AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನ ದಹನ ಮಾಡಲು ವಿಫಲವಾದ ಕಂಗನಾ ರಣಾವತ್; ನಟಿಯ ಪರದಾಟ ನೋಡಿ  

ಕಳೆದ 50 ವರ್ಷಗಳಲ್ಲಿ ರಾವಣನ ದಹನವನ್ನು ಪುರುಷರೇ ಮಾಡುತ್ತಾ ಬರುತ್ತಿದ್ದರು. ಈ ವರ್ಷ ಕಂಗನಾ ಅವರಿಗೆ ಅವಕಾಶ ನೀಡಲಾಯಿತು. ಆದರೆ, ಅವರಿಂದ ಇದು ಸಾಧ್ಯವಾಗಿಲ್ಲ. ಅವರು ಮೂರು ಬಾರಿ ಪ್ರಯತ್ನಿಸಿದರೂ ಬಾಣ ಬಿಡಲು ಬರಲೇ ಇಲ್ಲ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ರಾವಣನ ದಹನ ಮಾಡಲು ವಿಫಲವಾದ ಕಂಗನಾ ರಣಾವತ್; ನಟಿಯ ಪರದಾಟ ನೋಡಿ   
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Oct 25, 2023 | 11:00 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಎಲ್ಲರ ಎದುರು ನಗೆಪಾಟಲಿಗೆ ಈಡಾಗಿದ್ದಾರೆ. ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಲವಕುಶ ರಾಮ್​ಲೀಲಾ ಸಮಾರಂಭದಲ್ಲಿ ಅವರು ರಾವಣನ ದಹನ ಮಾಡಲು ವಿಫಲರಾಗಿದ್ದಾರೆ. ಅವರಿಗೆ ಬಾಣ ಬಿಡಲು ಸಾಧ್ಯವೇ ಆಗಿಲ್ಲ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದ್ದು, ನಟಿಯನ್ನು ಎಲ್ಲರೂ ಟೀಕಿಸುತ್ತಿದ್ದಾರೆ. ಅವರಿಗೆ ಈ ರೀತಿ ಆಗಬಾರದಿತ್ತು ಎಂದು ಅನೇಕರು ಹೇಳಿದ್ದಾರೆ.

ಕಳೆದ 50 ವರ್ಷಗಳಲ್ಲಿ ರಾವಣನ ದಹನವನ್ನು ಪುರುಷರೇ ಮಾಡುತ್ತಾ ಬರುತ್ತಿದ್ದರು. ಈ ವರ್ಷ ಕಂಗನಾ ಅವರಿಗೆ ಅವಕಾಶ ನೀಡಲಾಯಿತು. ಆದರೆ, ಅವರಿಂದ ಇದು ಸಾಧ್ಯವಾಗಿಲ್ಲ. ಅವರು ಮೂರು ಬಾರಿ ಪ್ರಯತ್ನಿಸಿದರೂ ಬಾಣ ಬಿಡಲು ಬರಲೇ ಇಲ್ಲ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಕಂಗನಾ ಅವರು ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಜೊತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡ ಇದ್ದರು. ಅವರು ಬಿಲ್ಲನ್ನು ಕೈಗೆ ಎತ್ತಿಕೊಂಡಿದ್ದಾರೆ. ಬಾಣ ಬಿಡಲು ನೋಡಿದರೂ ಅದು ಸಾಧ್ಯವಾಗಿಲ್ಲ. ಆಗ ಕಂಗನಾ ನಕ್ಕಿದ್ದಾರೆ. ಬೇರೆಯವರು ಬಾಣ ಬಿಟ್ಟಿದ್ದಾರೆ. ಆ ಬಳಿಕ ಅವರು ‘ಜೈ ಶ್ರೀ ರಾಮ್’ ಎಂದು ಕೂಗಿದ್ದಾರೆ.

‘ಬಾಲಿವುಡ್​ನಲ್ಲಿ ಸ್ಟಂಟ್ ಮಾಡಿದಷ್ಟು ಸುಲಭವಲ್ಲ. ಇವರೆಲ್ಲ ಚಿತ್ರರಂಗಕ್ಕೆ ಸೂಕ್ತ’ ಎಂದು ಕೆಲವರು ಹೇಳಿದ್ದಾರೆ. ‘ಸಿಕ್ಕ ಒಂದೊಳ್ಳೆಯ ಅವಕಾಶವನ್ನೂ ಕೈಚೆಲ್ಲಿಕೊಂಡಿರಲ್ಲ’ ಎಂದು ಕೆಲವರು ಬರೆದಿದ್ದಾರೆ. ‘ಕಂಗನಾಗೆ ಇಷ್ಟೊಂದು ಅವಮಾನ ಆಗಬಾರದಿತ್ತು’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಮೊದಲ ಬಾರಿ ಮಹಿಳೆಯಿಂದ ರಾವಣ ದಹನ; ಇತಿಹಾಸ ಬರೆಯಲಿರುವ ಕಂಗನಾ ರಣಾವತ್​ 

‘ಲವಕುಶ ರಾಮ್​ಲೀಲಾ’ದಲ್ಲಿ ಕಳೆದ ವರ್ಷ ಪ್ರಭಾಸ್​ ಅವರು ರಾವಣನ ದಹನ ಮಾಡಿದ್ದರು. ‘ಆದಿಪುರುಷ್’ ರಿಲೀಸ್ ಸಂದರ್ಭದಲ್ಲಿ ಪ್ರಭಾಸ್​ಗೆ ಈ ಅವಕಾಶ ಸಿಕ್ಕಿತ್ತು. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ, ಅಜಯ್​ ದೇವಗನ್​, ಜಾನ್​ ಅಬ್ರಾಹಂ ಮೊದಲಾದವರು ರಾವಣನ ದಹನ ಮಾಡಿದ್ದರು. ಕಂಗನಾ ರಣಾವತ್ ನಟನೆಯ ‘ತೇಜಸ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರ ಅಕ್ಟೋಬರ್ 27ರಂದು ಬಿಡುಗಡೆ ಆಗುತ್ತಿದೆ. ಅವರ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಬೇಕಿದೆ. ಈ ಸಿನಿಮಾದ ಬಿಡುಗಡೆ ದಿನಾಂಕ 2023ಕ್ಕೆ ಮುಂದೂಡಲ್ಪಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ