AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಸಂಕಷ್ಟ; ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇಸ್

The Kerala Story Movie: ಮೇ 5ರಂದು ‘ದಿ ಕೇರಳ ಸ್ಟೋರಿ’ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಕೆಲವು ವಿವಾದಾತ್ಮಕ ಅಂಶ ಇದೆ ಎನ್ನುವ ಆರೋಪ ಕೇಳಿ ಬಂದಿದೆ. ಹೀಗಾಗಿ ಸಿನಿಮಾಗೆ ತಡೆ ನೀಡಿ ಎನ್ನುವ ಆಗ್ರಹ ಕೇಳಿ ಬಂದಿದೆ.

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಸಂಕಷ್ಟ; ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇಸ್
ಅದಾ ಶರ್ಮಾ
TV9 Web
| Edited By: |

Updated on: May 09, 2023 | 12:15 PM

Share

‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story) ಮೇ 5ರಂದು ರಿಲೀಸ್ ಆಗಿ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ತಡೆನೀಡಬೇಕು ಎಂದು ಅನೇಕ ಶಕ್ತಿಗಳು ಪ್ರಯತ್ನಿಸುತ್ತಿವೆ. ಈ ಸಿನಿಮಾಗೆ ತಡೆನೀಡುವಂತೆ ಇತ್ತೀಚೆಗೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಆಗಿತ್ತು. ಆದರೆ, ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿತ್ತು. ಜೊತೆಗೆ ಹೈಕೋರ್ಟ್​​ಗೆ ತೆರಳುವಂತೆ ನಿರ್ದೇಶನ ನೀಡಿತ್ತು. ಅಲ್ಲಿಯೂ ಅರ್ಜಿದಾರರಿಗೆ ಹಿನ್ನಡೆ ಆಯಿತು. ಈ ಕಾರಣಕ್ಕೆ ಮತ್ತೆ ಸುಪ್ರೀಂಕೋರ್ಟ್​ನಲ್ಲಿ (Supreme Court) ಈ ಬಗ್ಗೆ ಅರ್ಜಿ ಸಲ್ಲಿಕೆ ಆಗಿದೆ. ಕೇರಳ ಹೈಕೋರ್ಟ್​ನ ತೀರ್ಪನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಲಾಗಿದೆ.

ಮೇ 5ರಂದು ‘ದಿ ಕೇರಳ ಸ್ಟೋರಿ’ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಕೆಲವು ವಿವಾದಾತ್ಮಕ ಅಂಶ ಇದೆ ಎನ್ನುವ ಆರೋಪ ಕೇಳಿ ಬಂದಿದೆ. ಹೀಗಾಗಿ ಸಿನಿಮಾಗೆ ತಡೆ ನೀಡಿ ಎನ್ನುವ ಆಗ್ರಹ ಕೇಳಿ ಬಂದಿದೆ. ಈ ಸಿನಿಮಾ ಪ್ರದರ್ಶನ ನಿಲ್ಲಿಸಬೇಕು ಎಂದು ಕೇರಳ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಆಗಿತ್ತು. ಆದರೆ, ಸಿನಿಮಾಗೆ ತಡೆ ನೀಡಲು ಕೇರಳ ಹೈಕೋರ್ಟ್​​ ನಿರಾಕರಿಸಿತ್ತು. ಈಗ ಇದನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ‘ಕಾಶ್ಮೀರ್ ಫೈಲ್ಸ್​​ನ ವಿರೋಧಿಸಿದವರೇ ಕೇರಳ ಸ್ಟೋರಿಯನ್ನೂ ಟೀಕಿಸುತ್ತಿದ್ದಾರೆ’; ಅನುಪಮ್ ಖೇರ್

ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಪಿಎಸ್​ ನರಸಿಂಹ ಅವರನ್ನು ಒಳಗೊಂಡ ಪೀಠ ಈ ಮೇಲ್ಮನವಿಯನ್ನು ಸ್ವೀಕರಿಸಿದೆ. ಮೇ 15ಕ್ಕೆ ವಿಚಾರಣೆ ನಡೆಸಲು ಕೋರ್ಟ್ ಸಮ್ಮತಿಸಿದೆ. ಒಂದೊಮ್ಮೆ ಸುಪ್ರೀಂಕೋರ್ಟ್ ಪ್ರದರ್ಶನಕ್ಕೆ ತಡೆ ನೀಡಿದರೆ ಚಿತ್ರಕ್ಕೆ ಹಿನ್ನಡೆ ಉಂಟಾಗಲಿದೆ.

ಹೈಕೋರ್ಟ್ ಹೇಳಿದ್ದೇನು?

ಮೇ 5ರಂದು ಕೇರಳ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಸಿತ್ತು. ನ್ಯಾಯಮೂರ್ತಿ ಎನ್​ ನಗರೇಶ್ ಹಾಗೂ ಸೋಫಿ ಥಾಮಸ್ ಅರ್ಜಿ ವಿಚಾರಣೆ ನಡೆಸಿದ್ದರು. ‘ನೈಜ ಘಟನೆಯಿಂದ ಪ್ರೇರಿತ ಎಂದು ಸಿನಿಮಾದಲ್ಲಿ ಉಲ್ಲೇಖ ಆಗಿದೆ. ಸೆನ್ಸಾರ್ ಮಂಡಳಿ ಕೂಡ ಸಿನಿಮಾ ನೋಡಿ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ. ನಾವು ಕೂಡ ಸಿನಿಮಾದ ಟ್ರೇಲರ್ ನೋಡಿದ್ದೇವೆ. ಈ ಸಿನಿಮಾದಲ್ಲಿ ಆಕ್ಷೇಪಾರ್ಹ ವಿಚಾರ ಇದೆ ಎಂದು ಅನಿಸಿಲ್ಲ’ ಎಂದು ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತ್ತು. ಕೇರಳದಲ್ಲಿ 32 ಸಾವಿರ ಜನರು ಮತಾಂತರಗೊಂಡಿದ್ದಾರೆ ಎಂದು ಟೀಸರ್​​ನಲ್ಲಿ ಹೇಳಲಾಗಿತ್ತು. ಆ ಟೀಸರ್ ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಆಗಿದೆ. ಈ ವಿಡಿಯೋನ ಕೋರ್ಟ್​​ಗೆ ಸಲ್ಲಿಸುವಂತೆ ನಿರ್ಮಾಪಕರಿಗೆ ಸೂಚಿಸಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?