AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಿಳೆಯನ್ನು ಏಕೆ ಮದುವೆ ಆಗಬಾರದು’; ನೇರವಾಗಿ ಕೇಳಿದ್ದ ನಟಿ ರೇಖಾ

ದೆಹಲಿ ಮೂಲದ ಉದ್ಯಮಿ ಮುಕೇಶ್ ಅಗರವಾಲ್ ಜೊತೆ 1990ರ ಮಾರ್ಚ್ ತಿಂಗಳಲ್ಲಿ ರೇಖಾ ಮದುವೆ ಆದರು. ಮದುವೆ ಆದ ಏಳೇ ತಿಂಗಳಲ್ಲಿ ಮುಕೇಶ್ ಆತ್ಮಹತ್ಯೆ ಮಾಡಿಕೊಂಡರು.

‘ಮಹಿಳೆಯನ್ನು ಏಕೆ ಮದುವೆ ಆಗಬಾರದು’; ನೇರವಾಗಿ ಕೇಳಿದ್ದ ನಟಿ ರೇಖಾ
ರೇಖಾ
ರಾಜೇಶ್ ದುಗ್ಗುಮನೆ
|

Updated on: Jul 24, 2023 | 10:51 AM

Share

ನಟಿ ರೇಖಾ (Rekha) ಬಗ್ಗೆ ಇತ್ತೀಚೆಗೆ ಸುಳ್ಳು ಸುದ್ದಿ ಒಂದು ಹಬ್ಬಿತ್ತು. ತಮ್ಮ ಲೇಡಿ ಮ್ಯಾನೇಜರ್ ಫರ್ಜಾನಾ ಜೊತೆ ರೇಖಾ ಲಿವ್​-ಇನ್ ರಿಲೇಶನ್​ಶಿಪ್​ನಲ್ಲಿದ್ದರು ಎಂದು ಅವರ ಬಯೋಗ್ರಫಿಯಲ್ಲಿ ಬರೆದಿರುವುದಾಗಿ ವರದಿ ಆಗಿತ್ತು. ಆದರೆ, ಈ ವರದಿ ಸುಳ್ಳು ಎಂಬುದು ಬಳಿಕ ತಿಳಿದು ಬಂದಿತ್ತು. ಅಚ್ಚರಿಯ ವಿಚಾರ ಎಂದರೆ ನಟಿ ರೇಖಾ ಅವರು ‘ನಾನು ಮಹಿಳೆಯನ್ನು ಏಕೆ ಮದುವೆ ಆಗಬಾರದು’ ಎಂದು ಸಂದರ್ಶನ ಒಂದರಲ್ಲಿ ನೇರವಾಗಿ ಕೇಳಿದ್ದರು. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ರೇಖಾ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ರಹಸ್ಯಗಳಿವೆ. ಇದರ ಬಗ್ಗೆ ಅನೇಕ ರೀತಿಯ ಚರ್ಚೆಗಳು ನಡೆದಿವೆ. ಬಾಲಿವುಡ್ ಸ್ಟಾರ್ ನಟ ಅಮಿತಾಭ್ ಬಚ್ಚನ್ ಜೊತೆ ಅವರು ಮದುವೆ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಹಾಗಾಗಿಲ್ಲ. ದೆಹಲಿ ಮೂಲದ ಉದ್ಯಮಿ ಮುಕೇಶ್ ಅಗರವಾಲ್ ಜೊತೆ 1990ರ ಮಾರ್ಚ್ ತಿಂಗಳಲ್ಲಿ ರೇಖಾ ಮದುವೆ ಆದರು. ಮದುವೆ ಆದ ಏಳೇ ತಿಂಗಳಲ್ಲಿ ಮುಕೇಶ್ ಆತ್ಮಹತ್ಯೆ ಮಾಡಿಕೊಂಡರು. ಆ ಬಳಿಕೆ ರೇಖಾ ಮತ್ತೊಂದು ಮದುವೆ ಆಗಿಲ್ಲ.

ಎರಡನೇ ಮದುವೆ ಬಗ್ಗೆ ಸಂದರ್ಶನ ಒಂದರಲ್ಲಿ ರೇಖಾ ಮಾತನಾಡಿದ್ದರು. ಅದು 2004ನೇ ಇಸ್ವಿ. ಅವರು ಸಿಮಿ ಗರೇವಾಲ್ ಅವರ ಶೋನಲ್ಲಿ ಭಾಗಿ ಆಗಿದ್ದರು. ಮದುವೆ ಬಗ್ಗೆ ಅವರಿಗೆ ಪ್ರಶ್ನೆ ಮಾಡಲಾಗಿತ್ತು. ‘ಪುರುಷನ ಜೊತೆ ಮತ್ತೆ ಮದುವೆಯೇ’ ಎಂದು ರೇಖಾ ಮರು ಪ್ರಶ್ನೆ ಮಾಡಿದ್ದರು. ‘ಮಹಿಳೆಯ ಜೊತೆಯಂತೂ ಮದುವೆಯಾಗಲು ಸಾಧ್ಯವಿಲ್ಲವಲ್ಲ’ ಎಂದು ಸಿಮಿ ಉತ್ತರಿಸಿದ್ದರು. ಇದಕ್ಕೆ ರೇಖಾ ‘ಯಾಕಾಗಬಾರದು’ ಎಂದು ಕೇಳಿದ್ದರು.

ಇದನ್ನೂ ಓದಿ: ಲೇಡಿ ಸೆಕ್ರೇಟರಿ ಜೊತೆ ಸಂಬಂಧ ಇಟ್ಟುಕೊಂಡಿದ್ದ ನಟಿ ರೇಖಾ? ಬಯೋಗ್ರಫಿಯಲ್ಲಿ ಹೊರಬಿತ್ತು ಶಾಕಿಂಗ್ ವಿಚಾರ

‘ಮನಸ್ಸಿನ ಪ್ರಕಾರ ನನ್ನ ಜೊತೆ, ನನ್ನ ವೃತ್ತಿಯ ಜೊತೆ, ಪ್ರೀತಿ ಪಾತ್ರರರ ಜೊತೆ ಮದುವೆ ಆಗಿದ್ದೇನೆ. ನಾನು ಸಿನಿಕತೆ ಇರುವ ವ್ಯಕ್ತಿ ಅಲ್ಲ’ ಎಂದು ರೇಖಾ ಹೇಳಿದ್ದರು.  ವಿನೋದ್ ಮೆಹ್ರಾ ಜೊತೆ ರೇಖಾ ಮದುವೆ ಆಗಿದ್ದಾರೆ ಎನ್ನುವ ಮಾತಿದೆ. ಆದರೆ, ಇದನ್ನು ರೇಖಾ ಅಲ್ಲಗಳೆದಿದ್ದರು. ‘ವಿನೋದ್ ಮೆಹ್ರಾ ಅವರು ನನ್ನ ಹಿತೈಷಿ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ