AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರ ಆರ್ಯನ್​ ವಿವಾದದ ಬಳಿಕ ಮೊದಲ ಬಾರಿಗೆ ಕೆಲಸಕ್ಕೆ ಮರಳಿದ ಶಾರುಖ್​: ಫೋಟೋ ವೈರಲ್​

Shah Rukh Khan: ಮಗ ಆರ್ಯನ್​ ಖಾನ್​ನ ವಿವಾದದಿಂದ ಬೇಸತ್ತಿದ್ದ ಶಾರುಖ್​ ಖಾನ್​ ಅವರು ಹಲವು ದಿನಗಳ ಬಳಿಕ ಕ್ಯಾಮೆರಾ ಎದುರಿಸಿದ್ದಾರೆ. ಹಾಗಂತ ಅವರು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿಲ್ಲ.

ಪುತ್ರ ಆರ್ಯನ್​ ವಿವಾದದ ಬಳಿಕ ಮೊದಲ ಬಾರಿಗೆ ಕೆಲಸಕ್ಕೆ ಮರಳಿದ ಶಾರುಖ್​: ಫೋಟೋ ವೈರಲ್​
ಶಾರುಖ್​ ಖಾನ್
TV9 Web
| Edited By: |

Updated on: Dec 23, 2021 | 11:31 AM

Share

ನಟ ಶಾರುಖ್​ ಖಾನ್ (Shah Rukh Khan)​ ಅವರು ಬಹುಬೇಡಿಕೆಯ ಕಲಾವಿದ. ಅವರು ಒಂದು ದಿನ ಶೂಟಿಂಗ್​ಗೆ ಬಂದರೆ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತವೆ. ಅಂಥ ಸ್ಟಾರ್​ ಕಲಾವಿದ ತಿಂಗಳುಗಟ್ಟಲೆ ಮನೆಯಲ್ಲಿ ಕೂರುವಂತಾಗಿದ್ದು ವಿಪರ್ಯಾಸ. ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ (Aryan Khan Drugs Case) ವಿವಾದದಲ್ಲಿ ಸಿಲುಕಿಕೊಂಡ ಬಳಿಕ ಶಾರುಖ್​ ಚಾರ್ಮ್​ ಮಂಕಾಯಿತು. ಅವರು ಒಪ್ಪಿಕೊಂಡಿದ್ದ ಹಲವು ಕೆಲಸಗಳು ಅರ್ಧಕ್ಕೆ ನಿಂತಿದ್ದವು. ಆದರೆ ಈಗ ಆ ಎಲ್ಲ ಕಹಿ ಘಟನೆಗಳನ್ನು ಬದಿಗಿರಿಸಿ ಅವರು ಮತ್ತೆ ಕೆಲಸದತ್ತ ಗಮನ ಹರಿಸಲು ಆರಂಭಿಸಿದ್ದಾರೆ. ಬಹುದಿನಗಳ ಬಳಿಕ ಅವರು ಶೂಟಿಂಗ್​ಗೆ ಮರಳಿದ್ದಾರೆ. ಚಿತ್ರೀಕರಣದ ಸೆಟ್​ನಲ್ಲಿ ಅವರು ಕಾಣಿಸಿಕೊಂಡ ಫೋಟೋ ವೈರಲ್​ ಆಗುತ್ತಿದೆ. ಹೊಸ ಗೆಟಪ್​ನಲ್ಲಿ ಶಾರುಖ್​ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಮಗನ ವಿವಾದದಿಂದ ಬೇಸತ್ತಿದ್ದ ಶಾರುಖ್​ ಖಾನ್​ ಅವರು ಹಲವು ದಿನಗಳ ಬಳಿಕ ಕ್ಯಾಮೆರಾ ಎದುರಿಸಿದ್ದಾರೆ. ಹಾಗಂತ ಅವರು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿಲ್ಲ. ಬದಲಿಗೆ ಜಾಹೀರಾತೊಂದರ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ. ಉದ್ದ ಕೂದಲು ಬಿಟ್ಟು ಹೊಸ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಎರಡೂವರೆ ತಿಂಗಳ ಗ್ಯಾಪ್​ ಬಳಿಕ ಶಾರುಖ್​ ಶೂಟಿಂಗ್​ಗೆ ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಸೆಕ್ಯುರಿಟಿ ಒದಗಿಸಲಾಗಿತ್ತು.

ಬಹುನಿರೀಕ್ಷಿತ ‘ಪಠಾಣ್’​ ಸಿನಿಮಾದಲ್ಲೂ ಶಾರುಖ್​ ಖಾನ್​ ನಟಿಸುತ್ತಿದ್ದಾರೆ. ಈ ರೀತಿ ಉದ್ದ ಕೂದಲು ಬಿಟ್ಟಿರುವುದು ಆ ಚಿತ್ರಕ್ಕಾಗಿಯೇ ಇರಬಹುದಾ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಸದ್ಯ ಈ ಫೋಟೋಗಳು ವೈರಲ್​ ಆಗಿವೆ. ಅನೇಕ ದಿನಗಳ ಬಳಿಕ ತಮ್ಮ ನೆಚ್ಚಿನ ನಟ ಕೆಲಸಕ್ಕೆ ಮರಳಿರುವುದು ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

2018ರಲ್ಲಿ ತೆರೆಕಂಡ ‘ಜೀರೋ’ ಸಿನಿಮಾದ ಸೋಲಿನ ಬಳಿಕ ಶಾರುಖ್​ ಖಾನ್​ ಅವರು ಸಂಪೂರ್ಣ ಉತ್ಸಾಹ ಕಳೆದುಕೊಂಡಿದ್ದರು. ಹೊಸ ಸಿನಿಮಾ ಒಪ್ಪಿಕೊಳ್ಳುವಲ್ಲಿ ಅವರು ತುಂಬ ತಡ ಮಾಡಿದ್ದರು. ಇನ್ನೇನು ಅವರು ‘ಪಠಾಣ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡರು ಎಂಬಷ್ಟರಲ್ಲಿ ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ಶುರುವಾಗಿತ್ತು. ಅಂತೂ ಆ ಎಲ್ಲ ತಾಪತ್ರಯಗಳನ್ನು ಬದಿಗಿಟ್ಟು ಈಗ ಶಾರುಖ್​ ಖಾನ್​ ಮತ್ತೆ ಟ್ರ್ಯಾಕ್​ಗೆ ಮರಳಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:

ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?

Aryan Khan: ಆರ್ಯನ್​ ಖಾನ್​ ಜನ್ಮದಿನ: ಮಧ್ಯರಾತ್ರಿ 12 ಗಂಟೆಗೆ NCB ಅಧಿಕಾರಿಗಳ ಜತೆ ಕಾಲ ಕಳೆದ ಶಾರುಖ್​ ಪುತ್ರ​

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು