AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ

ಚೆಕ್​ ಬೌನ್ಸ್ ಕೇಸ್​​ನಲ್ಲಿ ತಿಹಾರ್ ಜೈಲಿಗೆ ಹೋಗಿದ್ದ ರಾಜ್​ಪಾಲ್ ಯಾದವ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಾಮೀನು ಪಡೆದು ಹೊರಗೆ ಬಂದಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು ಎಂದು ರಾಜ್​ಪಾಲ್ ಯಾದವ್ ಅವರು ಹೇಳಿದ್ದಾರೆ.

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ
Rajpal Yadav
ಮದನ್​ ಕುಮಾರ್​
|

Updated on: Feb 18, 2026 | 9:12 PM

Share

ಬಾಲಿವುಡ್ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದಾರೆ. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಜಾಗದ (Smoking Area) ವ್ಯವಸ್ಥೆ ಮಾಡಬೇಕು ಎಂದು ರಾಜ್​ಪಾಲ್ ಯಾದವ್ ಅವರು ಬೇಡಿಕೆ ಇಟ್ಟಿದ್ದಾರೆ.

ಹಲವು ವರ್ಷಗಳ ಹಿಂದೆ ರಾಜ್​ಪಾಲ್ ಯಾದವ್ ಅವರು ಸಿನಿಮಾ ನಿರ್ಮಾಣಕ್ಕಾಗಿ ಸಾಲ ಮಾಡಿದ್ದರು. ಆದರೆ ಅವರು ಮಾಡಿದ ಸಿನಿಮಾ ಗೆಲ್ಲಲಿಲ್ಲ. ಅದರಿಂದ ಅವರಿಗೆ ಸಾಲ ಮರುಪಾವತಿ ಮಾಡುವುದು ಕಷ್ಟ ಆಯಿತು. ದಿನದಿಂದ ದಿನಕ್ಕೆ ಬಡ್ಡಿ ಹೆಚ್ಚಿತು. ಒಟ್ಟು 9 ಕೋಟಿ ರೂಪಾಯಿ ಸಾಲ ಅವರ ಮೇಲಿದೆ. ಪದೇ ಪದೇ ಚೆಕ್ ಬೌನ್ಸ್ ಆಗಿದ್ದರಿಂದ ಅವರನ್ನು ಜೈಲಿಗೆ ಕಳಿಸಲಾಯಿತು.

‘ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಇರುವಂತೆ ಜೈಲಿನ ಒಳಗೆ ಧೂಮಪಾನ ಮಾಡಲು ಪ್ರತ್ಯೇಕವಾದ ಜಾಗ ಇರಬೇಕು. ಜೈಲುಗಳನ್ನು ಬದಲಾವಣೆಯ ಕೇಂದ್ರದ ರೀತಿ ಪರಿಗಣಿಸಬೇಕು. ತಮ್ಮನ್ನು ಬದಲಾಯಿಸಿಕೊಳ್ಳಲು ಖೈದಿಗಳಿಗೆ ಅವಕಾಶ ನೀಡಬೇಕು’ ಎಂದು ರಾಜ್​ಪಾಲ್ ಯಾದವ್ ಹೇಳಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗದೆ.

ಸಂಬಂಧಿಕರ ಮದುವೆಯ ಕಾರಣ ನೀಡಿ ರಾಜ್​ಪಾಲ್ ಯಾದವ್ ಅವರು ಸದ್ಯಕ್ಕೆ ಜಾಮೀನು ಪಡೆದಿದ್ದಾರೆ. ಒಂದೂವರೆ ಕೋಟಿ ರೂಪಾಯಿ ಪಾವತಿ ಮಾಡಿದ ನಂತರ ಅವರಿಗೆ ಜಾಮೀನು ಸಿಕ್ಕಿತು. ಮಾರ್ಚ್ 18ರವರೆಗೂ ಜಾಮೀನಿನ ಮೇಲೆ ಅವರು ಹೊರಗೆ ಇರಲಿದ್ದಾರೆ. ಬಳಿಕ ಮತ್ತೆ ವಿಚಾರಣೆ ನಡೆಯಲಿದೆ. ಅಷ್ಟರಲ್ಲಿ ಅವರು ಇನ್ನುಳಿದ ಹಣ ಹೊಂದಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ?

ರಾಜ್​ಪಾಲ್ ಯಾದವ್ ಅವರು ಮತ್ತೆ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಬೇಕು ಎಂದರೆ ಇನ್ನುಳಿದ ಸಾಲವನ್ನು ಮರುಪಾವತಿ ಮಾಡಲು ಹಣ ಹೊಂದಿಸಿಕೊಳ್ಳಬೇಕಿದೆ. ಈಗಾಗಲೇ ಸೋನು ಸೂದ್, ಮಿಕಾ ಸಿಂಗ್ ಮುಂತಾದವರು ರಾಜ್​ಪಾಲ್ ಯಾದವ್ ಅವರ ನೆರವಿಗೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್