AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಿನಿ ಪಾಂಡೆ ಮೂಲೆಗುಂಪಾದ ಕಥೆ; ಸಿಗುತ್ತಿಲ್ಲ ದೊಡ್ಡ ಯಶಸ್ಸು

ಆಮಿರ್ ಖಾನ್ ಅವರ ಮಗ ಜುನೈದ್ ಖಾನ್ ನಟಿಸುತ್ತಿರುವ ಚಿತ್ರದಲ್ಲಿ ಶಾಲಿನಿ ಪಾಂಡೆ ನಟಿಸಿತ್ತಿದ್ದಾರೆ. ಇದರ ಜೊತೆಗೆ ಇನ್ನೂ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಆದರೆ, ಸ್ಟಾರ್ ಹೀರೋಗಳ ಜೊತೆ ಬಣ್ಣ ಹಚ್ಚಲು ಅವರಿಗೆ ಸಾಧ್ಯವಾಗುತ್ತಿಲ್ಲ. ಯಶಸ್ಸು ಕೂಡ ಸಿಗುತ್ತಿಲ್ಲ.

ಶಾಲಿನಿ ಪಾಂಡೆ ಮೂಲೆಗುಂಪಾದ ಕಥೆ; ಸಿಗುತ್ತಿಲ್ಲ ದೊಡ್ಡ ಯಶಸ್ಸು
ಶಾಲಿನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 23, 2024 | 7:45 AM

Share

ಚಿತ್ರರಂಗದಲ್ಲಿ ಫೇಮಸ್ ಆಗಿ ನಂತರ ಮೂಲೆಗುಂಪಾದ ಅನೇಕರು ಇದ್ದಾರೆ. ಈ ಸಾಲಿನಲ್ಲಿ ಸಂದೀಪ್​ ರೆಡ್ಡಿ ವಂಗ ನಿರ್ದೇಶನದ ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ನಟಿಸಿದ ಶಾಲಿನಿ ಪಾಂಡೆ ಕೂಡ ಇದ್ದಾರೆ. ಮೊದಲ ಚಿತ್ರದಲ್ಲೇ ಗಮನ ಸೆಳೆದ ಅವರು ನಂತರದಲ್ಲಿ ಮಿಂಚಲು ಸಾಧ್ಯವಾಗಿಲ್ಲ ಎನ್ನುವುದು ಬೇಸರದ ವಿಚಾರ. ಅನೇಕರು ಅವರಿಗೆ ಆಫರ್ ಕೊಟ್ಟಿದ್ದಾರೆ. ಆದರೆ, ಅವರ ಬಳಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತಿಲ್ಲವಂತೆ.

ಇಂದು (ಸೆಪ್ಟೆಂಬರ್ 23) ಶಾಲಿನಿ ಪಾಂಡೆಗೆ ಬರ್ತ್​ಡೇ. ಅವರಿಗೆ ಇರೋ ಕೆಲವೇ ಕೆಲವು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಮಾಡಿದ ಹಲವು ಸಿನಿಮಾಗಳು ಏಕೆ ಯಶಸ್ಸು ಕಂಡಿಲ್ಲ ಎಂಬ ವಿಚಾರವನ್ನು ಶಾಲಿನಿ ಪಾಂಡೆ ಅವರು ಈ ಮೊದಲು ಹೇಳಿಕೊಂಡಿದ್ದರು.

ಆಮಿರ್ ಖಾನ್ ಅವರ ಮಗ ಜುನೈದ್ ಖಾನ್ ನಟಿಸುತ್ತಿರುವ ‘ಮಹರಾಜ್’ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸಿತ್ತಿದ್ದಾರೆ. ಇದರ ಜೊತೆಗೆ ಇನ್ನೂ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಆದರೆ, ಸ್ಟಾರ್ ಹೀರೋಗಳ ಜೊತೆ ಬಣ್ಣ ಹಚ್ಚಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರಿಗೆ ಒಂದು ವಿಚಾರ ಬೇಸರ ಮೂಡಿಸಿತ್ತು.

‘ನನಗೆ ಬಾಡಿ ಶೇಮ್ ಮಾಡಲಾಯಿತು. ನಾನು ಸ್ಪೋರ್ಟ್ಸ್​ನಲ್ಲಿ ಹೆಚ್ಚು ಸಮಯ ಕಳೆಯುತ್ತೇನೆ. ಆದರೂ ಜನರು ಬಾಡಿಶೇಮ್ ನಿಲ್ಲಿಸಿಲ್ಲ’ ಎಂದು ಅವರು ಹೇಳಿದ್ದರು. ಇದರಿಂದ ಅವರು ಬೋಲ್ಡ್ ಆಫರ್​ಗಳನ್ನು ಒಪ್ಪಿಕೊಳ್ಳಲಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ. ಅರ್ಜುನ್ ರಡ್ಡಿ ಸಿನಿಮಾದಲ್ಲಿ ಶಾಲಿನಿ ಪಾಂಡೆ ಸಾಕಷ್ಟು ಬೋಲ್ಡ್ ಪಾತ್ರವನ್ನು ಮಾಡಿದ್ದರು. ಸಾಕಷ್ಟು ಹಾಟ್ ಆಗಿ ಅವರು ಕಾಣಿಸಿಕೊಂಡಿದ್ದರು. ಅವರ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಮನೆಯಿಂದ ಓಡಿ ಹೋಗಿದ್ರು

ಶಾಲಿನಿ ಪಾಂಡೆ ನಟನೆಗಾಗಿ ಅವರು ಮನೆಯಿಂದ ಓಡಿ ಹೋಗಿದ್ದರು. ‘ನನ್ನ ತಂದೆಗೆ ಇಂಜಿನಿಯರಿಂಗ್ ಮಾಡಬೇಕು ಎನ್ನುವ ಆಸೆ ಇತ್ತು. ನಾನು ಅದನ್ನು ಪ್ರಯತ್ನಿಸಿದೆ. ಆದರೆ, ಅದನ್ನು ಮಾಡಲು ಸಾಧ್ಯವಾಗಿಲ್ಲ. ನಟನೆ ಪ್ರಯತ್ನಿಸಲು ನನ್ನ ತಂದೆ ಅವಕಾಶ ನೀಡಿಲ್ಲ. ನಾಲ್ಕು ವರ್ಷ ಇದಕ್ಕಾಗಿ ಅವರ ಬಳಿ ಕೇಳಿಕೊಂಡೆ. ಆ ಬಳಿಕ ನಾನು ಮನೆಯಿಂದ ಓಡಿ ಹೋದೆ’ ಎಂದು ಶಾಲಿನಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ಇನ್ನಷ್ಟು ಗ್ಲಾಮರಸ್​ ಆಗಿ ಕಾಣಿಸಿಕೊಂಡ ‘ಅರ್ಜುನ್​ ರೆಡ್ಡಿ’ ನಟಿ ಶಾಲಿನಿ ಪಾಂಡೆ

ಅವರ ಇಬ್ಬರು ಗೆಳತಿಯರು ಮುಂಬೈನಲ್ಲಿ ಇದ್ದರು. ಅವರ ಜೊತೆ ಉಳಿದುಕೊಳ್ಳಲು ಶಾಲಿನಿ ಅಲ್ಲಿಗೆ ಹೋದರು. ಆದರೆ, ಅಲ್ಲಿ ಹೆಚ್ಚು ದಿನ ಇರೋಕೆ ಸಾಧ್ಯವಾಗಿಲ್ಲ. ಹೀಗಾಗಿ ಅವರು ಬಾಯ್ಸ್​ ಜೊತೆ ಇರಬೇಕಾಯಿತು. ಆ ಬಳಿಕ ಇವರು ಫ್ರೆಂಡ್ಸ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್