೇ ಹೊಡೆದುಕೊಂಡಿದ್ದೇನೆ. ಅವರು ನನಗೆ ಕೋಟಿ ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದರೆ, ಯಾವುದೋ ಒಂದು ಪಾತ್ರವನ್ನು ಒಪ್ಪಿಕೊಂಡು ಮಾಡೋಕೆ ನನಗೆ ಇಷ್ಟವಿಲ್ಲ. ನಾನು ಈ ಮೊದಲು ಮಾಡಿದ ರೀತಿಯ ಪಾತ್ರಗಳನ್ನು ಮಾಡಬೇಕಿದೆ’ ಎಂದು ಗೋವಿಂದ ಹೇಳಿದ್ದಾರೆ.

ಗೋವಿಂದ ಅವರು ಪತ್ನಿ ಸುನಿತಾ ಹಾಗೂ ಮಗ ಯಶ್ವಧನ್ ಜೊತೆ ಹಬ್ಬ ಆಚರಿಸಿದ್ದಾರೆ. ಶಿಲ್ಪಾ ಶೆಟ್ಟಿ ಮನೆಯೆ ಗಣೇಶ ಚತುರ್ಥಿ ಆಚರಣೆಯಲ್ಲೂ ಇವರು ಭಾಗಿ ಆಗಿದ್ದಾರೆ. ಅಭಿಮಾನಿಗಳಿಗೆ ಅವರು ಗಣೇಶ ಚತುರ್ಥಿಯ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ನಲ್ಲಿ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ಸಮಂತಾ; ಆಫರ್ ಕೊಟ್ಟೋರು ಯಾರು?

ಗೋವಿಂದ ಅವರು 170ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1986ರಲ್ಲಿ. ‘ಹೀರೋ ನಂಬರ್ 1’, ‘ದುಲ್ಹೆ ರಾಜ’, ‘ಶೋಲಾ ಔರ್ ಶಬ್ನಮ್’, ‘ಪಾರ್ಟ್ನರ್’ ಮೊದಲಾದ ಹಿಟ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2019ರಲ್ಲಿ ತೆರೆಗೆ ಬಂದ ‘ರಂಗೀಲಾ ರಾಜ’ ಅವರು ಕೊನೆಯದಾಗಿ ನಟಿಸಿದ ಸಿನಿಮಾ. ಅವರು ಆದಷ್ಟು ಬೇಗ ನಟನೆಗೆ ಮರಳಲಿ ಎಂಬುದು ಅಭಿಮಾನಿಗಳ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು