AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರದ ಅರ್ಚಕರಿಂದಲೂ ‘ಆದಿಪುರುಷ್​’ ಚಿತ್ರಕ್ಕೆ ವಿರೋಧ; ಬ್ಯಾನ್ ಮಾಡಲು ಆಗ್ರಹ

ರಾಮ ಹುಟ್ಟಿದ್ದು ಅಯೋಧ್ಯೆಯಲ್ಲಿ ಎಂಬುದು ರಾಮಾಯಣದಲ್ಲಿ ಉಲ್ಲೇಖ ಆಗಿದೆ. ಹೀಗಾಗಿ, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣ ಆಗುತ್ತಿದೆ. ರಾಮ ಮಂದಿರದ ಮುಖ್ಯ ಅರ್ಚಕರು ಈ ಸಿನಿಮಾ ಬ್ಯಾನ್ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರದ ಅರ್ಚಕರಿಂದಲೂ ‘ಆದಿಪುರುಷ್​’ ಚಿತ್ರಕ್ಕೆ ವಿರೋಧ; ಬ್ಯಾನ್ ಮಾಡಲು ಆಗ್ರಹ
ಆದಿಪುರುಷ್
TV9 Web
| Edited By: |

Updated on:Oct 06, 2022 | 2:39 PM

Share

ಪ್ರಭಾಸ್ (Prabhas) ನಟನೆಯ ‘ಆದಿಪುರುಷ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಹಾಗಂತ ಇದು ಒಳ್ಳೆಯ ಕಾರಣಕ್ಕೆ ಅಲ್ಲವೇ ಅಲ್ಲ. ಇತ್ತೀಚೆಗೆ ಚಿತ್ರದ ಟೀಸರ್ ರಿಲೀಸ್ ಆಯಿತು. ಆರಂಭದಲ್ಲಿ ಸಿನಿಮಾದ ಗ್ರಾಫಿಕ್ಸ್ ಬಗ್ಗೆ ಟೀಕೆ ವ್ಯಕ್ತವಾಯಿತು. ರಾವಣನ ಪಾತ್ರದ ಬಗ್ಗೆಯೂ ಟೀಕೆಗಳು ಕೇಳಿ ಬಂದವು. ಚಿತ್ರತಂಡದಿಂದ ಇದಕ್ಕೆ ಸ್ಪಷ್ಟನೆ ನೀಡುವ ಕೆಲಸವೂ ಆಗಿದೆ. ಈ ಮಧ್ಯೆ ಚಿತ್ರತಂಡಕ್ಕೆ ಮತ್ತೊಂದು ಕಂಟಕ ಎದುರಾಗಿದೆ. ಅಯೋಧ್ಯೆಯ (Ayodhye) ರಾಮ ಮಂದಿರದ ಮುಖ್ಯ ಅರ್ಚಕರು ಕೂಡ ಈ ಟೀಸರ್ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂಬುದಕ್ಕೆ ಅವರು ಕೂಡ ಧ್ವನಿಗೂಡಿಸಿದ್ದಾರೆ. ಇದರಿಂದ ಸಿನಿಮಾಗೆ ಸಂಕಷ್ಟ ಹೆಚ್ಚಿದೆ.

ರಾಮ ಹುಟ್ಟಿದ್ದು ಅಯೋಧ್ಯೆಯಲ್ಲಿ ಎಂಬುದು ರಾಮಾಯಣದಲ್ಲಿ ಉಲ್ಲೇಖ ಆಗಿದೆ. ಹೀಗಾಗಿ, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣ ಆಗುತ್ತಿದೆ. ರಾಮ ಮಂದಿರದ ಮುಖ್ಯ ಅರ್ಚಕರು ಈ ಸಿನಿಮಾ ಬ್ಯಾನ್ ಆಗಬೇಕು ಎಂದು ಆಗ್ರಹಿಸಿದ್ದಾರೆ. ‘ಸಿನಿಮಾ ಮಾಡುವುದು ಅಪರಾಧವಲ್ಲ. ಆದರೆ, ಬೆಳಕಿಗೆ ಬರಬೇಕು ಎಂಬ ಕಾರಣಕ್ಕೆ ವಿವಾದಗಳನ್ನು ಮಾಡಿಕೊಳ್ಳಬಾರದು’ ಎಂದು ಅವರು ಕೋರಿದ್ದಾರೆ. ಜತೆಗೆ ಸಿನಿಮಾ ಮೇಲೆ ನಿಷೇಧ ಹೇರಲು ಕೋರಿದ್ದಾರೆ.

ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ ಮಿಶ್ರಾ ಅವರು ಈ ಚಿತ್ರದ ಟೀಸರ್ ಬಗ್ಗೆ ಅಪಸ್ವರ ತೆಗೆದಿದ್ದರು. ‘ಆದಿಪುರುಷ್​​ ಚಿತ್ರದ ಟೀಸರ್ ನೋಡಿದೆ. ಅದರಲ್ಲಿ ಸಾಕಷ್ಟು ವಿರೋಧಾತ್ಮಕ ಅಂಶಗಳು ಇವೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಆದಿಪುರುಷ್ ಚಿತ್ರಕ್ಕೆ ಓಂ ರಾವತ್ ಅವರು ನಿರ್ದೇಶನ ಮಾಡಿದ್ದಾರೆ. ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ರಾವಣನನ್ನು ಅಲ್ಲಾವುದ್ದಿನ್ ಖಿಲ್ಜಿ ರೀತಿಯಲ್ಲಿ ತೋರಿಸಲಾಗಿದೆ ಎಂಬ ಆರೋಪ ಇದೆ. ಕೃತಿ ಸನೋನ್ ಅವರು ಈ ಚಿತ್ರದಲ್ಲಿ ಸೀತೆ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: Yash: ಅಯೋಧ್ಯೆ ರಾಮ ಮಂದಿರಕ್ಕೆ ಯಶ್​ 50 ಕೋಟಿ ರೂ. ಕೊಟ್ರು ಅಂತ ಹಬ್ಬಿದೆ ಸುಳ್ಳು ಸುದ್ದಿ; ಫೋಟೋ ಹಿಂದಿನ ಸತ್ಯವೇನು?

ಈ ಚಿತ್ರದ ಟೀಸರ್ ಬಗ್ಗೆ ವ್ಯಂಗ್ಯ ಕೇಳಿ ಬಂದ ಬೆನ್ನಲ್ಲೇ ತಂಡದಿಂದ ಈ ಬಗ್ಗೆ ಸ್ಪಷ್ಟನೆ ಸಿಕ್ಕಿತ್ತು. ‘ಇದು ದೊಡ್ಡ ಪರದೆಗಾಗಿ ಮಾಡಿದ ಸಿನಿಮಾ. ಮೊಬೈಲ್​ನಲ್ಲಿ ವಿಡಿಯೋ ನೋಡಿ ಟೀಕೆ ಮಾಡುವುದು ತಪ್ಪು’ ಎಂದು ‘ಆದಿಪುರುಷ್​’ ತಂಡದವರು ಅಭಿಪ್ರಾಯಪಟ್ಟಿದ್ದರು.

Published On - 2:31 pm, Thu, 6 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ