AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ ತಗ್ಗುವ ಲಕ್ಷಣವೇ ಇಲ್ಲ; 7 ದಿನಕ್ಕೆ 81 ಕೋಟಿ ರೂ. ಗಳಿಸಿದ ಕಾಂಟ್ರವರ್ಸಿ ಚಿತ್ರ

The Kerala Story Box Office Collection: ‘ದಿ ಕೇರಳ ಸ್ಟೋರಿ’ ಚಿತ್ರದ ಅಬ್ಬರ ಇನ್ನೂ ಒಂದಷ್ಟು ದಿನಗಳ ಕಾಲ ಮುಂದುವರಿಯಲಿದೆ. ನಿರೀಕ್ಷೆಗಿಂತಲೂ ಚೆನ್ನಾಗಿ ಈ ಚಿತ್ರ ಕಮಾಯಿ ಮಾಡುತ್ತಿದೆ.

The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ ತಗ್ಗುವ ಲಕ್ಷಣವೇ ಇಲ್ಲ; 7 ದಿನಕ್ಕೆ 81 ಕೋಟಿ ರೂ. ಗಳಿಸಿದ ಕಾಂಟ್ರವರ್ಸಿ ಚಿತ್ರ
ದಿ ಕೇರಳ ಸ್ಟೋರಿ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: May 12, 2023 | 1:05 PM

Share

ಮುಖ್ಯಾಂಶಗಳು

  • ಬಿಡುಗಡೆಯಾಗಿ 7 ದಿನ ಕಳೆದರೂ ‘ದಿ ಕೇರಳ ಸ್ಟೋರಿ’ ಸಿನಿಮಾದ ಹವಾ ಕಡಿಮೆ ಆಗಿಲ್ಲ.
  • ಲವ್​ ಜಿಹಾದ್​ ಮತ್ತು ಮತಾಂತರದ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ.
  • 7 ದಿನಕ್ಕೆ ಒಟ್ಟು 81.36 ಕೋಟಿ ರೂಪಾಯಿ ಗಳಿಸುವ ಮೂಲಕ ಈ ಚಿತ್ರ ಬ್ಲಾಕ್​ ಬಸ್ಟರ್​ ಎನಿಸಿಕೊಂಡಿದೆ

ಬಿಡುಗಡೆಯಾಗಿ 7 ದಿನ ಕಳೆದರೂ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಹವಾ ಕಡಿಮೆ ಆಗಿಲ್ಲ. ದಿನದಿಂದ ದಿನಕ್ಕೆ ಈ ಚಿತ್ರದ ಕಲೆಕ್ಷನ್ ಹೆಚ್ಚಾಗುತ್ತಿದೆ. ಸುದೀಪ್ತೋ ಸೇನ್​ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಸ್ಟಾರ್​ ಹೀರೋಗಳ ಸಿನಿಮಾ ರೀತಿಯಲ್ಲಿ ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ (The Kerala Story Collection) ಮಾಡುತ್ತಿದೆ. ದೇಶಾದ್ಯಂತ ಈ ಸಿನಿಮಾದ ಬಗ್ಗೆ ಚರ್ಚೆ ಆಗುತ್ತಿದೆ. ​2023ರ ಯಶಸ್ವಿ ಸಿನಿಮಾಗಳ ಪಟ್ಟಿಗೆ ಈ ಚಿತ್ರ ಕೂಡ ಸೇರ್ಪಡೆ ಆಗಿದೆ. ಮೇ 5ರಂದು ‘ದಿ ಕೇರಳ ಸ್ಟೋರಿ’ ಚಿತ್ರ ತೆರೆ ಕಂಡಿತು. ಅಂದಿನಿಂದ ಇಂದಿನವರೆಗೆ ಉತ್ತಮವಾಗಿ ಪ್ರದರ್ಶನ ಮುಂದುವರಿಸಿದೆ. 7 ದಿನಕ್ಕೆ ಒಟ್ಟು 81.36 ಕೋಟಿ ರೂಪಾಯಿ ಗಳಿಸುವ ಮೂಲಕ ಈ ಚಿತ್ರ ಬ್ಲಾಕ್​ ಬಸ್ಟರ್​ ಎನಿಸಿಕೊಂಡಿದೆ. ನಟಿ ಅದಾ ಶರ್ಮಾ (Adah Sharma) ಅವರು ಈ ಗೆಲುವಿನಿಂದ ಸಖತ್​ ಖುಷಿ ಆಗಿದ್ದಾರೆ. ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ ಅವರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ.

‘ದಿ ಕೇಳರ ಸ್ಟೋರಿ’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ವಿವರ:

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

ಇದನ್ನೂ ಓದಿ:  Adah Sharma: ಬ್ಲೂ ವೇಲ್​ ಕುರಿತ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ; ಈ ಚಿತ್ರದ ಕಥೆ ಏನು?

‘ದಿ ಕೇಳರ ಸ್ಟೋರಿ’ ಚಿತ್ರದ ಅಬ್ಬರ ಇನ್ನೂ ಒಂದಷ್ಟು ದಿನಗಳ ಕಾಲ ಮುಂದುವರಿಯಲಿದೆ. ನಿರೀಕ್ಷೆಗಿಂತಲೂ ಚೆನ್ನಾಗಿ ಈ ಚಿತ್ರ ಕಮಾಯಿ ಮಾಡುತ್ತಿದೆ. ಎರಡನೇ ವೀಕೆಂಡ್​ನಲ್ಲಿ ಭರ್ಜರಿ ಕಲೆಕ್ಷನ್​ ಆಗುವ ಸಾಧ್ಯತೆ ದಟ್ಟವಾಗಿದೆ. ಶೀಘ್ರದಲ್ಲೇ ಈ ಸಿನಿಮಾ ನೂರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ. ಅದಾ ಶರ್ಮಾ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ಸಖತ್​ ಮೈಲೇಜ್​ ಸಿಕ್ಕಿದೆ. ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ.

ಲವ್​ ಜಿಹಾದ್​ ಮತ್ತು ಮತಾಂತರದ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ವಿವಾದಾತ್ಮಕ ಕಥಾಹಂದರ ಇರುವುದರಿಂದ ಬಿಡುಗಡೆಗೂ ಮುನ್ನವೇ ಈ ಚಿತ್ರದ ಬಗ್ಗೆ ಚರ್ಚೆ ಶುರುವಾಗಿತ್ತು. ಕೆಲವು ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನಕ್ಕೆ ಅಡ್ಡಿ ಆಗಿದೆ. ಆದರೂ ಸಹ ಬಾಕ್ಸ್​ ಆಫೀಸ್​ ಕಲೆಕ್ಷನ್​ ತಗ್ಗಿಲ್ಲ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್