AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ನನ್ನ ಸಂಬಂಧಿ ಅಲ್ಲ; ಉಲ್ಟಾ ಹೊಡೆದ ನಟ ವಿಕ್ರಾಂತ್

ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಕೋ-ಪೈಲಟ್ ಕ್ಲೈವ್ ಕುಂದರ್ ಅವರು ತಮ್ಮ ಸಂಬಂಧಿ ಎಂದು ನಟ ವಿಕ್ರಾಂತ್ ಹೇಳಿಕೊಂಡಿದ್ದರು. ಆದರೆ, ತಪ್ಪು ತಿಳುವಳಿಕೆ ಎಂದು ಸ್ಪಷ್ಟಪಡಿಸಿದ್ದಾರೆ. ಕ್ಲೈವ್ ಅವರು ಕುಟುಂಬದ ಸ್ನೇಹಿತರೆಂದು ಹೇಳಿದ್ದಾರೆ. ಏರ್ ಇಂಡಿಯಾ ವಿಮಾನ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿತ್ತು. ಈ ವಿಮಾನದಲ್ಲಿ 242 ಮಂದಿ ಇದ್ದರು.

ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ನನ್ನ ಸಂಬಂಧಿ ಅಲ್ಲ; ಉಲ್ಟಾ ಹೊಡೆದ ನಟ ವಿಕ್ರಾಂತ್
ವಿಕ್ರಾಂತ್-ಕ್ಲೈವ್
ರಾಜೇಶ್ ದುಗ್ಗುಮನೆ
|

Updated on: Jun 13, 2025 | 7:44 AM

Share

ಏರ್ ಇಂಡಿಯಾ (Air India) ದುರಂತದಲ್ಲಿ ವಿಮಾನದ ಕೋ-ಪೈಲೆಟ್ ಆಗಿದ್ದ ಕರ್ನಾಟಕ ಮೂಲದ ಕ್ಲೈವ್ ಕುಂದರ್ ತಮ್ಮ ಸಂಬಂಧಿ ಎಂದು ‘12th ಫೇಲ್’ ಚಿತ್ರದ ನಟ ವಿಕ್ರಾಂತ್ ಮಾಸಿ ಹೇಳಿಕೊಂಡಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರೇ ಪೋಸ್ಟ್ ಕೂಡ ಹಾಕಿದ್ದರು. ಪೋಸ್ಟ್ ನೋಡಿದ ಪ್ರತಿಯೊಬ್ಬರಿಗೂ ಇದೇ ಅರ್ಥ ಕೊಡುವಂತೆ ಇತ್ತು. ಆದರೆ, ಈಗ ಇವರು ಉಲ್ಟಾ ಹೊಡೆದಿದ್ದಾರೆ. ಮಾಧ್ಯಮದವರೇ ತಪ್ಪಾಗಿ ಭಾವಿಸಿದ್ದಾರೆ ಎಂದು ಹೇಳುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಏರ್ ಇಂಡಿಯಾ ವಿಮಾನ ಅಹಮದಾಬಾದ್​ನಿಂದ ಲಂಡನ್​ಗೆ ಹೊರಟಿತ್ತು. ಈ ವಿಮಾನದಲ್ಲಿ 242 ಪ್ರಯಾಣಿಕರು ಇದ್ದರು. ಅದೃಷ್ಟ ರೀತಿಯಲ್ಲಿ ಓರ್ವ ಬದುಕಿದರೆ ಉಳಿದಂತೆ ಎಲ್ಲಾ 241 ಮಂದಿ ದುರಂತದಲ್ಲಿ ಮೃತಪಟ್ಟಿದ್ದರು. ವಿಮಾನದ ಕೋ ಪೈಲಟ್ ಕ್ಲೈವ್ ಕುಂದರ್ ಬಗ್ಗೆ ಪೋಸ್ಟ್ ಮಾಡಿದ್ದ ವಿಕ್ರಾಂತ್, ಅವರ ಸಾವಿಗೆ ಸಂತಾಪ ಸೂಚಿಸಿದ್ದರು.

‘ನನ್ನ ಅಂಕಲ್ ಕ್ಲಿಫರ್ಡ್​ ಕುಂದರ್ ಅವರು ಮಗನನ್ನು ಕಳೆದುಕೊಂಡಿದ್ದಾರೆ’ ಎಂದು ಬರೆದುಕೊಂಡಿದ್ದರು ವಿಕ್ರಾಂತ್. ಆ ಬಳಿಕ ಅವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ಕ್ಲೈವ್ ಕುಂದರ್ ಅವರು ನನ್ನ ಸಹೋದರ ಸಂಬಂಧಿ ಅಲ್ಲ. ಅವರು ನಮ್ಮ ಫ್ಯಾಮಿಲಿ ಫ್ರೆಂಡ್ ಅಷ್ಟೇ. ಈ ವಿಚಾರದಲ್ಲಿ ಹೆಚ್ಚಿನ ಊಹೆ ಬೇಡ. ಅವರ ಕುಟುಂಬ ನೆಮ್ಮದಿಯಿಂದ ಇರಲಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ
Image
ವಿಮಾನ ದುರಂತ: ‘12th ಫೇಲ್’ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ
Image
ಕೆಲಸದವರನ್ನು ಗೌರಿ ಖಾನ್ ಎಷ್ಟು ಉತ್ತಮವಾಗಿ ನೋಡಿಕೊಳ್ತಾರೆ ನೋಡಿ..
Image
ನನಗೆ ಮಾರ್ಗದರ್ಶನ ನೀಡಿದ್ದರೆ; ಡ್ರಗ್ಸ್ ಪಾರ್ಟಿ ಬಗ್ಗೆ ಮೌನ ಮುರಿದ ಮಂಗ್ಲಿ

ಏರ್​ ಇಂಡಿಯಾ ಬೋಯಿಂಗ್ 787, ಎಐ171 ವಿಮಾನ ಟೇಕಾಪ್ ಆದ ಕೆಲವೇ ನಿಮಿಷಗಳಲ್ಲಿ ಹಾಸ್ಟೆಲ್​ಗೆ ಅಪ್ಪಳಿಸಿತು. ಈ ವಿಮಾನ 230 ಪ್ರಯಾಣಿಕರು ಮತ್ತು 12 ಕ್ರ್ಯೂ ಮೆಂಬರ್​ಗಳನ್ನು ಹೊಂದಿತ್ತು. ಇದರಲ್ಲಿ 241 ಜನರು ನಿಧನ ಹೊಂದಿದ್ದಾರೆ. ಓರ್ವ ಮಾತ್ರ ಅದೃಷ್ಟ ರೀತಿಯಲ್ಲಿ ಪಾರಾಗಿದ್ದಾರೆ.

ಇದನ್ನೂ ಓದಿ: ವಿಮಾನ ದುರಂತ: ‘12th ಫೇಲ್’ ಸಿನಿಮಾ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು

ವಿಕ್ರಾಂತ್ ಅವರು ‘12th ಫೇಲ್’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಆ ಬಳಿಕ ಅವರು ಒಂದು ಬ್ರೇಕ್ ಪಡೆದಿದ್ದಾರೆ. ಸದ್ಯ ಕುಟುಂಬದ ಕಡೆ ಅವರು ಗಮನ ಹರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು