AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kareena Kapoor: ಕೊರೊನಾ ಬಂದು ಕ್ವಾರಂಟೈನ್​ನಲ್ಲಿರುವ ಕರೀನಾಗೆ ಸಮಾಧಾನ ನೀಡಿದ ಒಮಿಕ್ರಾನ್ ರಿಪೋರ್ಟ್

Saif Ali Khan: ಬಾಲಿವುಡ್ ನಟಿ ಕರೀನಾ ಕಪೂರ್​ಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗಿತ್ತು. ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ಕರೀನಾ ಮತ್ತು ಅವರ ಸ್ನೇಹಿತೆಯರಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಒಮಿಕ್ರಾನ್ ರಿಪೋರ್ಟ್ ಬಂದಿದೆ.

Kareena Kapoor: ಕೊರೊನಾ ಬಂದು ಕ್ವಾರಂಟೈನ್​ನಲ್ಲಿರುವ ಕರೀನಾಗೆ ಸಮಾಧಾನ ನೀಡಿದ ಒಮಿಕ್ರಾನ್ ರಿಪೋರ್ಟ್
ಕರೀನಾ ಕಪೂರ್
TV9 Web
| Updated By: shivaprasad.hs|

Updated on: Dec 24, 2021 | 4:51 PM

Share

ಬಾಲಿವುಡ್ ನಟಿ ಕರೀನಾ ಕಪೂರ್​ಗೆ (Kareena Kapoor) ಇತ್ತೀಚೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಡಿಸೆಂಬರ್ ತಿಂಗಳ ಆರಂಭದಲ್ಲಿ ಪಾರ್ಟಿಯೊಂದರಲ್ಲಿ ಭಾಗವಹಿಸಿದ್ದ ಕರೀನಾ ಹಾಗೂ ಆಕೆಯ ಸ್ನೇಹಿತೆಯರಿಗೆ ಸೋಂಕು ತಗುಲಿತ್ತು. ನಂತರದಲ್ಲಿ ಒಮಿಕ್ರಾನ್ (Omicron) ವರದಿಯನ್ನು ಪಡೆಯುವುದಕ್ಕಾಗಿ ಅವರಿಗೆ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಿ, ರಿಪೋರ್ಟ್​​ಗೆ ಕಾಯಲಾಗುತ್ತಿತ್ತು. ಸದ್ಯ ವರದಿ ಕೈಸೇರಿದ್ದು, ಕರೀನಾ ನಿಟ್ಟುಸಿರು ಬಿಟ್ಟಿದ್ದಾರೆ. ಈ ಕುರಿತು ಬೃಹನ್​ ಮುಂಬೈ ಕಾರ್ಪೊರೇಷನ್ (ಬಿಎಂಸಿ) ಸುದ್ದಿಸಂಸ್ಥೆ ಎಎನ್​ಐಗೆ ತಿಳಿಸಿದ್ದು, ‘‘ಕರೀನಾಗೆ ಒಮಿಕ್ರಾನ್ ವರದಿ ನೆಗೆಟಿವ್ ಬಂದಿದೆ’’ ಎಂದಿದೆ. ಪ್ರಸ್ತುತ ಕರೀನಾ ಕಪೂರ್ ಕೊವಿಡ್​ನಿಂದ ಚೇತರಿಸಿಕೊಳ್ಳುತ್ತಿದ್ದು, ಕ್ವಾರಂಟೈನ್​ನ 13ನೇ ದಿನದಲ್ಲಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕರೀನಾ ಕಪೂರ್ ಮತ್ತು ಅವರ ಆಪ್ತ ಗೆಳತಿ ಅಮೃತಾ ಅರೋರಾ ಪಾರ್ಟಿಯೊಂದರಲ್ಲಿ ಭಾಗವಹಿಸಿದ ನಂತರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇವರೊಂದಿಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದ ಸೀಮಾ ಖಾನ್ ಹಾಗೂ ಮಹೀಪ್ ಕಪೂರ್​​ಗೂ ಸೋಂಕು ಪತ್ತೆಯಾಗಿತ್ತು.

ಕರೀನಾ ಹಾಗೂ ಅವರ ಸ್ನೇಹಿತರು ಪಾರ್ಟಿಯಲ್ಲಿ ಭಾಗವಹಿಸಿ, ಕೊವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿದ್ದಕ್ಕೆ ಬಿಎಂಸಿ ಆಕ್ರೋಶ ಹೊರಹಾಕಿತ್ತು. ಇದಕ್ಕೆ ಕರೀನಾ ವಕ್ತಾರರು ನಟಿ ಜವಾಬ್ದಾರಿಯುತವಾಗಿ, ಕೊರೊನಾ ನಿಯಮಾವಳಿಗಳನ್ನು ಪಾಲಿಸಿ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದರು ಎಂದಿದ್ದರು.

ಕ್ವಾರಂಟೈನ್ ಸಮಯದಲ್ಲಿ ಕರೀನಾ ಸತತವಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಸಂಪತರ್ಕದಲ್ಲಿದ್ದಾರೆ. ಇತ್ತೀಚೆಗೆ ಅವರು ಇನ್ನು ಕೇವಲ ಎರಡು ದಿನದಲ್ಲಿ ಕ್ವಾರಂಟೈನ್ ಮುಗಿಯಲಿದೆ ಎಂದು ಬರೆದುಕೊಂಡಿದ್ದರು. ಅದಕ್ಕೆ ಪೂರಕವಾಗಿ ಒಮಿಕ್ರಾನ್ ನೆಗೆಟಿವ್ ವರದಿ ಬಂದಿರುವುದು ಕರೀನಾಗೆ ಪ್ಲಸ್ ಆಗಿದೆ.

ಚಿತ್ರಗಳ ವಿಷಯಕ್ಕೆ ಬಂದರೆ, ಕರೀನಾ ಅಮೀರ್ ಖಾನ್ ನಟನೆಯ ‘ಲಾಲ್ ಸಿಂಗ್ ಛಡ್ಡಾ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದ್ವೈತ್ ಚಂದನ್ ನಿರ್ದೇಶನದ ಈ ಚಿತ್ರವನ್ನು ಅಮೀರ್ ಖಾನ್ ಹಾಗೂ ಕಿರಣ್ ರಾವ್ ನಿರ್ಮಿಸುತ್ತಿದ್ದಾರೆ. ಹಾಲಿವುಡ್​ನ ಯಶಸ್ವಿ ಚಿತ್ರ ‘ಫಾರೆಸ್ಟ್ ಗಂಪ್​’ನ ರಿಮೇಕ್ ಇದಾಗಿದ್ದು, ಅಮೀರ್ ಖಾನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ತೆಲುಗು ನಟ ನಾಗ ಚೈತನ್ಯ ಈ ಚಿತ್ರದ ಮುಖಾಂತರ ಬಾಲಿವುಡ್ ಪ್ರವೇಶಿಸುತ್ತಿದ್ದಾರೆ. 2022ರ ಏಪ್ರಿಲ್ 14ರಂದು ಚಿತ್ರ ತೆರೆಗೆ ಬರಲಿದೆ.

ಇದನ್ನೂ ಓದಿ:

ಪ್ರೇಕ್ಷಕರಿಗೆ ‘ಬಡವ ರಾಸ್ಕಲ್​’ ಚಿತ್ರ ಇಷ್ಟವಾಯ್ತಾ? ಧನಂಜಯ ಅಭಿಮಾನಿಗಳು ಹೇಳಿದ್ದೇನು?

‘ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜತೆ ಸಮಂತಾ ಮತ್ತೊಂದು ವೆಬ್​ ಸೀರಿಸ್​; ಆ್ಯಕ್ಷನ್​ನಲ್ಲಿ ಮಿಂಚಲಿದ್ದಾರೆ ಸ್ಯಾಮ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ