AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj Kundra: ಶಿಲ್ಪಾ ಶೆಟ್ಟಿ ವರ್ತನೆಗೆ ತದ್ವಿರುದ್ಧವಾಗಿ ನಡೆದುಕೊಂಡ ರಾಜ್​ ಕುಂದ್ರಾ; ಅನುಮಾನ ಹುಟ್ಟಿಸಿದೆ ಈ ನಡೆ

Shilpa Shetty: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಜಾಮೀನು ಪಡೆದು ಹೊರಬಂದ ಬಳಿಕ ಒಂದು ರೀತಿಯ ಅಜ್ಞಾತವಾಸದಲ್ಲಿ ಇದ್ದಾರೆ. ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಸೋಶಿಯಲ್​ ಮೀಡಿಯಾದಿಂದಲೂ ಕಣ್ಮರೆ ಆಗಿರುವುದು ಅನೇಕರಲ್ಲಿ ಸಂಶಯ ಹುಟ್ಟುಹಾಕಿದೆ.

Raj Kundra: ಶಿಲ್ಪಾ ಶೆಟ್ಟಿ ವರ್ತನೆಗೆ ತದ್ವಿರುದ್ಧವಾಗಿ ನಡೆದುಕೊಂಡ ರಾಜ್​ ಕುಂದ್ರಾ; ಅನುಮಾನ ಹುಟ್ಟಿಸಿದೆ ಈ ನಡೆ
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Nov 02, 2021 | 12:43 PM

Share

ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಅವರ ಬದುಕು ಹಲವು ತಿರುವುಗಳನ್ನು ಪಡೆದುಕೊಂಡಿದೆ. ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ ಬಳಿಕ ಅವರ ಇಡೀ ಕುಟುಂಬ ಮುಜುಗರ ಅನುಭವಿಸಬೇಕಾಯ್ತು. ಆದರೂ ಆ ಎಲ್ಲ ಕಳಂಕಗಳ ನಡುವೆಯೂ ಹಳೆಯ ಚಾರ್ಮ್​ಗೆ ಮರಳಿದ್ದಾರೆ ಶಿಲ್ಪಾ ಶೆಟ್ಟಿ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಿಕ್ಕಾಪಟ್ಟೆ ಆ್ಯಕ್ಟೀವ್​ ಆಗಿದ್ದಾರೆ. ಆದರೆ ಅವರಿಗೆ ತದ್ವಿರುದ್ಧವಾದಂತಹ ನಿರ್ಧಾರವನ್ನು ರಾಜ್​ ಕುಂದ್ರಾ ತೆಗೆದುಕೊಂಡಿದ್ದಾರೆ. ಅಂದರೆ, ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳನ್ನು ಅವರು ಡಿಲೀಟ್​ ಮಾಡಿದ್ದಾರೆ! ಇದು ಹಲವು ಅನುಮಾನಗಳಿಗೆ ಕಾರಣ ಆಗಿದೆ.

ಜುಲೈ 19ರಂದು ರಾಜ್​ ಕುಂದ್ರ ಅರೆಸ್ಟ್​ ಆಗಿದ್ದರು. ಅದಕ್ಕೂ ಮೊದಲು ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ಆಗಿದ್ದರು. ಬಗೆಬಗೆಯ ಫೋಟೋ ಮತ್ತು ವಿಡಿಯೋಗಳನ್ನು ಅವರು ಶೇರ್​ ಮಾಡಿಕೊಳ್ಳುತ್ತಿದ್ದರು. ಆದರೆ ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಕೇಳಿಬಂದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ರಾಜ್​ ಕುಂದ್ರಾ ಬಹುತೇಕ ಕಣ್ಮರೆ ಆಗಿಬಿಟ್ಟರು. ಜಾಮೀನು ಪಡೆದು ಹೊರಬಂದು ಹಲವು ದಿನಗಳು ಕಳೆದರೂ ಅವರ ಖಾತೆಯಲ್ಲಿ ಯಾವುದೇ ಹೊಸ ಪೋಸ್ಟ್​ ಕಾಣಿಸಿಕೊಂಡಿಲ್ಲ.

ಸೋಶಿಯಲ್​ ಮೀಡಿಯಾದಲ್ಲಿ ಶೇ.100ರಷ್ಟು ಸೈಲೆಂಟ್​ ಆಗಿದ್ದ ರಾಜ್​ ಕುಂದ್ರಾ ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ಅವರು ಡಿಲೀಟ್​ ಮಾಡಿದ್ದಾರೆ. ಈ ರೀತಿ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ಅವರು ಯಾವುದೇ ಸೂಚನೆಯನ್ನೂ ನೀಡಿಲ್ಲ. ಗಂಡನ ಈ ವರ್ತನೆ ಬಗ್ಗೆ ಶಿಲ್ಪಾ ಶೆಟ್ಟಿ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಜಾಮೀನು ಪಡೆದು ಹೊರಬಂದ ಬಳಿಕ ರಾಜ್​ ಕುಂದ್ರಾ ಒಂದು ರೀತಿಯಲ್ಲಿ ಅಜ್ಞಾತವಾಸ ಮಾಡುತ್ತಿದ್ದಾರೆ. ಅವರು ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಸೋಶಿಯಲ್​ ಮೀಡಿಯಾದಿಂದಲೂ ಕಣ್ಮರೆ ಆಗಿರುವುದು ಅನೇಕರಲ್ಲಿ ಸಂಶಯ ಹುಟ್ಟುಹಾಕಿದೆ. ಅವರ ಮುಂದಿನ ನಡೆ ಏನಿರಬಹುದು ಎಂಬ ಪ್ರಶ್ನೆ ಮೂಡಿದೆ.

ನಟಿಯರನ್ನು, ಮಾಡೆಲ್​ಗಳನ್ನು, ಅಮಾಯಕ ಯುವತಿಯರನ್ನು ಬಳಸಿಕೊಂಡು ಅಶ್ಲೀಲ ಸಿನಿಮಾ ನಿರ್ಮಾಣ ಮಾಡುತ್ತಿದ್ದರು ಎಂಬ ಆರೋಪ ರಾಜ್​ ಕುಂದ್ರಾ ಅವರ ಮೇಲಿದೆ. ನಟಿ ಶೆರ್ಲಿನ್​ ಚೋಪ್ರಾ ಅವರು ರಾಜ್​ ಕುಂದ್ರಾ ಮೇಲೆ ಅನೇಕ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಇಬ್ಬರ ನಡುವೆ ಕಾನೂನು ಸಮರ ನಡೆಯುತ್ತಿದೆ.

ಇದನ್ನೂ ಓದಿ:

Shilpa Shetty: ಪತಿ ರಾಜ್​ ಕುಂದ್ರಾ ಚಿಂತೆ ಮರೆತು ಬಿಂದಾಸ್​ ಆಗಿ ಕುಣಿದು ಕುಪ್ಪಳಿಸಿದ ನಟಿ ಶಿಲ್ಪಾ ಶೆಟ್ಟಿ; ವಿಡಿಯೋ ವೈರಲ್​

ಶಿಲ್ಪಾ ಶೆಟ್ಟಿ ಮನೆಯಲ್ಲಿ ನವರಾತ್ರಿ ವೈಭವ; ಮಕ್ಕಳಿಗೆ ಕಲಿಸುತ್ತಿರುವ ಪಾಠ ಎಂಥದ್ದು?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?