AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾದ ಹಿರಿಯ ನಟ ಮಿಥುನ್ ಚಕ್ರವರ್ತಿ: ಶಸ್ತ್ರಚಿಕಿತ್ಸೆ ಯಶಸ್ವಿ

ಬಾಲಿವುಡ್ ಹಾಗೂ ಬೆಂಗಾಲಿ ಚಿತ್ರರಂಗದ ಹಿರಿಯ ಕಲಾವಿದ ಮಿಥುನ್ ಚಕ್ರವರ್ತಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. 76 ವರ್ಷ ವಯಸ್ಸಿನ ಪ್ರಾಯದ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿ ಆಗಿದೆ. ಅಲ್ಲದೇ, ಅವರ ಆರೋಗ್ಯ ಸ್ಥಿರವಾಗಿದೆ. ಮಿಥುನ್ ಚಕ್ರವರ್ತಿ ಬೇಗ ಚೇತರಿಸಿಕೊಳ್ಳಲಿ ಎಂದು ಸುವೇಂದು ಅಧಿಕಾರಿ ಅವರು ಪ್ರಾರ್ಥಿಸಿದ್ದಾರೆ.

ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾದ ಹಿರಿಯ ನಟ ಮಿಥುನ್ ಚಕ್ರವರ್ತಿ: ಶಸ್ತ್ರಚಿಕಿತ್ಸೆ ಯಶಸ್ವಿ
Mithun Chakraborty, Suvendu Adhikari
ಮದನ್​ ಕುಮಾರ್​
|

Updated on: Aug 07, 2026 | 6:26 PM

Share

ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ (Mithun Chakraborty) ಅವರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರು ಶುಕ್ರವಾರ (ಆಗಸ್ಟ್ 7) ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಮಿಥುನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಹಿಂದಿನ ಘಟನೆಯೊಂದರಲ್ಲಿ ಅಳವಡಿಸಲಾಗಿದ್ದ ಲೋಹದ ಪ್ಲೇಟ್ ಅನ್ನು ತೆಗೆದುಹಾಕಲು ಗುರುವಾರ ಮಿಥುನ್ ಚಕ್ರವರ್ತಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ (Surgery) ಯಶಸ್ವಿಯಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ಆಗಿದೆ.

ಮಿಥುನ್ ಅವರನ್ನು ಭೇಟಿಯಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸುವೇಂದು ಅಧಿಕಾರಿ, ‘ಪ್ರಖ್ಯಾತ ಚಲನಚಿತ್ರ ನಟ ಹಾಗೂ ಬಿಜೆಪಿ ಕೇಂದ್ರ ಸಮಿತಿ ಸದಸ್ಯ ಮಿಥುನ್ ಚಕ್ರವರ್ತಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿದೆ. ಅವರು ಶೀಘ್ರ ಗುಣಮುಖರಾಗಲೆಂದು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

2ನೇ ಬಾರಿ ಸುವೇಂದು ಅಧಿಕಾರಿ ಭೇಟಿ:

ಮಿಥುನ್ ಆಸ್ಪತ್ರೆಗೆ ದಾಖಲಾದಾಗ ಸುವೇಂದು ಅಧಿಕಾರಿ ಅವರು ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಈ ಹಿಂದೆ 2024ರಲ್ಲಿ ಮಿಥುನ್ ಅವರ ಕೈಗೆ ಮೂಳೆ ಶಸ್ತ್ರಚಿಕಿತ್ಸೆ ನಡೆದಾಗಲೂ ಸುವೇಂದು ಅವರು ಭೇಟಿ ನೀಡಿದ್ದರು. ಪಶ್ಚಿಮ ಬಂಗಾಳದ ಪ್ರಮುಖ ಬಿಜೆಪಿ ನಾಯಕರಾಗಿರುವ ಮಿಥುನ್ ಚಕ್ರವರ್ತಿ ಅವರು, 2026ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ತೃಣಮೂಲ ಕಾಂಗ್ರೆಸ್ ಅನ್ನು ಸೋಲಿಸಿ ರಾಜ್ಯದಲ್ಲಿ ಸರ್ಕಾರ ರಚಿಸಿತು.

ಮಿಥುನ್ ಚಕ್ರವರ್ತಿ ಸಿನಿಮಾ ಪಯಣ:

ಐದು ದಶಕಗಳಿಗಿಂತಲೂ ಸುದೀರ್ಘವಾದ ತಮ್ಮ ಸಿನಿಮಾ ಜರ್ನಿಯಲ್ಲಿ ಮಿಥುನ್ ಚಕ್ರವರ್ತಿ ಅವರು ಪ್ರಮುಖವಾಗಿ ಹಿಂದಿ ಮತ್ತು ಬಂಗಾಳಿ ಭಾಷೆಗಳಲ್ಲಿ 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮೃಣಾಲ್ ಸೇನ್ ನಿರ್ದೇಶನದ ‘ಮೃಗಯಾ’ (1976) ಚಿತ್ರದ ಮೂಲಕ ನಟನೆಯನ್ನು ಆರಂಭಿಸಿದ ಅವರು, ತಮ್ಮ ಚೊಚ್ಚಲ ಅಭಿನಯಕ್ಕೇ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿಯನ್ನು ಪಡೆದುಕೊಂಡಿದ್ದರು. 1978ರ ‘ನದಿ ಥೇಕೆ ಸಾಗರೆ’ ಚಿತ್ರದ ಮೂಲಕ ಗಮನ ಸೆಳೆದರಾದರೂ, 1982ರ ‘ಡಿಸ್ಕೋ ಡ್ಯಾನ್ಸರ್’ ಚಿತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದರು.

ಇದನ್ನೂ ಓದಿ: ಮಿಥುನ್ ಚಕ್ರವರ್ತಿ ಜೊತೆ ಹುಚ್ಚು ಪ್ರೀತಿ, ರಹಸ್ಯ ಮದುವೆ; ಶ್ರೀದೇವಿ ಬಾಳಲ್ಲಿ ಬೀಸಿತ್ತು ಬಿರುಗಾಳಿ

ಇಂದಿಗೂ ಬೇಡಿಕೆ ಇದೆ:

ಸದ್ಯ ಮಿಥುನ್ ಚಕ್ರವರ್ತಿ ಅವರು ‘ಬಟ್ವಾರಾ 1947’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಸನ್ನಿ ಡಿಯೋಲ್ ಹೀರೋ ಆಗಿದ್ದು, ಆಮಿರ್ ಖಾನ್ ಅವರು ನಿರ್ಮಾಣ ಮಾಡಿದ್ದಾರೆ. ಇದಲ್ಲದೇ, ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾದಲ್ಲಿ ಕೂಡ ಮಿಥುನ್ ಚಕ್ರವರ್ತಿ ಅವರಿಗೆ ಒಂದು ಪಾತ್ರ ನೀಡಲಾಗಿದೆ. ಈ ರೀತಿಯ ಬಹುನಿರೀಕ್ಷಿತ ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಅವರು ಇಂದಿಗೂ ಬೇಡಿಕೆ ಉಳಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​