AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rupaa Dutta: ಪುಸ್ತಕ ಮೇಳದಲ್ಲಿ ಪಿಕ್​ಪಾಕೆಟ್​ ಮಾಡಿ ಪೊಲೀಸರ ಅತಿಥಿಯಾದ ಖ್ಯಾತ ನಟಿ!

ಬೆಂಗಾಳಿ ಹಾಗೂ ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ರೂಪಾ ದತ್ತಾ, ಪಿಕ್​ಪಾಕೆಟ್ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಪುಸ್ತಕ ಮೇಳದಲ್ಲಿ ಪಿಕ್​ಪಾಕೆಟ್ ಮಾಡುವ ವೇಳೆ ನಟಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

Rupaa Dutta: ಪುಸ್ತಕ ಮೇಳದಲ್ಲಿ ಪಿಕ್​ಪಾಕೆಟ್​ ಮಾಡಿ ಪೊಲೀಸರ ಅತಿಥಿಯಾದ ಖ್ಯಾತ ನಟಿ!
ರೂಪಾ ದತ್ತ
TV9 Web
| Edited By: |

Updated on: Mar 13, 2022 | 5:44 PM

Share

ಬಾಲಿವುಡ್ (Bollywoo) ಹಾಗೂ ಬಂಗಾಳಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ರೂಪಾ ದತ್ತಾ (Rupaa Dutta) ಪಿಕ್​ಪಾಕೆಟ್ (PickPocket) ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ. ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಜೇಬುಗಳ್ಳತನ ಮಾಡಿದ ಆರೋಪದಲ್ಲಿ ರೂಪಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟಿಯ ಬ್ಯಾಗ್​ನಲ್ಲಿ ₹ 65,670 ಪತ್ತೆಯಾಗಿದೆ. ಆದರೆ ಈ ಹಣದ ಮೂಲದ ಬಗ್ಗೆ ರೂಪಾ ಯಾವುದೇ ಖಚಿತ ಮಾಹಿತಿ ನೀಡಿಲ್ಲ. ತನಿಖೆಯ ನಂತರ ಅವರು ಪುಸ್ತಕ ಮೇಳದಲ್ಲಿ ಪಿಕ್​ಪಾಕೆಟ್ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೇ ಈ ರೀತಿ ಮಾಡುತ್ತಿರುವುದು ಇದು ಮೊದಲಲ್ಲ ಎಂದೂ ನಟಿ ಒಪ್ಪಿಕೊಂಡಿದ್ದಾರೆಂದು ಮಾಹಿತಿ ನೀಡಲಾಗಿದೆ. ರೂಪಾ ದತ್ತಾ ಬ್ಯಾಗ್​ನಲ್ಲಿ ಡೈರಿಯೊಂದು ಪತ್ತೆಯಾಗಿದ್ದು, ಕಳ್ಳತನ ಮಾಡಿದ ಹಣದ ಲೆಕ್ಕವಿಡುವ ಪುಸ್ತಕವದು ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಆ ಡೈರಿಯಲ್ಲಿ ಕೋಲ್ಕತ್ತಾದ ಇನ್ನೂ ಹಲವು ಜನನಿಬಿಡ ಪ್ರದೇಶಗಳ ಹೆಸರಿದ್ದವು. ಇವುಗಳು ರೂಪಾರ ಸಾಮಾನ್ಯ ಗುರಿಗಳಾಗಿದ್ದವು ಎಂದೂ ಹೇಳಲಾಗಿದೆ.

ಶನಿವಾರದಂದು ಮೇಳದಲ್ಲಿ ರೂಪಾ ಅವರ ಚಲನವಲನ ಪೊಲೀಸರಿಗೆ ಅನುಮಾನ ಹುಟ್ಟುಹಾಕಿತ್ತು. ಕಾರಣ, ಅವರು ಖಾಲಿ ಪರ್ಸ್​ಗಳನ್ನು ಕಸದ ತೊಟ್ಟಿಗೆ ಎಸೆಯುತ್ತಿದ್ದರು. ಕೊನೆಗೆ ರೂಪಾರನ್ನು ವಶಪಡಿಸಿ ತನಿಖೆ ನಡೆಸಿದಾಗ, ನಟಿಯ ಬ್ಯಾಗ್​ನಲ್ಲಿ ಹಲವು ಪರ್ಸ್​ಗಳು ಪತ್ತೆಯಾಗಿವೆ. ಇದರ ನಂತರ ರೂಪಾರನ್ನು ಬಂಧಿಸಲಾಗಿದೆ.

ಬಿಧಾನನಗರ ಉತ್ತರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜಯನ್ಯಾನಾಥ್ ಸಹಾ ನೀಡಿದ ದೂರಿನ ಮೇರೆಗೆ ನಟಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379/411 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರಲ್ಲಿರುವಂತೆ, ‘12.03.2022 ರಂದು 17.15 ಗಂಟೆಗೆ ಕರ್ತವ್ಯವನ್ನು ನಿರ್ವಹಿಸುತ್ತಾ ಎಸ್‌ಐ ಕೋಲ್ಕತ್ತಾ ಪುಸ್ತಕ ಮೇಳಕ್ಕೆ ಹೋಗಿದ್ದರು. ಈ ವೇಳೆ ಪಿಕ್​ಪಾಕೆಟ್ ಮಾಡುತ್ತಿದ್ದ ಮೇಲೆ ಹೇಳಿದ ಮಹಿಳೆಯನ್ನು ನೋಡಿ, ಬಂಧಿಸಲಾಗಿದೆ. ತನಿಖೆಯ ನಂತರ ಒಟ್ಟು 65,760 ರೂ ಮೊತ್ತದ ಹಣವಿರುವ ಪರ್ಸ್‌ ಆಕೆಯ ಬಳಿ ಪತ್ತೆಯಾಗಿವೆ. ಹಲವು ಪರ್ಸ್​​ಗಳನ್ನು ಹೊಂದಿದ್ದಕ್ಕೆ ಕಾರಣವನ್ನು ನೀಡಲು ಆಕೆ ವಿಫಲವಾಗಿದ್ದಾಳೆ’ ಎಂದು ಪೊಲೀಸರು ಹೇಳಿದ್ದಾರೆ.

ನಟಿಯನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ. ಪ್ರಸ್ತುತ ರೂಪಾ ದತ್ತಾಗೆ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡ ಬ್ಯಾಗ್ ತನ್ನದಲ್ಲ ಎಂದಿರುವ ನಟಿ, ಅದು ಡಸ್ಟ್​ಬಿನ್​ನಿಂದ ಎತ್ತಿಕೊಂಡಿರುವ ಚೀಲ ಎಂದು ಹೇಳಿದ್ಧಾರೆ.

ರೂಪಾ ದತ್ತಾ ಬಂಗಾಳಿ ಚಲನಚಿತ್ರಗಳಲ್ಲಿ ಹಾಗೂ ಬಾಲಿವುಡ್​ನಲ್ಲಿ ನಟಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ, ಅವರು ಪಶ್ಚಿಮ ಬಂಗಾಳದ ಕರ್ಣಿ ಸೇನೆಯ ರಾಜ್ಯಾಧ್ಯಕ್ಷೆ ಎಂದು ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಅನುರಾಗ್ ಕಶ್ಯಪ್ ತಮಗೆ ಅನುಚಿತ ಸಂದೇಶ ಕಳುಹಿಸುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದರು. ಕೆಲ ಕಾಲದ ನಂತರ ಅದು ನಿರ್ದೇಶಕ ಅನುರಾಗ್ ಕಶ್ಯಪ್ ಅಲ್ಲ, ಬೇರೆ ಅನುರಾಗ್ ಎನ್ನುವುದು ತಿಳಿದುಬಂದಿತ್ತು.

ಇದನ್ನೂ ಓದಿ:

630ರಿಂದ 2,000ಕ್ಕೇರಿದ ಸ್ಕ್ರೀನ್​ಗಳ ಸಂಖ್ಯೆ! ‘ದಿ ಕಾಶ್ಮೀರ್ ಫೈಲ್ಸ್’ ಎರಡನೇ ದಿನದ ಬಾಕ್ಸಾಫೀಸ್​ ಕಲೆಕ್ಷನ್ ಎಷ್ಟು ಗೊತ್ತಾ?

Bairagee: ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ; ‘ಜೇಮ್ಸ್’ ಜತೆಗೆ ಪ್ರದರ್ಶನವಾಗಲಿದೆ ‘ಬೈರಾಗಿ’ ಟೀಸರ್!

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್