AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ‘ಫ್ಲವರ್​ ಅಂದುಕೊಂಡ್ಯಾ? ಅಲ್ಲ.. ಫೈರ್’​; ಬಿಕಿನಿಗೆ ಹೂವು ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​

Urfi Javed Photo: ಬಟ್ಟೆಗಳ ವಿಚಾರದಲ್ಲಿ ಉರ್ಫಿ ಜಾವೇದ್​ ಅವರಿಗೆ ಏನೋ ಒಂಥರಾ ಕ್ರೇಜ್​. ಚಿತ್ರ-ವಿಚಿತ್ರ ಪ್ರಯೋಗಗಳನ್ನು ಅವರು ಮಾಡುತ್ತಾರೆ.

Urfi Javed: ‘ಫ್ಲವರ್​ ಅಂದುಕೊಂಡ್ಯಾ? ಅಲ್ಲ.. ಫೈರ್’​; ಬಿಕಿನಿಗೆ ಹೂವು ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​
ಉರ್ಫಿ ಜಾವೇದ್
TV9 Web
| Edited By: |

Updated on: Jun 18, 2022 | 11:35 AM

Share

ನಟಿ ಉರ್ಫಿ ಜಾವೇದ್​ (Urfi Javed) ಅವರು ಮಾಡದ ಅವತಾರಗಳೇ ಇಲ್ಲ. ಕಾಸ್ಟ್ಯೂಮ್​ ವಿಚಾರದಲ್ಲಿ ಅವರು ಪ್ರತಿ ದಿನವೂ ಸುದ್ದಿ ಆಗುತ್ತಾರೆ. ಬಗೆಬಗೆಯ ಬಟ್ಟೆ ಧರಿಸಿಕೊಂಡು ಬಂದು ಪಾಪರಾಜಿ ಕ್ಯಾಮೆರಾಗಳ ಮುಂದೆ ಪೋಸ್​ ನೀಡುವುದೇ ಅವರ ಕಸುಬು ಆದಂತಿದೆ. ಸೋಶಿಯಲ್​ ಮೀಡಿಯಾದಲ್ಲಂತೂ ಉರ್ಫಿ ಜಾವೇದ್​ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗುತ್ತವೆ. ನಟನೆಗಿಂತಲೂ ಹೆಚ್ಚಾಗಿ ಅವರು ಈ ರೀತಿಯ ಬಟ್ಟೆ ಧರಿಸಿಯೇ ಫೇಮಸ್​ ಆಗಿದ್ದಾರೆ. ಇನ್ನು ಅವರಿಗೆ ಟ್ರೋಲ್​ ಕಾಟವೂ ತಪ್ಪಿದ್ದಲ್ಲ. ಉರ್ಫಿ ಜಾವೇದ್​ ಅವರ ಫೋಟೋ (Urfi Javed Photo) ಮತ್ತು ವಿಡಿಯೋಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡ್ತಾರೆ. ಕೆಲವರು ಹಿಗ್ಗಾಮುಗ್ಗಾ ಟ್ರೋಲ್​ ಮಾಡ್ತಾರೆ. ಆದರೆ ಅದಕ್ಕೆಲ್ಲ ಈ ನಟಿ ತಲೆ ಕೆಡಿಸಿಕೊಂಡಿಲ್ಲ. ದಿನದಿನಕ್ಕೂ ಅವರ ಮಾದಕತೆ ಹೆಚ್ಚುತ್ತಲೇ ಇದೆ. ಈಗ ಅವರು ಬಿಕಿನಿಗೆ (Bikini) ಹೂವು ಅಂಟಿಸಿಕೊಂಡು ಬಂದಿದ್ದಾರೆ. ಆ ಮೂಲಕ ಪಡ್ಡೆಗಳ ನಿದ್ದೆ ಕದಿಯಲು ಪ್ರಯತ್ನಿಸಿದ್ದಾರೆ.

‘ಪುಷ್ಪ ಅಂದ್ರೆ ಫ್ಲವರ್​ ಅಂದುಕೊಂಡ್ಯಾ? ಫೈರ್​..!’ ಎಂದು ಅಲ್ಲು ಅರ್ಜುನ್​ ಡೈಲಾಗ್​ ಹೊಡೆದಿದ್ದನ್ನು ನೆಟ್ಟಿಗರು ಈಗ ನೆನಪಿಸಿಕೊಳ್ಳುತ್ತಿದ್ದಾರೆ. ಯಾಕೆಂದರೆ ಉರ್ಫಿ ಜಾವೇದ್​ ಹಾಗೆಯೇ ಡ್ರೆಸ್​ ಮಾಡಿಕೊಂಡು ಬಂದಿದ್ದಾರೆ. ಬಿಕಿನಿಗೆ ಫ್ಲವರ್​ ಅಂಟಿಸಿಕೊಂಡು ಬಂದಿದ್ದಾರೆ. ಆದರೆ ಅವರ ಮಾದಕತೆ ಫೈರ್ ರೀತಿ ಇದೆ ಎನ್ನುತ್ತಿದ್ದಾರೆ ಅಭಿಮಾನಿಗಳು.

ಇದನ್ನೂ ಓದಿ
Image
ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ; ಪ್ರತಿ ದಿನ ರೇಪ್​ ಬೆದರಿಕೆ: ಶಾಕಿಂಗ್​ ವಿಚಾರ ತೆರೆದಿಟ್ಟ ನಟಿ
Image
ಪ್ಯಾಂಟ್​ ಮೇಲೆ ಪ್ಯಾಂಟ್​ ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​; ಇಲ್ಲಿದೆ ವಿಚಿತ್ರ ಅವತಾರದ ವಿಡಿಯೋ
Image
‘ನಂಗೆ ಮರ್ಯಾದೆ ಕೊಡಲ್ಲ, ಸೆಲೆಬ್ರಿಟಿಗಳೇ ಕೆಟ್ಟ ಕಮೆಂಟ್​​ ಮಾಡ್ತಾರೆ’: ಎಲ್ಲವನ್ನೂ ಹೇಳಿಕೊಂಡ ಉರ್ಫಿ ಜಾವೇದ್​
Image
‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

ಇದನ್ನೂ ಓದಿ: ಭಗವದ್ಗೀತೆ ಹಿಡಿದು ಬಂದ ಮುಸ್ಲಿಂ ನಟಿ ಉರ್ಫಿ; ‘​ನಾನು ಜಾವೇದ್​ ಅಖ್ತರ್​ ಮೊಮ್ಮಗಳಲ್ಲ’ ಎಂದಿದ್ದೇಕೆ?

ಬಟ್ಟೆ ಮಾತ್ರವಲ್ಲದೇ ಬೇರೆ ವಿಚಾರಗಳಿಂದಲೂ ಊರ್ಫಿ ಜಾವೇದ್​ ಅವರು ಆಗಾಗ ಸುದ್ದಿ ಆಗುತ್ತಾರೆ. ‘ಬಿಗ್​ ಬಾಸ್​ ಒಟಿಟಿ’ ಶೋನಲ್ಲಿ ಅವರು ಭಾಗವಹಿಸಿದ್ದರು. ಕಿರುತೆರೆಯಲ್ಲಿ ತಮಗೆ ಸೂಕ್ತ ಮನ್ನಣೆ ಸಿಕ್ಕಿಲ್ಲ ಎಂಬ ಬೇಸರ ಕೂಡ ಅವರಿಗೆ ಇದೆ. ಈ ಹಿಂದೆ ನೀಡಿದ ಸಂದರ್ಶನಗಳಲ್ಲಿ ಅವರು ಅದನ್ನು ನೇರವಾಗಿ ಹೇಳಿಕೊಂಡಿದ್ದರು. ಕಿರುತೆರೆಯ ಸೆಲೆಬ್ರಿಟಿಗಳಿಂದಲೇ ತಮಗೆ ಅವಮಾನ ಆಗಿದೆ ಎಂದು ಉರ್ಫಿ ಹೇಳಿದ್ದರು.

View this post on Instagram

A post shared by Uorfi (@urf7i)

‘ನನ್ನ ಫೋಟೋಗಳು ಅಪ್​ಲೋಡ್​ ಆದಾಗ ಅಥವಾ ವೈರಲ್​ ಆದಾಗ ಬ್ಲೂ ಟಿಕ್​ ಇರುವ ಕಿರುತೆರೆಯ ಸೆಲೆಬ್ರಿಟಿಗಳು ಕೆಟ್ಟದಾಗಿ ಕಮೆಂಟ್​ ಮಾಡುತ್ತಾರೆ. ಇವರಿಗೆಲ್ಲ ನಾನೇನು ಅನ್ಯಾಯ ಮಾಡಿದ್ದೇನೆ? ಯಾಕೆ ಈ ರೀತಿಯಾಗಿ ಕೆಟ್ಟ ಕಮೆಂಟ್​ ಮಾಡ್ತಾರೆ’ ಎಂದು ಉರ್ಫಿ ಜಾವೇದ್​ ಬೇಸರ ವ್ಯಕ್ತಪಡಿಸಿದ್ದರು. ಅದೇನೇ ಇರಲಿ, ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಫಾಲೋ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ 32 ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?