AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajol: ಮಾಸ್ಕ್​ ತೆಗೆಯಬೇಕು ಎಂದು ಜಯಾ ಬಚ್ಚನ್​ಗೆ ಒತ್ತಾಯ ಮಾಡಿದ ಕಾಜೋಲ್​; ನೆಟ್ಟಿಗರ​ ಪ್ರತಿಕ್ರಿಯೆ ಏನು?

Jaya Bachchan: ದುರ್ಗಾ ಪೂಜೆಗೆ ಬಂದಿದ್ದ ಅನೇಕ ಸೆಲೆಬ್ರಿಟಿಗಳು ಮಾಸ್ಕ್​ ಧರಿಸಿರಲಿಲ್ಲ. ಆದರೆ ಜಯಾ ಬಚ್ಚನ್​ ಅವರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್​ ಹಾಕಿಕೊಂಡಿದ್ದರು.

Kajol: ಮಾಸ್ಕ್​ ತೆಗೆಯಬೇಕು ಎಂದು ಜಯಾ ಬಚ್ಚನ್​ಗೆ ಒತ್ತಾಯ ಮಾಡಿದ ಕಾಜೋಲ್​; ನೆಟ್ಟಿಗರ​ ಪ್ರತಿಕ್ರಿಯೆ ಏನು?
ಕಾಜೋಲ್, ಜಯಾ ಬಚ್ಚನ್
TV9 Web
| Edited By: |

Updated on:Oct 04, 2022 | 7:43 AM

Share

ಎಲ್ಲೆಡೆ ನವರಾತ್ರಿ ಮತ್ತು ದುರ್ಗಾ ಪೂಜೆಯನ್ನು (Durga Puja) ಸಡಗರದಿಂದ ಆಚರಿಸಲಾಗುತ್ತಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಹಬ್ಬದ ಸಂಭ್ರಮದಲ್ಲಿ ಮುಳುಗಿದ್ದಾರೆ. ಬಾಲಿವುಡ್​ನ ಅನೇಕ ನಟ-ನಟಿಯರು ದುರ್ಗಾ ಪೂಜೆಯಲ್ಲಿ ಭಾಗಿ ಆಗಿದ್ದಾರೆ. ಮುಂಬೈನ ಜುಹೂನಲ್ಲಿ ಅದ್ದೂರಿಯಾಗಿ ದುರ್ಗಾ ಪೂಜೆ ಮಾಡಲಾಗುತ್ತಿದೆ. ಇದರಲ್ಲಿ ಕಾಜೋಲ್​, ಜಯಾ ಬಚ್ಚನ್​ (Jaya Bachchan), ರಾಣಿ ಮುಖರ್ಜಿ, ಮೌನಿ ರಾಯ್​, ಅಯಾನ್​ ಮುಖರ್ಜಿ, ರೂಪಾಲಿ ಗಂಗೂಲಿ ಮುಂತಾದವರು ಭಾಗವಹಿಸಿದ್ದಾರೆ. ಈ ವೇಳೆ ಜಯ ಬಚ್ಚನ್​ ಅವರು ಮಾಸ್ಕ್​ ತೆಗೆಯಬೇಕು ಎಂದು ಕಾಜೋಲ್​ (Kajol) ಒತ್ತಾಯ ಮಾಡಿದ್ದು ಫನ್ನಿಯಾಗಿದೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಕೊರೊನಾ ಹಾವಳಿ ಕಮ್ಮಿ ಆಗಿದೆ. ಮಾಸ್ಕ್ ಕಡ್ಡಾಯ ಎಂಬ ನಿಯಮ ಕೂಡ ಇಲ್ಲ. ಹಾಗಾಗಿ ದುರ್ಗಾ ಪೂಜೆಗೆ ಬಂದಿದ್ದ ಅನೇಕ ಸೆಲೆಬ್ರಿಟಿಗಳು ಮಾಸ್ಕ್​ ಧರಿಸಿರಲಿಲ್ಲ. ಆದರೆ ಜಯಾ ಬಚ್ಚನ್​ ಅವರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್​ ಹಾಕಿಕೊಂಡಿದ್ದರು. ಅನೇಕ ಸೆಲೆಬ್ರಿಟಿಗಳು ಒಂದೆಡೆ ಸೇರಿದಾಗ ಪಾಪರಾಜಿಗಳಿಗೆ ಹಬ್ಬ. ಫೋಟೋ ಕ್ಲಿಕ್ಕಿಸುವ ಸಲುವಾಗಿ ಅವರು ಮುಗಿಬೀಳುತ್ತಾರೆ. ದುರ್ಗಾ ಪೂಜೆಯ ಸಮಯದಲ್ಲೂ ಹಾಗೆಯೇ ಆಗಿದೆ.

ಫೋಟೋಗೆ ಪೋಸ್​ ಕೊಡುವಾಗ ಮಾಸ್ಕ್​ ತೆಗೆಯಲೇ ಬೇಕು ಎಂದು ಜಯಾ ಬಚ್ಚನ್​ಗೆ ಕಾಜೋಲ್​ ಒತ್ತಾಯ ಮಾಡಿದರು. ಅವರ ಮಾತಿಗೆ ಬೆಲೆಕೊಟ್ಟು ಜಯಾ ಮಾಸ್ಕ್​ ತೆಗೆದರು. ಎಲ್ಲರೂ ಜೊತೆ ಸೇರಿ ಫೋಟೋಗೆ ಪೋಸ್​ ನೀಡಿದರು. ‘ಬೇಗ ಬೇಗ ಫೋಟೋ ತೆಗೆಯಿರಿ’ ಎಂದು ಪಾಪರಾಜಿಗಳಿಗೆ ಜಯಾ ಬಚ್ಚನ್​ ಒತ್ತಾಯಿಸಿದರು. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಈ ವಿಡಿಯೋಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Kajol: ಒಟಿಟಿ ಎಂಟ್ರಿ ಬಗ್ಗೆ ಕಡೆಗೂ ನಿಜ ಒಪ್ಪಿಕೊಂಡ ನಟಿ ಕಾಜೋಲ್​; ಹೆಚ್ಚಿತು ಫ್ಯಾನ್ಸ್​ ನಿರೀಕ್ಷೆ
Image
Kajol: ಒಟಿಟಿ ಜಗತ್ತಿಗೆ ನಟಿ ಕಾಜೋಲ್​ ಎಂಟ್ರಿ; ಪ್ರತಿ ಎಪಿಸೋಡ್​ಗೆ ಪಡೆಯುವ ಸಂಭಾವನೆ ಇಷ್ಟೊಂದಾ?
Image
ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ
Image
ಈ ಕೆಟ್ಟ ಚಟ ಬಿಡೋಕೆ ತುಂಬಾನೇ ಪ್ರಯತ್ನಿಸುತ್ತಿದ್ದಾರೆ ನಟಿ ಕಾಜೋಲ್​

ಜಯಾ ಬಚ್ಚನ್​ ಪತಿ ಅಮಿತಾಭ್​ ಬಚ್ಚನ್​ ಅವರಿಗೆ ಎರಡು ಬಾರಿ ಕೊರೊನಾ ವೈರಸ್​ ತಗುಲಿತ್ತು. ಅದನ್ನೇ ಕಮೆಂಟ್​ ಬಾಕ್ಸ್​ನಲ್ಲಿ ನೆನಪು ಮಾಡಿಕೊಂಡಿದ್ದಾರೆ ನೆಟ್ಟಿಗರು. ‘ಅಮಿತ್​ ಅಂಕಲ್​ಗೆ ಪದೇಪದೇ ಕೊರೊನಾ ಆಗುತ್ತಲ್ವಾ.. ಹಾಗಾಗಿ ಜಯಾಗೆ ಭಯ ಸಹಜ’ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ‘ಮೀಡಿಯಾ ಮುಂದೆ ಜಯಾ ಬಚ್ಚನ್​ ನಕ್ಕಿದ್ದು ಕೂಡ ಬಹಳ ಅಪರೂಪ’ ಎಂಬ ಕಮೆಂಟ್​ ಕೂಡ ಬಂದಿದೆ.

2020ರಲ್ಲಿ ಅಮಿತಾಭ್​ ಬಚ್ಚನ್​ ಅವರ ಇಡೀ ಕುಟುಂಬಕ್ಕೆ ಕೊರೊನಾ ವೈರಸ್​ ತಗುಲಿತ್ತು. ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರು ಗುಣಮುಖರಾಗಿದ್ದರು. ಈ ವರ್ಷ ಆಗಸ್ಟ್​ 23ರಂದು ಕೂಡ ಅವರಿಗೆ ಮತ್ತೊಮ್ಮೆ ಕೊವಿಡ್ ಪಾಸಿಟಿವ್​ ಆಗಿತ್ತು. ಹಾಗಾಗಿ ಅವರ ಕುಟುಂಬದವರು ತುಂಬ ಎಚ್ಚರಿಕೆ ವಹಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Tue, 4 October 22

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್