AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ

ಚೆಕ್​ ಬೌನ್ಸ್ ಕೇಸ್​​ನಲ್ಲಿ ತಿಹಾರ್ ಜೈಲಿಗೆ ಹೋಗಿದ್ದ ರಾಜ್​ಪಾಲ್ ಯಾದವ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಾಮೀನು ಪಡೆದು ಹೊರಗೆ ಬಂದಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು ಎಂದು ರಾಜ್​ಪಾಲ್ ಯಾದವ್ ಅವರು ಹೇಳಿದ್ದಾರೆ.

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ
Rajpal Yadav
ಮದನ್​ ಕುಮಾರ್​
|

Updated on: Feb 18, 2026 | 9:12 PM

Share

ಬಾಲಿವುಡ್ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದಾರೆ. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಜಾಗದ (Smoking Area) ವ್ಯವಸ್ಥೆ ಮಾಡಬೇಕು ಎಂದು ರಾಜ್​ಪಾಲ್ ಯಾದವ್ ಅವರು ಬೇಡಿಕೆ ಇಟ್ಟಿದ್ದಾರೆ.

ಹಲವು ವರ್ಷಗಳ ಹಿಂದೆ ರಾಜ್​ಪಾಲ್ ಯಾದವ್ ಅವರು ಸಿನಿಮಾ ನಿರ್ಮಾಣಕ್ಕಾಗಿ ಸಾಲ ಮಾಡಿದ್ದರು. ಆದರೆ ಅವರು ಮಾಡಿದ ಸಿನಿಮಾ ಗೆಲ್ಲಲಿಲ್ಲ. ಅದರಿಂದ ಅವರಿಗೆ ಸಾಲ ಮರುಪಾವತಿ ಮಾಡುವುದು ಕಷ್ಟ ಆಯಿತು. ದಿನದಿಂದ ದಿನಕ್ಕೆ ಬಡ್ಡಿ ಹೆಚ್ಚಿತು. ಒಟ್ಟು 9 ಕೋಟಿ ರೂಪಾಯಿ ಸಾಲ ಅವರ ಮೇಲಿದೆ. ಪದೇ ಪದೇ ಚೆಕ್ ಬೌನ್ಸ್ ಆಗಿದ್ದರಿಂದ ಅವರನ್ನು ಜೈಲಿಗೆ ಕಳಿಸಲಾಯಿತು.

‘ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಇರುವಂತೆ ಜೈಲಿನ ಒಳಗೆ ಧೂಮಪಾನ ಮಾಡಲು ಪ್ರತ್ಯೇಕವಾದ ಜಾಗ ಇರಬೇಕು. ಜೈಲುಗಳನ್ನು ಬದಲಾವಣೆಯ ಕೇಂದ್ರದ ರೀತಿ ಪರಿಗಣಿಸಬೇಕು. ತಮ್ಮನ್ನು ಬದಲಾಯಿಸಿಕೊಳ್ಳಲು ಖೈದಿಗಳಿಗೆ ಅವಕಾಶ ನೀಡಬೇಕು’ ಎಂದು ರಾಜ್​ಪಾಲ್ ಯಾದವ್ ಹೇಳಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗದೆ.

ಸಂಬಂಧಿಕರ ಮದುವೆಯ ಕಾರಣ ನೀಡಿ ರಾಜ್​ಪಾಲ್ ಯಾದವ್ ಅವರು ಸದ್ಯಕ್ಕೆ ಜಾಮೀನು ಪಡೆದಿದ್ದಾರೆ. ಒಂದೂವರೆ ಕೋಟಿ ರೂಪಾಯಿ ಪಾವತಿ ಮಾಡಿದ ನಂತರ ಅವರಿಗೆ ಜಾಮೀನು ಸಿಕ್ಕಿತು. ಮಾರ್ಚ್ 18ರವರೆಗೂ ಜಾಮೀನಿನ ಮೇಲೆ ಅವರು ಹೊರಗೆ ಇರಲಿದ್ದಾರೆ. ಬಳಿಕ ಮತ್ತೆ ವಿಚಾರಣೆ ನಡೆಯಲಿದೆ. ಅಷ್ಟರಲ್ಲಿ ಅವರು ಇನ್ನುಳಿದ ಹಣ ಹೊಂದಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ?

ರಾಜ್​ಪಾಲ್ ಯಾದವ್ ಅವರು ಮತ್ತೆ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಬೇಕು ಎಂದರೆ ಇನ್ನುಳಿದ ಸಾಲವನ್ನು ಮರುಪಾವತಿ ಮಾಡಲು ಹಣ ಹೊಂದಿಸಿಕೊಳ್ಳಬೇಕಿದೆ. ಈಗಾಗಲೇ ಸೋನು ಸೂದ್, ಮಿಕಾ ಸಿಂಗ್ ಮುಂತಾದವರು ರಾಜ್​ಪಾಲ್ ಯಾದವ್ ಅವರ ನೆರವಿಗೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ