ಅದಾ ಶರ್ಮಾ ಪಡೆದ ಶಿಕ್ಷಣ ತುಂಬಾನೇ ಕಡಿಮೆ; ಕೈ ಹಿಡಿದ ನಟನೆಯಿಂದ ಕೋಟಿ ಗಳಿಕೆ

‘ದಿ ಕೇರಳ ಸ್ಟೋರಿ’ ಸಿನಿಮಾ ಮೂಲಕ ಅದಾ ಶರ್ಮಾ ಅವರ ಖ್ಯಾತಿ ಹೆಚ್ಚಾಗಿದೆ. ಅವರ ಆಸ್ತಿ 10ರಿಂದ 12 ಕೋಟಿ ರೂಪಾಯಿ ಇದೆ. ಅವರು ಪಡೆದು ಶಿಕ್ಷಣ ಕಡಿಮೆ. ಈ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಅವರು ಪಡೆದ ಶಿಕ್ಷಣದ ಬಗ್ಗೆ ಈ ಸ್ಟೋರಿಯಲ್ಲಿ ಮಾಹಿತಿ ಇದೆ.

ಅದಾ ಶರ್ಮಾ ಪಡೆದ ಶಿಕ್ಷಣ ತುಂಬಾನೇ ಕಡಿಮೆ; ಕೈ ಹಿಡಿದ ನಟನೆಯಿಂದ ಕೋಟಿ ಗಳಿಕೆ
ಅದಾ ಶರ್ಮಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 22, 2024 | 8:24 AM

ನಟಿ ಅದಾ ಶರ್ಮಾ ಅನೇಕ ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ‘ದಿ ಕೇರಳ ಸ್ಟೋರಿ’ ಸಿನಿಮಾದಿಂದಾಗಿ ನಟಿಯ ಜನಪ್ರಿಯತೆ ಹೆಚ್ಚಾಗಿದೆ. ಅದಾ ಶರ್ಮಾ ತಮ್ಮ ಸಿನಿಮಾಗಳಿಂದ ಮಾತ್ರವಲ್ಲದೆ ಹಲವು ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಅದಾ ಕೆಲ ತಿಂಗಳ ಹಿಂದೆ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಮನೆಗೆ ಶಿಫ್ಟ್ ಆಗಿದ್ದರು. ಅದಾ ಶರ್ಮಾ ಕೈತುಂಬ ಸಂಪಾದನೆ ಮಾಡುತ್ತಿದ್ದಾರೆ. ಅವರು ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿಲ್ಲ.

ಅದಾ ಶರ್ಮಾ ಮುಂಬೈನಲ್ಲಿ ಜನಿಸಿದರು. ಅಲ್ಲಿಯೇ ಆರಂಭಿಕ ಶಿಕ್ಷಣವನ್ನು ಮಾಡಿದರು. ಅದಾ ಶರ್ಮಾ ಬಾಲ್ಯದಲ್ಲಿ ನಟಿಯಾಗಬೇಕೆಂದು ಕನಸು ಕಂಡಿದ್ದರು. ನಟಿಯಾಗಬೇಕೆಂಬ ಆಸೆಯಿಂದ ಅದಾ ಕೂಡ ಶಿಕ್ಷಣದಲ್ಲಿ ಹೆಚ್ಚು ಆಸಕ್ತಿ ವಹಿಸಲಿಲ್ಲ. ವಿದ್ಯಾಭ್ಯಾಸ ಮುಗಿಸಿ ನಟಿಯಾಗುವಂತೆ ಅದಾ ಶರ್ಮಾ ಪೋಷಕರು ಸಲಹೆ ನೀಡಿದ್ದರು.

ಅದಾ ತನ್ನ ಶಾಲಾ ಶಿಕ್ಷಣವನ್ನು ಮುಗಿಸಿದ ನಂತರ 12 ನೇ ತರಗತಿಯವರೆಗೆ ಓದಿದರು. ಅದರ ನಂತರ ನಟಿ ಉನ್ನತ ಶಿಕ್ಷಣವನ್ನು ಮಾಡಲೇ ಇಲ್ಲ. ಅದಾ ಓದಿದ್ದು 12ನೇ ತರಗತಿವರೆಗೆ ಮಾತ್ರ. 12ನೇ ತರಗತಿವರೆಗೆ ವಿದ್ಯಾಭ್ಯಾಸ ಮುಗಿಸಿದ ಅದಾ ನಟನೆಗೆ ಪಾದಾರ್ಪಣೆ ಮಾಡಿದರು. ನಟನೆಯ ಜೊತೆಗೆ ಅದಾ ನೃತ್ಯ ಪಾಠವನ್ನೂ ತೆಗೆದುಕೊಳ್ಳುತ್ತಿದ್ದರು.

ಅದಾ ಶರ್ಮಾ ಕಥಕ್ ನೃತ್ಯದಲ್ಲಿ ತರಬೇತಿ ಪಡೆದಿದ್ದಾರೆ. ಕಥಕ್ ಹೊರತುಪಡಿಸಿ, ನಟಿ ಅನೇಕ ರೀತಿಯ ನೃತ್ಯಗಳನ್ನು ಮಾಡುತ್ತಾರೆ. ಅದಾ ಶರ್ಮಾ ಅವರು ವಿಕ್ರಮ್ ಭಟ್ ನಿರ್ದೇಶನದ ‘1920’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ತಮ್ಮ ಮೊದಲ ಚಿತ್ರದಲ್ಲಿ ಬಲವಾದ ಅಭಿನಯವನ್ನು ನೀಡಿದ ನಂತರ, ನಟಿ ಹಿಂತಿರುಗಿ ನೋಡಲಿಲ್ಲ.

ಅದಾ ಶರ್ಮಾ ಅವರ ಆಸ್ತಿ 10ರಿಂದ 12 ಕೋಟಿ ರೂಪಾಯಿ ಇದೆ. ಅವರು ಚಲನಚಿತ್ರಗಳು, ಜಾಹೀರಾತುಗಳು ಮತ್ತು ಸಾಮಾಜಿಕ ಜಾಲತಾಣದ ಮೂಲಕ ಹಣವನ್ನು ಗಳಿಸುತ್ತಾರೆ. ಸದ್ಯ ಅದಾ ಶರ್ಮಾ ಮಾತ್ರ ಎಲ್ಲೆಡೆ ಚರ್ಚೆಯಾಗುತ್ತಿದೆ. ಅದಾ ಸೋಶಿಯಲ್ ಮೀಡಿಯಾದಲ್ಲೂ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ: ಸುಶಾಂತ್ ನಿಧನರಾದ ಮನೆಯಲ್ಲಿ ಅದಾ ಶರ್ಮಾ ವಾಸ; ಅನುಭವ ತಿಳಿಸಿದ ನಟಿ

ಅದಾ ಶರ್ಮಾ ಅವರ ಮುಂಬರುವ ಚಿತ್ರದ ಕುರಿತು ಮಾತನಾಡುವುದಾದರೆ ಶೀಘ್ರದಲ್ಲೇ ‘ತುಮ್ಕೋ ಮೇರಿ ಕಸಮ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿ ಇಂದಿರಾ IVF ಸಂಸ್ಥಾಪಕ ಡಾ. ಅಜಯ್ ಮುರ್ದಿಯಾ ಅವರ ಜೀವನದ ಬಗ್ಗೆ ಇರಲಿದೆ. ಅದಾ ಶರ್ಮಾ ಜೊತೆಗೆ ಇಶ್ವಕ್ ಸಿಂಗ್ ಮತ್ತು ನಟ ಅನುಪಮ್ ಖೇರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:42 am, Wed, 21 August 24

ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್