AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: 2ನೇ ದಿನ ‘ದಿ ಕೇರಳ ಸ್ಟೋರಿ’ ಸಿನಿಮಾಗೆ 12 ಕೋಟಿ ರೂಪಾಯಿ ಕಲೆಕ್ಷನ್​; ಇನ್ನೂ ಹೆಚ್ಚಾಗಲಿದೆ ಕಮಾಯಿ

The Kerala Story Box Office Collection: ಅದಾ ಶರ್ಮಾ ಮುಖ್ಯ ಭೂಮಿಕೆ ನಿಭಾಯಿಸಿರುವ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ವಿವಾದಾತ್ಮಕ ಕಥಾಹಂದರ ಇದೆ. ಮತಾಂತರದ ಕುರಿತು ಈ ಚಿತ್ರದಲ್ಲಿ ತೋರಿಸಲಾಗಿದೆ.

The Kerala Story: 2ನೇ ದಿನ ‘ದಿ ಕೇರಳ ಸ್ಟೋರಿ’ ಸಿನಿಮಾಗೆ 12 ಕೋಟಿ ರೂಪಾಯಿ ಕಲೆಕ್ಷನ್​; ಇನ್ನೂ ಹೆಚ್ಚಾಗಲಿದೆ ಕಮಾಯಿ
ಅದಾ ಶರ್ಮಾ
ಮದನ್​ ಕುಮಾರ್​
|

Updated on: May 07, 2023 | 1:33 PM

Share

ಮೇ 5ರಂದು ಬಿಡುಗಡೆಯಾದ ದಿ ಕೇರಳ ಸ್ಟೋರಿ’ (The Kerala Story) ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ಹಲವು ಕಾರಣಗಳಿಗಾಗಿ ಈ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಸಖತ್​ ಸದ್ದು ಮಾಡುತ್ತಿದೆ. ಮೊದಲ ದಿನ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 8 ಕೋಟಿ ರೂಪಾಯಿ ಕಲೆಕ್ಷನ್​ (Box Office Collection) ಆಗಿತ್ತು. ಎರಡನೇ ದಿನ ಕಲೆಕ್ಷನ್​ನಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ನಿರ್ಮಾಪಕರಿಗೆ ಬಹಳ ಖುಷಿ ಆಗಿದೆ. ದಿನದಿಂದ ದಿನಕ್ಕೆ ಕಲೆಕ್ಷನ್​ ಹೆಚ್ಚುತ್ತಿರುವುದರಿಂದ ಅಂತಿಮವಾಗಿ ಈ ಚಿತ್ರದ ಗಳಿಕೆ ಎಷ್ಟಾಗಲಿದೆ ಎಂಬ ಕೌತುಕ ಮೂಡಿದೆ. ಎರಡನೇ ದಿನವಾದ ಶನಿವಾರ (ಮೇ 6) ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ 12 ಕೋಟಿ ರೂಪಾಯಿ ಗಳಿಸಿದೆ. ಅಲ್ಲಿಗೆ, ಚಿತ್ರದ ಒಟ್ಟು ಕಲೆಕ್ಷನ್ (The Kerala Story Collection)​ 20 ಕೋಟಿ ರೂಪಾಯಿ ಆಗಿದೆ ಎಂದು ಟ್ರೇಡ್​ ವಿಶ್ಲೇಷಕ ರಮೇಶ್​ ಬಾಲಾ ಅವರು ಸೋಶಿಯಲ್​ ಮೀಡಿಯಾ​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಅದಾ ಶರ್ಮಾ ಮುಖ್ಯ ಭೂಮಿಕೆ ನಿಭಾಯಿಸಿರುವ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ವಿವಾದಾತ್ಮಕ ಕಥಾಹಂದರ ಇದೆ. ಐಸಿಎಸ್​ ಭಯೋತ್ಪಾಕದ ಸಂಘಟನೆಗಳ ಸಂಚಿನಿಂದ ಕೇರಳದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್​ ಯುವತಿಯರ ಮತಾಂತರ ಮಾಡಲಾಗುತ್ತಿದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ‘ದಿ ಕೇರಳ ಸ್ಟೋರಿ’ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದದ ಚರ್ಚೆ ಜೋರಾಗಿದೆ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
Image
‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?
Image
‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ, ಅಲ್ಲಾಹ್ ಮಾತ್ರ ಕಾಪಾಡುವವನು’; ಚರ್ಚೆ ಹುಟ್ಟುಹಾಕಿದ ‘ದಿ ಕೇರಳ ಸ್ಟೋರಿ’ ಟ್ರೇಲರ್
Image
The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

ನಟಿ ಅದಾ ಶರ್ಮಾ ಅವರು ಈವರೆಗೆ ಕಲರ್​ಫುಲ್​ ಆದಂತಹ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಒಂದು ಭಿನ್ನವಾದ ಪಾತ್ರ ಮಾಡಿದ್ದಾರೆ. ಆ ಮೂಲಕ ಸುದ್ದಿ ಆಗುತ್ತಿದ್ದಾರೆ. ಶಾಲಿನಿ ಉನ್ನಿಕೃಷ್ಣನ್​ ಅಲಿಯಾಸ್​ ಫಾತಿಮಾ ಎಂಬ ಪಾತ್ರದಲ್ಲಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಹಲವು ಶೇಡ್​ಗಳನ್ನು ಹೊಂದಿರುವ ಈ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ನೋಡುಗರಿಂದ ಅವರಿಗೆ ಮೆಚ್ಚುಗೆ ಸಿಕ್ಕಿದೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ

ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಬಿಡುಗಡೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ವಿವಾದಕ್ಕೆ ಕಾರಣ ಆಗಿವೆ. ವಿಮರ್ಶಕರ ವಲಯದಲ್ಲಿ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದಕ್ಕೆ ಕಾರಣ ಆಗಿತ್ತು. ‘ಕೇವಲ ಟ್ರೇಲರ್​ ನೋಡಿ ಮಾತನಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿದ ಬಳಿಕ ಅಭಿಪ್ರಾಯ ತಿಳಿಸಿ’ ಎಂದು ಅದಾ ಶರ್ಮಾ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್