AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಮದ ಕಾಯಿಲೆ ಬಗ್ಗೆ ಹೇಳಿಕೊಂಡು ನಿರಾಳ ಆದ ನಟಿ ಯಾಮಿ ಗೌತಮ್​; ಅವರಿಗಿರುವ ಸಮಸ್ಯೆ ಏನು?

ನಟಿ ಯಾಮಿ ಗೌತಮ್​ ಅವರಿಗೆ ಚರ್ಮದ ಸಮಸ್ಯೆ ಕಾಡುತ್ತಿದೆ. ಆದರೆ ಅದನ್ನು ಒಪ್ಪಿಕೊಂಡು ಅವರು ಮುಂದೆ ಸಾಗುತ್ತಿದ್ದಾರೆ. ತಮ್ಮ ನ್ಯೂನತೆಯನ್ನು ಅವರು ಮುಚ್ಚಿಟ್ಟಿಲ್ಲ.

ಚರ್ಮದ ಕಾಯಿಲೆ ಬಗ್ಗೆ ಹೇಳಿಕೊಂಡು ನಿರಾಳ ಆದ ನಟಿ ಯಾಮಿ ಗೌತಮ್​; ಅವರಿಗಿರುವ ಸಮಸ್ಯೆ ಏನು?
ಯಾಮಿ ಗೌತಮ್
TV9 Web
| Edited By: |

Updated on: Dec 27, 2021 | 3:23 PM

Share

ಸಿನಿಮಾ ನಟಿಯರ ತ್ವಚೆ ಮಿರಮಿರನೆ ಮಿಂಚುತ್ತ ಇರುತ್ತದೆ. ಅದನ್ನು ಕಂಡು ಅಭಿಮಾನಿಗಳು ಫಿದಾ ಆಗುತ್ತಾರೆ. ಆದರೆ ಅಸಲಿಯತ್ತು ಹಾಗಿರುವುದಿಲ್ಲ. ಆ ರೀತಿ ಕಾಂತಿಯುತ ಚರ್ಮದ ಹಿಂದೆ ಬಗೆಬಗೆಯ ಮೇಕಪ್​ ಕೈವಾಡ ಇರುತ್ತದೆ. ಆದರೆ ಬಹುತೇಕ ನಟಿಯರು ಅದನ್ನು ಬಹಿರಂಗವಾಗಿ ಒಪ್ಪಿಕೊಳ್ಳುವುದಿಲ್ಲ. ಬಾಲಿವುಡ್​ ನಟಿ ಯಾಮಿ ಗೌತಮ್​ (Yami Gautam) ಅವರು ಈ ವಿಚಾರದಲ್ಲಿ ಭಿನ್ನ ನಿಲುವು ತಾಳಿದ್ದಾರೆ. ತಮಗೆ ಇರುವ ಚರ್ಮದ ಸಮಸ್ಯೆ (Skin Problem) ಬಗ್ಗೆ ಅವರು ಈಗಾಗಲೇ ಬಹಿರಂಗ ಪಡಿಸಿದ್ದಾರೆ. ಆ ಕುರಿತಂತೆ ಅವರು ಮಾಧ್ಯಮವೊಂದರ ಜೊತೆ ಮತ್ತೊಮ್ಮೆ ಮಾತನಾಡಿದ್ದಾರೆ. ಯಾಮಿ ಗೌತಮ್​ ಅವರಿಗೆ ಕೆರಟೋಸಿಸ್ ಪಿಲಾರಸ್​ (Keratosis-Pilaris) ಎಂಬ ಚರ್ಮದ ಸಮಸ್ಯೆ ಇದೆ. ಇದನ್ನು ಜಗತ್ತಿನ ಎದುರು ಬಹಿರಂಗಪಡಿಸಿದ ನಂತರ ಅವರು ನಿರಾಳ ಆಗಿದ್ದಾರೆ!

ಕೆರಟೋಸಿಸ್ ಪಿಲಾರಸ್​ ಸಮಸ್ಯೆ ಯಾಮಿ ಗೌತಮ್​ ಅವರನ್ನು ಬಹಳ ಸಮಯದಿಂದ ಕಾಡುತ್ತಿದೆ. ಇದೇನೂ ಗಂಭೀರ ಸಮಸ್ಯೆ ಅಲ್ಲ. ಆದರೆ ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್​ ಲಕ್ಷಣ. ಹದಿಹರೆಯಲ್ಲಿ ಇದ್ದಾಗಲೇ ಯಾಮಿ ಗೌತಮ್​ ಅವರಿಗೆ ಈ ಸಮಸ್ಯೆ ಕಾಣಿಸಿಕೊಂಡಿತು. ಅಂದಿನಿಂದ ಇದನ್ನು ಮುಚ್ಚಿಟ್ಟುಕೊಂಡೇ ಇದ್ದ ಅವರು ಅನೇಕ ಸವಾಲುಗಳನ್ನು ಎದುರಿಸಿದ್ದಾರೆ.

ತಮಗೆ ಇಂಥದ್ದೊಂದು ಸಮಸ್ಯೆ ಇದೆ ಎಂದು ಗೊತ್ತಾದಾಗಿನಿಂದ, ಅದನ್ನು ಒಪ್ಪಿಕೊಂಡು ಬಹಿರಂಗಪಡಿಸುವ ನಿರ್ಧಾರ ತೆಗೆದುಕೊಳ್ಳುವವರೆಗಿನ ಅವರ ಪಯಣ ತುಂಬ ಚಾಲೆಂಜಿಂಗ್​ ಆಗಿತ್ತು. ಒಮ್ಮೆ ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಸಮಸ್ಯೆಯನ್ನು ಜಗತ್ತಿನ ಮುಂದಿಟ್ಟ ಬಳಿಕ ಅವರಿಗೆ ಈ ವಿಚಾರದಲ್ಲಿ ನಿರಾಳ ಭಾವ ಆವರಿಸಿದೆ. ಈಗ ಅವರಿಗೆ ಜನರಿಂದ ಪಾಸಿಟಿವ್​ ಪ್ರತಿಕ್ರಿಯೆ ಸಿಕ್ಕಿದೆ. ಅದಕ್ಕಾಗಿ ಅವರು ಸಂತಸಗೊಂಡಿದ್ದಾರೆ.

‘ಸತ್ಯವನ್ನು ನಿಮ್ಮೆದುರು ಒಪ್ಪಿಕೊಳ್ಳಲು ಧೈರ್ಯ ಮಾಡಿದ್ದೇನೆ. ನಾನು ಹದಿಹರೆಯದಲ್ಲಿ ಇರುವಾಗಲೇ ಈ ಸಮಸ್ಯೆ ಇರುವುದು ಗೊತ್ತಾಯಿತು. ಇನ್ನೂ ಇದು ವಾಸಿ ಆಗಿಲ್ಲ. ತುಂಬ ವರ್ಷಗಳಿಂದ ಇದನ್ನು ನಿಭಾಯಿಸುತ್ತಿದ್ದೇನೆ. ಆದರೆ ಇಂದು ನನ್ನ ನ್ಯೂನತೆಯನ್ನು ಒಪ್ಪಿಕೊಂಡು, ಭಯ ಮತ್ತು ಅಭದ್ರತೆಯನ್ನು ತೊಲಗಿಸುವ ಧೈರ್ಯ ಮಾಡಿದ್ದೇನೆ’ ಎಂದು ಯಾಮಿ ಗೌತಮ್​ ಅವರು ಮೊದಲ ಬಾರಿಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ:

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

ಎಷ್ಟು ಕೋಟಿ ಕೊಟ್ಟರೂ ಈ ಮದುಮಗಳು ಧರಿಸಿದ ಸೀರೆಗೆ ಬೆಲೆ ಕಟ್ಟೋಕಾಗಲ್ಲ; ಏನಿದರ ವಿಶೇಷ?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು