AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ರೂಪಾಯಿ ಕಳೆದುಕೊಂಡ ಖ್ಯಾತ ಹೀರೋಯಿನ್​; ‘ಧೂಮ್​’ ನಟಿಗೆ ಮಹಾ ಮೋಸ   

ಅತಿ ಆಸೆಗೆ ಬಿದ್ದ ರಿಮಿ ಅವರು ಕಣ್ಮುಚ್ಚಿಕೊಂಡು 4.4 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಆ ಬಳಿಕ ಆತ ನಾಪತ್ತೆ ಆಗಿದ್ದಾನೆ. ಇದರಿಂದ ಆತಂಕಗೊಂಡ ಅವರು ದೂರು ದಾಖಲು ಮಾಡಿದ್ದಾರೆ.

4 ಕೋಟಿ ರೂಪಾಯಿ ಕಳೆದುಕೊಂಡ ಖ್ಯಾತ ಹೀರೋಯಿನ್​; ‘ಧೂಮ್​’ ನಟಿಗೆ ಮಹಾ ಮೋಸ    
ರಿಮಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 01, 2022 | 7:39 AM

ಇಂದು ತಂತ್ರಜ್ಞಾನ (Technology) ಮುಂದುವರಿದಿದೆ. ಅದೇ ರೀತಿ ಮೋಸ ಮಾಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಮೋಸ ಹೋಗಿ ಬಿಡುತ್ತೇವೆ. ಜನಸಾಮಾನ್ಯರ ಕಥೆ ಹಾಗಿರಲಿ, ಈಗ ಖ್ಯಾತ ನಟಿಯೇ (Heroine) ಈ ರೀತಿಯ ಮೋಸಕ್ಕೆ ಒಳಗಾಗಿದ್ದಾರೆ. ಒಂದು ಜಾಲದಲ್ಲಿ ಸಿಲುಕಿ ಒಂದಲ್ಲ, ಎರಡಲ್ಲ ಬರೋಬ್ಬರಿ 4 ಕೋಟಿ ರೂಪಾಯಿಯನ್ನು ಕಳೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಬ್ಯಾಂಕ್​ನಲ್ಲಿ ಹಣ ಇಟ್ಟರೆ ಸಾಮಾನ್ಯವಾಗಿ ಶೇ.3 ಬಡ್ಡಿ ಸಿಗುತ್ತದೆ. ಇನ್ನು, ಎಫ್​ಡಿ ಮಾಡಿದರೆ ಶೇ.7 ಬಡ್ಡಿ ಸಿಗುತ್ತದೆ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತೀರಿ ಎಂದಾದರೆ ಸಾಕಷ್ಟು ಅಧ್ಯಯನ ಬೇಕು. ಅನೇಕರು ಒಂದೇ ಬಾರಿಗೆ ಹೆಚ್ಚು ರಿಟರ್ನ್​ ಎಲ್ಲಿ ಬರುತ್ತದೆ ಎಂಬುದನ್ನು ನೋಡುತ್ತಿರುತ್ತಾರೆ. ಈಗ ಇದೇ ರೀತಿಯ ಆಸೆಗೆ ರಿಮಿ ಸೇನ್​ ಬಿದ್ದಿದ್ದಾರೆ. ಅವರಿಗೆ ರೋಣಕ್​ ಜಟಿನ್​ ಎಂಬಾತ ಪರಿಚಯ ಆಗಿದ್ದ. ನಂತರ ಆತನೇ ಮೋಸ ಮಾಡಿ ಹೋಗಿದ್ದಾನೆ.

ಎಲ್​ಇಡಿ ಬಲ್ಬ್​ಗಳ ವ್ಯವಹಾರ ಮಾಡುವುದಾಗಿ ಆತ ಹೇಳಿಕೊಂಡಿದ್ದ. ಅಲ್ಲದೆ, ಈ ಉದ್ಯಮದ ಮೇಲೆ ದೊಡ್ಡ ಮೊತ್ತದ ಹೂಡಿಕೆ ಮಾಡಿದರೆ ಶೇ.40 ಲಾಭ ತೆಗೆದುಕೊಡುವುದಾಗಿ ಹೇಳಿದ್ದ. ಈ ಆಸೆಗೆ ಬಿದ್ದ ರಿಮಿ ಅವರು ಕಣ್ಮುಚ್ಚಿಕೊಂಡು 4.4 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಆ ಬಳಿಕ ಆತ ನಾಪತ್ತೆ ಆಗಿದ್ದಾನೆ.

‘2019ರಲ್ಲಿ ಜಿಮ್​ನಲ್ಲಿ ರೋಣಕ್ ನನಗೆ ಪರಿಚಯ ಆಗಿದ್ದ. ನಂತರ ನಾವಿಬ್ಬರೂ ಗೆಳೆಯರಾದೆವು. 4.4 ಕೋಟಿ ರೂಪಾಯಿ ಹಣವನ್ನು ನನ್ನಿಂದ ತೆಗೆದುಕೊಂಡ. ಲಾಭದ ಜತೆಗೆ ಹಣ ಹಿಂದಿರುಗಿಸಲು ಒಂದು ಗಡುವು ನೀಡಿದ್ದ. ಆದರೆ, ಈಗ ಹಣವೂ ಇಲ್ಲ, ಆತ ನನ್ನ ಕರೆಯನ್ನೂ ಸ್ವೀಕರಿಸುತ್ತಿಲ್ಲ’ ಎಂದು ರಿಮಿ ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಚ್ಚರಿ ಎಂದರೆ ರೋಣಕ್ ಯಾವುದೇ ಉದ್ಯಮ ಹೊಂದಿರಲಿಲ್ಲ. ನಟಿಯಿಂದ ಹಣ ಕೀಳುವುದೊಂದೇ ಆತನ ಉದ್ದೇಶ ಆಗಿತ್ತು.

ರಿಮಿ ಅವರು 2000ನೇ ಇಸವಿಯಲ್ಲಿ ಬೆಂಗಾಲಿ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ  ಬಳಿಕ ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆದರು. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಹಿಂದಿ ಬಿಗ್​ ಬಾಸ್​ 9ರ ಸ್ಪರ್ಧಿಯಾಗಿ ಅವರು ದೊಡ್ಮನೆಗೆ ತೆರಳಿದ್ದರು. ‘ಧೂಮ್​’, ‘ಧೂಮ್​ 2’ ಸಿನಿಮಾದಲ್ಲಿ ಸ್ವೀಟಿ ದೀಕ್ಷಿತ್ ಆಗಿ ಅವರು ಖ್ಯಾತಿ ಗಳಿಸಿದ್ದರು.

ಇದನ್ನೂ ಓದಿ: ಏಪ್ರಿಲ್ 3ಕ್ಕಾಗಿ ಕಾದಿದ್ದಾರೆ ಕೃತಿ ಶೆಟ್ಟಿ; ಇದಕ್ಕಿದೆ ಮಹತ್ವದ ಕಾರಣ 

ಕಲೆಕ್ಷನ್​ ವಿಚಾರದಲ್ಲಿ ‘ಬಾಹುಬಲಿ’ ದಾಖಲೆಯನ್ನೇ ಮುರಿದ ‘ಆರ್​ಆರ್​ಆರ್​’; ರಾಜಮೌಳಿಗೆ ರಾಜಮೌಳಿಯೇ ಸಾಟಿ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್