AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant: ಮೈಸೂರು ಜೈಲಿನಿಂದಲೇ ರಾಖಿ ಕೊಲ್ಲಲು ಪ್ಲ್ಯಾನ್? ಆದಿಲ್ ಖಾನ್ ಬಗ್ಗೆ ಹೊಸ ಆರೋಪ

ರಾಖಿ ಸಾವಂತ್ ಅವರದ್ದು ವಿಚಿತ್ರ ಸ್ವಭಾವ. ಎಲ್ಲಾ ವಿಚಾರಗಳಲ್ಲೂ ಅವರು ಗಮನ ಸೆಳೆಯಲು ಪ್ರಯತ್ನಿಸುತ್ತಾರೆ. ಚಿಕ್ಕ ವಿಚಾರ ಸಿಕ್ಕರೂ ಅದರಿಂದ ಪ್ರಚಾರ ಪಡೆಯುತ್ತಾರೆ.

Rakhi Sawant: ಮೈಸೂರು ಜೈಲಿನಿಂದಲೇ ರಾಖಿ ಕೊಲ್ಲಲು ಪ್ಲ್ಯಾನ್? ಆದಿಲ್ ಖಾನ್ ಬಗ್ಗೆ ಹೊಸ ಆರೋಪ
ರಾಖಿ ಸಾವಂತ್
ರಾಜೇಶ್ ದುಗ್ಗುಮನೆ
|

Updated on:May 16, 2023 | 11:28 AM

Share

ರಾಖಿ ಸಾವಂತ್ (Rakhi Sawant) ಅವರ ಗೋಳು ಇಂದು ನಾಳೆಗೆ ಮುಗಿಯುವ ರೀತಿ ಕಾಣುತ್ತಿಲ್ಲ. ಒಂದಲ್ಲಾ ಒಂದು ವಿಚಾರ ಇಟ್ಟುಕೊಂಡು ಅವರು ಜನರ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಚಿಕ್ಕ ವಿಚಾರ ಸಿಕ್ಕರೂ ಸಾಕು ಅದನ್ನು ದೊಡ್ಡದಾಗಿ ಮಾಡುತ್ತಾರೆ. ಆದಿಲ್ ಖಾನ್​ ಜೊತೆಗಿನ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದ ಅವರು ನಂತರ ಅದನ್ನು ರಿವೀಲ್ ಮಾಡಿದರು. ಪತಿ ಬಗ್ಗೆ ರಾಖಿ ಸಾವಂತ್ ಹಲವು ಆರೋಪ ಮಾಡಿದ್ದು, ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ಆದಿಲ್​ನ ಅರೆಸ್ಟ್​ ಮಾಡಲಾಗಿದೆ.  ಈಗ ರಾಖಿ ಹೊಸ ಆರೋಪ ಮಾಡಿದ್ದಾರೆ. ‘ನನ್ನನ್ನು ಕೊಲ್ಲಲು ಆದಿಲ್ ಜೈಲಿನಿಂದಲೇ ಪ್ಲಾನ್ ಮಾಡಿದ್ದಾನೆ’ ಎಂದು ಅವರು ಹೇಳಿದ್ದಾರೆ.

ರಾಖಿ ಸಾವಂತ್ ಅವರದ್ದು ವಿಚಿತ್ರ ಸ್ವಭಾವ. ಎಲ್ಲಾ ವಿಚಾರಗಳಲ್ಲೂ ಅವರು ಗಮನ ಸೆಳೆಯಲು ಪ್ರಯತ್ನಿಸುತ್ತಾರೆ. ಚಿಕ್ಕ ವಿಚಾರ ಸಿಕ್ಕರೂ ಅದರಿಂದ ಪ್ರಚಾರ ಪಡೆಯುತ್ತಾರೆ. ಸಲ್ಮಾನ್ ಖಾನ್​ಗೆ ಬೆದರಿಕೆ ಬಂದಾಗ ತಮಗೂ ಬೆದರಿಕೆ ಬಂದಿದೆ ಎಂದು ಹೇಳಿಕೊಂಡು ಓಡಾಡಿದ್ದರು. ಹೆಲ್ಮೆಟ್ ಧರಿಸಿ ರಸ್ತೆ ಮೇಲೆಲ್ಲ ಸುತ್ತಾಡಿದ್ದರು. ಈಗ ಅವರು ಹೊಸ ಡ್ರಾಮಾ ಶುರು ಮಾಡಿದಂತಿದೆ. ಪತಿಯಿಂದ ಬೆದರಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

‘ಆದಿಲ್​ ನನ್ನನ್ನು ಕೊಲ್ಲಲು ಜೈಲಿನಿಂದಲೇ ಸಂಚು ರೂಪಿಸುತ್ತಿದ್ದಾನೆ. ನನ್ನ ಮುಗಿಸಲು ಕಾಂಟ್ರ್ಯಾಕ್ಟ್ ನೀಡಿದ್ದಾನೆ. ನೀನು ನನ್ನನ್ನು ಕೊಲ್ಲಲು ಸಾಧ್ಯವಿಲ್ಲ. ನೀನು ಹೀಗೇಕೆ ಮಾಡುತ್ತಿದ್ದೀಯಾ? ಹಣಕ್ಕಾಗಿಯೇ ಅಥವಾ ದ್ವೇಷಕ್ಕಾಗಿಯೇ?’ ಎಂದು ರಾಖಿ ಪ್ರಶ್ನೆ ಮಾಡಿದ್ದಾರೆ.

‘ಆದಿಲ್ ನಿತ್ಯ ಜೈಲಿನಿಂದ ನನಗೆ ಕರೆ ಮಾಡುತ್ತಾನೆ. ಐ ಲವ್ ಯೂ ಎನ್ನುತ್ತಾನೆ. ನನ್ನನ್ನು ಇಲ್ಲಿಂದ ಬಿಡಿಸು ಎನ್ನುತ್ತಾನೆ. ನಾನು ಅವನನ್ನು ಕ್ಷಮಿಸಿದ್ದೇನೆ. ಆದರೆ, ನಾನು ಅವನನ್ನು ಹತ್ತಿರ ಸೇರಿಸಿಕೊಳ್ಳುವುದಿಲ್ಲ’ ಎಂದು ರಾಖಿ ಹೇಳಿದ್ದಾರೆ.

ಇದನ್ನೂ ಓದಿ: ‘ನಾನು ಹಿಂದೂ ಅಂತ ಆದಿಲ್​ ಖಾನ್​ ಮನೆಯವರು ನನ್ನ ಸೇರಿಸಿಕೊಳ್ತಿಲ್ಲ’; ಮೈಸೂರಲ್ಲಿ ರಾಖಿ ಸಾವಂತ್​ ಕಣ್ಣೀರು

ಫೆಬ್ರವರಿ 7ರಂದು ರಾಖಿ ಸಾವಂತ್ ಪತಿ ಆದಿಲ್​ನ ಅರೆಸ್ಟ್​ ಮಾಡಲಾಯಿತು. ಆದಿಲ್​ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ರಾಖಿ ಸಾವಂತ್ ದೂರಿದ್ದರು. ಅಷ್ಟೇ ಅಲ್ಲ ದೈಹಿಕವಾಗಿ ಆತ ಹಿಂಸೆ ನೀಡಿದ್ದಾನೆ ಎಂದೆಲ್ಲ ಆರೋಪ ಮಾಡಿದ್ದರು ರಾಖಿ. ಹೀಗಾಗಿ, ಆದಿಲ್​ನ ಬಂಧಿಸಲಾಗಿದೆ. ಇರಾನಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪವೂ ಅವರ ಮೇಲಿದೆ. ಸದ್ಯ ಅವರು ಮೈಸೂರಿನ ಜೈಲಿನಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:21 am, Tue, 16 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್