Om Raut: ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​ಗೆ ಮುಂಬೈ ಪೊಲೀಸರಿಂದ​ ಭದ್ರತೆ?

Adipurush Movie: ‘ಆದಿಪುರುಷ್​’ ಸಿನಿಮಾದ ವಿರುದ್ಧ ಜನರ ಅಸಮಾಧಾನ ಹೆಚ್ಚುತ್ತಿದೆ. ಈಗ ಚಿತ್ರದ ನಿರ್ದೇಶಕ ಓಂ ರಾವತ್​ ಅವರಿಗೆ ಪೊಲೀಸ್​ ಭದ್ರತೆ ನೀಡಿರುವ ಬಗ್ಗೆ ಸುದ್ದಿ ಆಗಿದೆ.

Om Raut: ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​ಗೆ ಮುಂಬೈ ಪೊಲೀಸರಿಂದ​ ಭದ್ರತೆ?
ಓಂ ರಾವತ್​
Follow us
|

Updated on: Jun 22, 2023 | 8:33 PM

‘ಆದಿಪುರುಷ್​’ (Adipurush) ಚಿತ್ರತಂಡದವರು ನಿರೀಕ್ಷಿಸಿದ್ದೇ ಬೇರೆ, ಚಿತ್ರ ಬಿಡುಗಡೆ ಬಳಿಕ ಆಗಿದ್ದೇ ಬೇರೆ. ಈ ಸಿನಿಮಾಗೆ ಜನಮೆಚ್ಚುಗೆ ಸಿಗುತ್ತದೆ ಎಂಬುದು ಚಿತ್ರತಂಡದ ಆತ್ಮವಿಶ್ವಾಸವಾಗಿತ್ತು. ಆದರೆ ಅವರಿಗೆ ಜನರಿಂದ ಸಿಕ್ಕಿದ್ದು ಕೇವಲ ಟ್ರೋಲ್​. ರಾಮಾಯಣವನ್ನು ಆಧರಿಸಿ ಈ ಸಿನಿಮಾಗೆ ಓಂ ರಾವತ್​ (Om Raut) ಅವರು ನಿರ್ದೇಶನ ಮಾಡಿದ್ದಾರೆ. ಆದರೆ ಈ ಚಿತ್ರದಲ್ಲಿ ರಾಮಾಯಣದ ಕತೆಯನ್ನು ತಿರುಚಲಾಗಿದೆ ಎಂಬ ಕಾರಣದಿಂದ ಕಟು ಟೀಕೆ ವ್ಯಕ್ತವಾಗಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ವರ್ಗದ ಜನರಿಂದ ಚಿತ್ರತಂಡದವರಿಗೆ ಕೊಲೆ ಬೆದರಿಕೆ (Death Threat) ಕೂಡ ಬಂದಿದೆ. ಆ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ನಿರ್ದೇಶಕ ಓಂ ರಾವತ್​ ಅವರಿಗೆ ಭದ್ರತೆ ಒದಗಿಸಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಮನೋಜ್​ ಮುಂತಶೀರ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಅವರು ಬರೆದ ಸಂಭಾಷಣೆ ತೀರಾ ಕಳಪೆ ಆಗಿವೆ ಎಂಬುದು ಪ್ರೇಕ್ಷಕರ ಆರೋಪ. ಅಲ್ಲದೇ ಸಿನಿಮಾದಲ್ಲಿನ ಅಸಂಬದ್ಧಗಳನ್ನು ಮನೋಜ್​ ಮುಂತಶೀರ್​ ಸಮರ್ಥಿಸಿಕೊಂಡಿದ್ದಾರೆ ಎಂಬುದು ಹಲವರ ಕೋಪಕ್ಕೆ ಕಾರಣ ಆಗಿದೆ. ಅವರಿಗೆ ಕೆಲವರಿಂದ ಕೊಲೆ ಬೆದರಿಕೆ ಕೂಡ ಬಂತು. ಹಾಗಾಗಿ ಮುಂಬೈ ಪೊಲೀಸರು ಮನೋಜ್​ ಮುಂತಶೀರ್​ಗೆ ಭದ್ರತೆ ಒದಗಿಸಿದರು. ಈಗ ನಿರ್ದೇಶಕ ಓಂ ರಾವತ್​ ಅವರಿಗೂ ಭದ್ರತೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Project K: ‘ಆದಿಪುರುಷ್​’ ಟ್ರೋಲ್​ ಮರೆತು ‘ಪ್ರಾಜೆಕ್ಟ್​ ಕೆ’ ಅಪ್​ಡೇಟ್​ ತಿಳಿಯಲು ಕಾದಿರುವ ಪ್ರಭಾಸ್​ ಅಭಿಮಾನಿಗಳು

‘ಮುಂಬೈನಲ್ಲಿ ಇರುವ ಓಂ ರಾವುತ್​ ಅವರ ಕಚೇರಿಯಲ್ಲಿ ಐವರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಓಂ ರಾವತ್​ ಅವರು ಭದ್ರತೆಗಾಗಿ ಬೇಡಿಕೆ ಇಟ್ಟಿದ್ದಾರೋ ಅಥವಾ ಕೊಲೆ ಬೆದರಿಕೆ ಬಂದ ಹಿನ್ನೆಲೆಯಲ್ಲೇ ಸ್ವತಃ ಪೊಲೀಸರೇ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ನೀಡಲು ಮುಂದಾದರೋ ಎಂಬುದು ತಿಳಿದುಬಂದಿಲ್ಲ’ ಎಂದು ಮೂಲಗಳು ತಿಳಿಸಿರುವುದಾಗಿ ‘ಬಾಲಿವುಡ್​ ಹಂಗಾಮಾ’ ವರದಿ ಪ್ರಕಟಿಸಿದೆ. ‘ಆದಿಪುರುಷ್​’ ಚಿತ್ರಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಭಾರಿ ಟೀಕೆಗಳು ಕೇಳಿಬರುತ್ತಿವೆ. ಅದರ ಪರಿಣಾಮವಾಗಿ ಸಿನಿಮಾದ ಕಲೆಕ್ಷನ್​ ಗಣನೀಯವಾಗಿ ತಗ್ಗುತ್ತಿದೆ.

ಇದನ್ನೂ ಓದಿ: Kriti Sanon: ಟ್ರೋಲ್​ಗಳ ನಡುವೆಯೂ ಶಾಲೆ ಮಕ್ಕಳಿಗೆ ಉಚಿತವಾಗಿ ‘ಆದಿಪುರುಷ್​’ ಚಿತ್ರ ತೋರಿಸಲು ಮುಂದಾದ ಕೃತಿ ಸನೋನ್​

ರಾಮಾಯಣ, ಮಹಾಭಾರತದಂತಹ ಕೃತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವಾಗ ಚಿತ್ರತಂಡದವರು ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ‘ಆದಿಪುರುಷ್​’ ತಂಡದವರು ರಾಮಾಯಣದ ಕಥೆಯನ್ನು ಆಧುನೀಕರಣ ಮಾಡಲು ಪ್ರಯತ್ನಿಸಿರುವುದು ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಈ ಸಿನಿಮಾದಲ್ಲಿ ರಾವಣನ ಪುಷ್ಪಕ ವಿಮಾನದ ಬದಲಿಗೆ ದೈತ್ಯಾಕಾರದ ಬಾವಲಿಯನ್ನು ತೋರಿಸಲಾಗಿದೆ. ಆಂಜನೇಯನ ಸಂಭಾಷಣೆಗಳು ತೀರಾ ಆಡುಮಾತಿನಲ್ಲಿವೆ. ಸರಮಾ ಪಾತ್ರವನ್ನು ಗ್ಲಾಮರಸ್​ ಆಗಿ ತೋರಿಸಲಾಗಿದೆ. ಇಂಥ ದೃಶ್ಯಗಳಿಗೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ