AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಿಳೆಯನ್ನು ಏಕೆ ಮದುವೆ ಆಗಬಾರದು’; ನೇರವಾಗಿ ಕೇಳಿದ್ದ ನಟಿ ರೇಖಾ

ದೆಹಲಿ ಮೂಲದ ಉದ್ಯಮಿ ಮುಕೇಶ್ ಅಗರವಾಲ್ ಜೊತೆ 1990ರ ಮಾರ್ಚ್ ತಿಂಗಳಲ್ಲಿ ರೇಖಾ ಮದುವೆ ಆದರು. ಮದುವೆ ಆದ ಏಳೇ ತಿಂಗಳಲ್ಲಿ ಮುಕೇಶ್ ಆತ್ಮಹತ್ಯೆ ಮಾಡಿಕೊಂಡರು.

‘ಮಹಿಳೆಯನ್ನು ಏಕೆ ಮದುವೆ ಆಗಬಾರದು’; ನೇರವಾಗಿ ಕೇಳಿದ್ದ ನಟಿ ರೇಖಾ
ರೇಖಾ
ರಾಜೇಶ್ ದುಗ್ಗುಮನೆ
|

Updated on: Jul 24, 2023 | 10:51 AM

Share

ನಟಿ ರೇಖಾ (Rekha) ಬಗ್ಗೆ ಇತ್ತೀಚೆಗೆ ಸುಳ್ಳು ಸುದ್ದಿ ಒಂದು ಹಬ್ಬಿತ್ತು. ತಮ್ಮ ಲೇಡಿ ಮ್ಯಾನೇಜರ್ ಫರ್ಜಾನಾ ಜೊತೆ ರೇಖಾ ಲಿವ್​-ಇನ್ ರಿಲೇಶನ್​ಶಿಪ್​ನಲ್ಲಿದ್ದರು ಎಂದು ಅವರ ಬಯೋಗ್ರಫಿಯಲ್ಲಿ ಬರೆದಿರುವುದಾಗಿ ವರದಿ ಆಗಿತ್ತು. ಆದರೆ, ಈ ವರದಿ ಸುಳ್ಳು ಎಂಬುದು ಬಳಿಕ ತಿಳಿದು ಬಂದಿತ್ತು. ಅಚ್ಚರಿಯ ವಿಚಾರ ಎಂದರೆ ನಟಿ ರೇಖಾ ಅವರು ‘ನಾನು ಮಹಿಳೆಯನ್ನು ಏಕೆ ಮದುವೆ ಆಗಬಾರದು’ ಎಂದು ಸಂದರ್ಶನ ಒಂದರಲ್ಲಿ ನೇರವಾಗಿ ಕೇಳಿದ್ದರು. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ರೇಖಾ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ರಹಸ್ಯಗಳಿವೆ. ಇದರ ಬಗ್ಗೆ ಅನೇಕ ರೀತಿಯ ಚರ್ಚೆಗಳು ನಡೆದಿವೆ. ಬಾಲಿವುಡ್ ಸ್ಟಾರ್ ನಟ ಅಮಿತಾಭ್ ಬಚ್ಚನ್ ಜೊತೆ ಅವರು ಮದುವೆ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಹಾಗಾಗಿಲ್ಲ. ದೆಹಲಿ ಮೂಲದ ಉದ್ಯಮಿ ಮುಕೇಶ್ ಅಗರವಾಲ್ ಜೊತೆ 1990ರ ಮಾರ್ಚ್ ತಿಂಗಳಲ್ಲಿ ರೇಖಾ ಮದುವೆ ಆದರು. ಮದುವೆ ಆದ ಏಳೇ ತಿಂಗಳಲ್ಲಿ ಮುಕೇಶ್ ಆತ್ಮಹತ್ಯೆ ಮಾಡಿಕೊಂಡರು. ಆ ಬಳಿಕೆ ರೇಖಾ ಮತ್ತೊಂದು ಮದುವೆ ಆಗಿಲ್ಲ.

ಎರಡನೇ ಮದುವೆ ಬಗ್ಗೆ ಸಂದರ್ಶನ ಒಂದರಲ್ಲಿ ರೇಖಾ ಮಾತನಾಡಿದ್ದರು. ಅದು 2004ನೇ ಇಸ್ವಿ. ಅವರು ಸಿಮಿ ಗರೇವಾಲ್ ಅವರ ಶೋನಲ್ಲಿ ಭಾಗಿ ಆಗಿದ್ದರು. ಮದುವೆ ಬಗ್ಗೆ ಅವರಿಗೆ ಪ್ರಶ್ನೆ ಮಾಡಲಾಗಿತ್ತು. ‘ಪುರುಷನ ಜೊತೆ ಮತ್ತೆ ಮದುವೆಯೇ’ ಎಂದು ರೇಖಾ ಮರು ಪ್ರಶ್ನೆ ಮಾಡಿದ್ದರು. ‘ಮಹಿಳೆಯ ಜೊತೆಯಂತೂ ಮದುವೆಯಾಗಲು ಸಾಧ್ಯವಿಲ್ಲವಲ್ಲ’ ಎಂದು ಸಿಮಿ ಉತ್ತರಿಸಿದ್ದರು. ಇದಕ್ಕೆ ರೇಖಾ ‘ಯಾಕಾಗಬಾರದು’ ಎಂದು ಕೇಳಿದ್ದರು.

ಇದನ್ನೂ ಓದಿ: ಲೇಡಿ ಸೆಕ್ರೇಟರಿ ಜೊತೆ ಸಂಬಂಧ ಇಟ್ಟುಕೊಂಡಿದ್ದ ನಟಿ ರೇಖಾ? ಬಯೋಗ್ರಫಿಯಲ್ಲಿ ಹೊರಬಿತ್ತು ಶಾಕಿಂಗ್ ವಿಚಾರ

‘ಮನಸ್ಸಿನ ಪ್ರಕಾರ ನನ್ನ ಜೊತೆ, ನನ್ನ ವೃತ್ತಿಯ ಜೊತೆ, ಪ್ರೀತಿ ಪಾತ್ರರರ ಜೊತೆ ಮದುವೆ ಆಗಿದ್ದೇನೆ. ನಾನು ಸಿನಿಕತೆ ಇರುವ ವ್ಯಕ್ತಿ ಅಲ್ಲ’ ಎಂದು ರೇಖಾ ಹೇಳಿದ್ದರು.  ವಿನೋದ್ ಮೆಹ್ರಾ ಜೊತೆ ರೇಖಾ ಮದುವೆ ಆಗಿದ್ದಾರೆ ಎನ್ನುವ ಮಾತಿದೆ. ಆದರೆ, ಇದನ್ನು ರೇಖಾ ಅಲ್ಲಗಳೆದಿದ್ದರು. ‘ವಿನೋದ್ ಮೆಹ್ರಾ ಅವರು ನನ್ನ ಹಿತೈಷಿ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ