AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನ ದಹನ ಮಾಡಲು ವಿಫಲವಾದ ಕಂಗನಾ ರಣಾವತ್; ನಟಿಯ ಪರದಾಟ ನೋಡಿ  

ಕಳೆದ 50 ವರ್ಷಗಳಲ್ಲಿ ರಾವಣನ ದಹನವನ್ನು ಪುರುಷರೇ ಮಾಡುತ್ತಾ ಬರುತ್ತಿದ್ದರು. ಈ ವರ್ಷ ಕಂಗನಾ ಅವರಿಗೆ ಅವಕಾಶ ನೀಡಲಾಯಿತು. ಆದರೆ, ಅವರಿಂದ ಇದು ಸಾಧ್ಯವಾಗಿಲ್ಲ. ಅವರು ಮೂರು ಬಾರಿ ಪ್ರಯತ್ನಿಸಿದರೂ ಬಾಣ ಬಿಡಲು ಬರಲೇ ಇಲ್ಲ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ರಾವಣನ ದಹನ ಮಾಡಲು ವಿಫಲವಾದ ಕಂಗನಾ ರಣಾವತ್; ನಟಿಯ ಪರದಾಟ ನೋಡಿ   
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Oct 25, 2023 | 11:00 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಎಲ್ಲರ ಎದುರು ನಗೆಪಾಟಲಿಗೆ ಈಡಾಗಿದ್ದಾರೆ. ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಲವಕುಶ ರಾಮ್​ಲೀಲಾ ಸಮಾರಂಭದಲ್ಲಿ ಅವರು ರಾವಣನ ದಹನ ಮಾಡಲು ವಿಫಲರಾಗಿದ್ದಾರೆ. ಅವರಿಗೆ ಬಾಣ ಬಿಡಲು ಸಾಧ್ಯವೇ ಆಗಿಲ್ಲ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದ್ದು, ನಟಿಯನ್ನು ಎಲ್ಲರೂ ಟೀಕಿಸುತ್ತಿದ್ದಾರೆ. ಅವರಿಗೆ ಈ ರೀತಿ ಆಗಬಾರದಿತ್ತು ಎಂದು ಅನೇಕರು ಹೇಳಿದ್ದಾರೆ.

ಕಳೆದ 50 ವರ್ಷಗಳಲ್ಲಿ ರಾವಣನ ದಹನವನ್ನು ಪುರುಷರೇ ಮಾಡುತ್ತಾ ಬರುತ್ತಿದ್ದರು. ಈ ವರ್ಷ ಕಂಗನಾ ಅವರಿಗೆ ಅವಕಾಶ ನೀಡಲಾಯಿತು. ಆದರೆ, ಅವರಿಂದ ಇದು ಸಾಧ್ಯವಾಗಿಲ್ಲ. ಅವರು ಮೂರು ಬಾರಿ ಪ್ರಯತ್ನಿಸಿದರೂ ಬಾಣ ಬಿಡಲು ಬರಲೇ ಇಲ್ಲ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಕಂಗನಾ ಅವರು ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಜೊತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡ ಇದ್ದರು. ಅವರು ಬಿಲ್ಲನ್ನು ಕೈಗೆ ಎತ್ತಿಕೊಂಡಿದ್ದಾರೆ. ಬಾಣ ಬಿಡಲು ನೋಡಿದರೂ ಅದು ಸಾಧ್ಯವಾಗಿಲ್ಲ. ಆಗ ಕಂಗನಾ ನಕ್ಕಿದ್ದಾರೆ. ಬೇರೆಯವರು ಬಾಣ ಬಿಟ್ಟಿದ್ದಾರೆ. ಆ ಬಳಿಕ ಅವರು ‘ಜೈ ಶ್ರೀ ರಾಮ್’ ಎಂದು ಕೂಗಿದ್ದಾರೆ.

‘ಬಾಲಿವುಡ್​ನಲ್ಲಿ ಸ್ಟಂಟ್ ಮಾಡಿದಷ್ಟು ಸುಲಭವಲ್ಲ. ಇವರೆಲ್ಲ ಚಿತ್ರರಂಗಕ್ಕೆ ಸೂಕ್ತ’ ಎಂದು ಕೆಲವರು ಹೇಳಿದ್ದಾರೆ. ‘ಸಿಕ್ಕ ಒಂದೊಳ್ಳೆಯ ಅವಕಾಶವನ್ನೂ ಕೈಚೆಲ್ಲಿಕೊಂಡಿರಲ್ಲ’ ಎಂದು ಕೆಲವರು ಬರೆದಿದ್ದಾರೆ. ‘ಕಂಗನಾಗೆ ಇಷ್ಟೊಂದು ಅವಮಾನ ಆಗಬಾರದಿತ್ತು’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಮೊದಲ ಬಾರಿ ಮಹಿಳೆಯಿಂದ ರಾವಣ ದಹನ; ಇತಿಹಾಸ ಬರೆಯಲಿರುವ ಕಂಗನಾ ರಣಾವತ್​ 

‘ಲವಕುಶ ರಾಮ್​ಲೀಲಾ’ದಲ್ಲಿ ಕಳೆದ ವರ್ಷ ಪ್ರಭಾಸ್​ ಅವರು ರಾವಣನ ದಹನ ಮಾಡಿದ್ದರು. ‘ಆದಿಪುರುಷ್’ ರಿಲೀಸ್ ಸಂದರ್ಭದಲ್ಲಿ ಪ್ರಭಾಸ್​ಗೆ ಈ ಅವಕಾಶ ಸಿಕ್ಕಿತ್ತು. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ, ಅಜಯ್​ ದೇವಗನ್​, ಜಾನ್​ ಅಬ್ರಾಹಂ ಮೊದಲಾದವರು ರಾವಣನ ದಹನ ಮಾಡಿದ್ದರು. ಕಂಗನಾ ರಣಾವತ್ ನಟನೆಯ ‘ತೇಜಸ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರ ಅಕ್ಟೋಬರ್ 27ರಂದು ಬಿಡುಗಡೆ ಆಗುತ್ತಿದೆ. ಅವರ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಬೇಕಿದೆ. ಈ ಸಿನಿಮಾದ ಬಿಡುಗಡೆ ದಿನಾಂಕ 2023ಕ್ಕೆ ಮುಂದೂಡಲ್ಪಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ